ಮಂಡ್ಯ

ಮಂಡ್ಯ: 1.60 ಲಕ್ಷಕ್ಕೆ ಮಾರಾಟವಾದ ಜೋಡಿ ಟಗರು

ಮಂಡ್ಯ: ಇತ್ತೀಚೆಗೆ ಬಂಡೂರು ತಳಿಯ ಟಗರುಗಳಿಗೆ ಭಾರೀ ಬೇಡಿಕೆ ಹೆಚ್ಚಾಗಿದೆ. ಇದಕ್ಕೆ ತಾಜ ಉದಾಹರಣೆ ಎಂಬಂತೆ ಇಲ್ಲೊಂದು ಗ್ರಾಮದಲ್ಲಿ ದಾಖಲೆಯ ಬೆಲೆಗೆ ಬಂಡೂರು ತಳಿಯ ಜೋಡಿ ಟಗರು ಮಾರಾಟವಾಗಿದೆ.

ನಾವೆಲ್ಲಾ ಸಹಜವಾಗಿ ಕುರಿ ಅಂದ್ರೆ ಸುಮಾರು 15 ರಿಂದ 20 ಸಾವಿರ ರೂ ಬೆಲೆ ಅಂದುಕೊಳ್ತಿವಿ. ಆದ್ರೆ ಈಗ ಆಗಲ್ಲ, ಬಂಡೂರು ತಳಿಯ ಕುರಿಗಳಿಗೆ ಎಲ್ಲಿಲ್ಲದ ಬೇಡಿಕೆ ಹೆಚ್ಚಾಗಿದೆ. ಹೀಗಾಗಿ ಬಂಡೂರು ತಳಿಯ ಕುರಿಗಳನ್ನು ಲಕ್ಷ ಲಕ್ಷ ಹಣ ಕೊಟ್ಟು ಖರೀದಿ ಮಾಡ್ತಿದ್ದಾರೆ. ಈಗ ಇಂತಹದ್ದೊಂದು ಪ್ರಸಂಗ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಉಲ್ಲಾಸ್ ಗೌಡ ಎಂಬ ಯುವಕ ಸಾಕಿದ ಬಂಡೂರು ತಳಿಯ ಜೋಡಿ ಟಗರು ಬರೋಬ್ಬರಿ 1.60 ಲಕ್ಷಕ್ಕೆ ಮಾರಾಟವಾಗಿದೆ.

ವಿದ್ಯಾರ್ಥಿಯಾಗಿರುವ ಉಲ್ಲಾಸ್ ಬಂಡೂರು ತಳಿಯ ಕುರಿಗಳು ನಶಿಸಬಾರದು ಎಂಬ ನಿಟ್ಟಿನಲ್ಲಿ ಬಂಡೂರು ತಳಿಯ ಕುರಿಗಳನ್ನು ಸಾಕಾಣಿ ಮಾಡುತ್ತಿದ್ದಾನೆ. ಹೀಗಾಗಿ ಉಲ್ಲಾಸ್ ಬಳಿ ವಡ್ಡರಹಳ್ಳಿ ಗ್ರಾಮದ ರೈತರಾದ ಕುಮಾರ್ ಹಾಗೂ ಕುಳ್ಳೇಗೌಡ ದುಬಾರಿ ಹಣ ಕೊಟ್ಟು ಜೋಡಿ ಟಗರುಗಳ‌ನ್ನು ಖರೀದಿಸಿದ್ದಾರೆ.

ಇನ್ನು ಟಗರು ಖರೀದಿ ಬಳಿಕ ಗ್ರಾಮದಲ್ಲಿ ಟಗರುಗಳನ್ನು ಮೆರವಣಿಗೆ ಮಾಡಿ ಖರೀದಿ ಮಾಡಿದ ರೈತರಿಗೆ ಅಭಿನಂದನೆ ಸಲ್ಲಿಸಿ ಟಗರುಗಳ‌ನ್ನು ಹಸ್ತಾಂತರ ಮಾಡಲಾಗಿದೆ. ಈ ಹಿಂದೆ ಉಲ್ಲಾಸ್ ಅವರ ಕುಟುಂಬದವರು ಇದೇ ರೀತಿ ಬಂಡೂರು ಕುರಿಗಳನ್ನು ಸಾಕಿ ದುಬಾರಿ ಬೆಲೆಗೆ ಮಾರಾಟ ಮಾಡಿದ್ದರು‌. ಈಗ ಉಲ್ಲಾಸ್ ಕೂಡ ದುಬಾರಿ ಬೆಲೆಗೆ ಜೋಡಿ ಟಗರು ಮಾರಾಟ ಮಾಡುವ ಮೂಲಕ ಮತ್ತಷ್ಟು ಕುರಿಗಳ ಸಾಕಾಣೆ ಮಾಡುವ ವಿಶ್ವಾಸ ಹೊಂದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಾದಕ ವಸ್ತು ಪತ್ತೆ ; ನಾಲ್ವರು ಸಿಸಿಬಿ ವಶಕ್ಕೆ

ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…

12 hours ago

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

14 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

14 hours ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

14 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

15 hours ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

15 hours ago