ಮಂಡ್ಯ

ಮಂಡ್ಯ: 1.60 ಲಕ್ಷಕ್ಕೆ ಮಾರಾಟವಾದ ಜೋಡಿ ಟಗರು

ಮಂಡ್ಯ: ಇತ್ತೀಚೆಗೆ ಬಂಡೂರು ತಳಿಯ ಟಗರುಗಳಿಗೆ ಭಾರೀ ಬೇಡಿಕೆ ಹೆಚ್ಚಾಗಿದೆ. ಇದಕ್ಕೆ ತಾಜ ಉದಾಹರಣೆ ಎಂಬಂತೆ ಇಲ್ಲೊಂದು ಗ್ರಾಮದಲ್ಲಿ ದಾಖಲೆಯ ಬೆಲೆಗೆ ಬಂಡೂರು ತಳಿಯ ಜೋಡಿ ಟಗರು ಮಾರಾಟವಾಗಿದೆ.

ನಾವೆಲ್ಲಾ ಸಹಜವಾಗಿ ಕುರಿ ಅಂದ್ರೆ ಸುಮಾರು 15 ರಿಂದ 20 ಸಾವಿರ ರೂ ಬೆಲೆ ಅಂದುಕೊಳ್ತಿವಿ. ಆದ್ರೆ ಈಗ ಆಗಲ್ಲ, ಬಂಡೂರು ತಳಿಯ ಕುರಿಗಳಿಗೆ ಎಲ್ಲಿಲ್ಲದ ಬೇಡಿಕೆ ಹೆಚ್ಚಾಗಿದೆ. ಹೀಗಾಗಿ ಬಂಡೂರು ತಳಿಯ ಕುರಿಗಳನ್ನು ಲಕ್ಷ ಲಕ್ಷ ಹಣ ಕೊಟ್ಟು ಖರೀದಿ ಮಾಡ್ತಿದ್ದಾರೆ. ಈಗ ಇಂತಹದ್ದೊಂದು ಪ್ರಸಂಗ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಉಲ್ಲಾಸ್ ಗೌಡ ಎಂಬ ಯುವಕ ಸಾಕಿದ ಬಂಡೂರು ತಳಿಯ ಜೋಡಿ ಟಗರು ಬರೋಬ್ಬರಿ 1.60 ಲಕ್ಷಕ್ಕೆ ಮಾರಾಟವಾಗಿದೆ.

ವಿದ್ಯಾರ್ಥಿಯಾಗಿರುವ ಉಲ್ಲಾಸ್ ಬಂಡೂರು ತಳಿಯ ಕುರಿಗಳು ನಶಿಸಬಾರದು ಎಂಬ ನಿಟ್ಟಿನಲ್ಲಿ ಬಂಡೂರು ತಳಿಯ ಕುರಿಗಳನ್ನು ಸಾಕಾಣಿ ಮಾಡುತ್ತಿದ್ದಾನೆ. ಹೀಗಾಗಿ ಉಲ್ಲಾಸ್ ಬಳಿ ವಡ್ಡರಹಳ್ಳಿ ಗ್ರಾಮದ ರೈತರಾದ ಕುಮಾರ್ ಹಾಗೂ ಕುಳ್ಳೇಗೌಡ ದುಬಾರಿ ಹಣ ಕೊಟ್ಟು ಜೋಡಿ ಟಗರುಗಳ‌ನ್ನು ಖರೀದಿಸಿದ್ದಾರೆ.

ಇನ್ನು ಟಗರು ಖರೀದಿ ಬಳಿಕ ಗ್ರಾಮದಲ್ಲಿ ಟಗರುಗಳನ್ನು ಮೆರವಣಿಗೆ ಮಾಡಿ ಖರೀದಿ ಮಾಡಿದ ರೈತರಿಗೆ ಅಭಿನಂದನೆ ಸಲ್ಲಿಸಿ ಟಗರುಗಳ‌ನ್ನು ಹಸ್ತಾಂತರ ಮಾಡಲಾಗಿದೆ. ಈ ಹಿಂದೆ ಉಲ್ಲಾಸ್ ಅವರ ಕುಟುಂಬದವರು ಇದೇ ರೀತಿ ಬಂಡೂರು ಕುರಿಗಳನ್ನು ಸಾಕಿ ದುಬಾರಿ ಬೆಲೆಗೆ ಮಾರಾಟ ಮಾಡಿದ್ದರು‌. ಈಗ ಉಲ್ಲಾಸ್ ಕೂಡ ದುಬಾರಿ ಬೆಲೆಗೆ ಜೋಡಿ ಟಗರು ಮಾರಾಟ ಮಾಡುವ ಮೂಲಕ ಮತ್ತಷ್ಟು ಕುರಿಗಳ ಸಾಕಾಣೆ ಮಾಡುವ ವಿಶ್ವಾಸ ಹೊಂದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಆಂದೋಲನ ವರದಿ ಫಲಶ್ರುತಿ : ಪಚ್ಚೆದೊಡ್ಡಿ ಗ್ರಾಮದ ಶಾಲೆ ಮಕ್ಕಳಿಗೆ ವಾಹನ ಸೌಲಭ್ಯ

ಡಿಸಿ ಶಿಲ್ಪಾನಾಗ್‌ ಸೂಚನೆ ಮೇರೆಗೆ ಅರಣ್ಯ ಇಲಾಖೆಯ ಸಫಾರಿ ವಾಹನದಲ್ಲಿ ಮಕ್ಕಳನ್ನು ಕರೆತರಲು ಕ್ರಮ ಹನೂರು : ಅಂತೂ ಇಂತೂ…

1 min ago

ನಾನೇ ವಿಪಕ್ಷ ನಾಯಕ ಎಂದ ಯತ್ನಾಳ್

ಬೆಳಗಾವಿ : ನಾನು ಅಡ್ಜಸ್ಟ್ ಮೆಂಟ್ ರಾಜಕಾರಣಿ ಅಲ್ಲ, ನಿಜವಾದ ವಿರೋಧ ಪಕ್ಷದ ನಾಯಕ ನಾನೇ ಎಂದು ವಿಧಾನಸಭೆ ಕಲಾಪದ…

9 mins ago

ಬಿಳಿಗಿರಿ ರಂಗನಬೆಟ್ಟ ಅಭಿವೃದ್ಧಿ ಕಾರ್ಯ ಪರಿಶೀಲನೆಯಲ್ಲಿದೆ : ಸಚಿವ .ಎಚ್.ಕೆ.ಪಾಟೀಲ್‌

ಬೆಳಗಾವಿ : ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಪುರಾಣ ಪ್ರಸಿದ್ಧ ಕ್ಷೇತ್ರವಾಗಿರುವ ಬಿಳಿಗಿರಿ ರಂಗನಬೆಟ್ಟ ಪ್ರದೇಶವನ್ನು 5.75…

23 mins ago

ರೈತರಿಗೆ ಗುಂಡು ಹೊಡೆಸಿದ್ದ ಬಿಜೆಪಿಗರಿಂದ ಕಾಂಗ್ರೆಸ್ ಪಾಠ ಕಲಿಯಬೇಕಿಲ್ಲ : ಸಚಿವೆ ಹೆಬ್ಬಾಳಕರ್‌

ಬೆಳಗಾವಿ : ಬಿಜೆಪಿ ನಾಯಕರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ‌.‌ ಅವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿ, ಯಾರು…

1 hour ago

ಮೈಸೂರಿನಲ್ಲಿ 300 ಎಕರೆ ಜಮೀನಿನಲ್ಲಿ ಲೇಔಟ್‌ ನಿರ್ಮಾಣ: ಸಚಿವ ಭೈರತಿ ಸುರೇಶ್‌

ಬೆಳಗಾವಿ: ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿದರೆ ಅತಿವೇಗವಾಗಿ ಬೆಳೆಯುತ್ತಿರುವ ಮೈಸೂರಿನಲ್ಲಿ ಸುಮಾರು 300 ಎಕರೆ ಜಮೀನಿನಲ್ಲಿ ಲೇಔಟ್ ನಿರ್ಮಾಣ ಮಾಡಿ ಸಾರ್ವಜನಿಕರಿಗೆ…

2 hours ago

ಋತುಚಕ್ರ ರಜೆ: ತಡೆಯಾಜ್ಞೆ ಮಾರ್ಪಡಿಸಿ ನಾಳೆಗೆ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿತ್ತು. ಆದರೆ ಈ…

2 hours ago