ಮಂಡ್ಯ

ಮಂಡ್ಯ: 1.60 ಲಕ್ಷಕ್ಕೆ ಮಾರಾಟವಾದ ಜೋಡಿ ಟಗರು

ಮಂಡ್ಯ: ಇತ್ತೀಚೆಗೆ ಬಂಡೂರು ತಳಿಯ ಟಗರುಗಳಿಗೆ ಭಾರೀ ಬೇಡಿಕೆ ಹೆಚ್ಚಾಗಿದೆ. ಇದಕ್ಕೆ ತಾಜ ಉದಾಹರಣೆ ಎಂಬಂತೆ ಇಲ್ಲೊಂದು ಗ್ರಾಮದಲ್ಲಿ ದಾಖಲೆಯ ಬೆಲೆಗೆ ಬಂಡೂರು ತಳಿಯ ಜೋಡಿ ಟಗರು ಮಾರಾಟವಾಗಿದೆ.

ನಾವೆಲ್ಲಾ ಸಹಜವಾಗಿ ಕುರಿ ಅಂದ್ರೆ ಸುಮಾರು 15 ರಿಂದ 20 ಸಾವಿರ ರೂ ಬೆಲೆ ಅಂದುಕೊಳ್ತಿವಿ. ಆದ್ರೆ ಈಗ ಆಗಲ್ಲ, ಬಂಡೂರು ತಳಿಯ ಕುರಿಗಳಿಗೆ ಎಲ್ಲಿಲ್ಲದ ಬೇಡಿಕೆ ಹೆಚ್ಚಾಗಿದೆ. ಹೀಗಾಗಿ ಬಂಡೂರು ತಳಿಯ ಕುರಿಗಳನ್ನು ಲಕ್ಷ ಲಕ್ಷ ಹಣ ಕೊಟ್ಟು ಖರೀದಿ ಮಾಡ್ತಿದ್ದಾರೆ. ಈಗ ಇಂತಹದ್ದೊಂದು ಪ್ರಸಂಗ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಉಲ್ಲಾಸ್ ಗೌಡ ಎಂಬ ಯುವಕ ಸಾಕಿದ ಬಂಡೂರು ತಳಿಯ ಜೋಡಿ ಟಗರು ಬರೋಬ್ಬರಿ 1.60 ಲಕ್ಷಕ್ಕೆ ಮಾರಾಟವಾಗಿದೆ.

ವಿದ್ಯಾರ್ಥಿಯಾಗಿರುವ ಉಲ್ಲಾಸ್ ಬಂಡೂರು ತಳಿಯ ಕುರಿಗಳು ನಶಿಸಬಾರದು ಎಂಬ ನಿಟ್ಟಿನಲ್ಲಿ ಬಂಡೂರು ತಳಿಯ ಕುರಿಗಳನ್ನು ಸಾಕಾಣಿ ಮಾಡುತ್ತಿದ್ದಾನೆ. ಹೀಗಾಗಿ ಉಲ್ಲಾಸ್ ಬಳಿ ವಡ್ಡರಹಳ್ಳಿ ಗ್ರಾಮದ ರೈತರಾದ ಕುಮಾರ್ ಹಾಗೂ ಕುಳ್ಳೇಗೌಡ ದುಬಾರಿ ಹಣ ಕೊಟ್ಟು ಜೋಡಿ ಟಗರುಗಳ‌ನ್ನು ಖರೀದಿಸಿದ್ದಾರೆ.

ಇನ್ನು ಟಗರು ಖರೀದಿ ಬಳಿಕ ಗ್ರಾಮದಲ್ಲಿ ಟಗರುಗಳನ್ನು ಮೆರವಣಿಗೆ ಮಾಡಿ ಖರೀದಿ ಮಾಡಿದ ರೈತರಿಗೆ ಅಭಿನಂದನೆ ಸಲ್ಲಿಸಿ ಟಗರುಗಳ‌ನ್ನು ಹಸ್ತಾಂತರ ಮಾಡಲಾಗಿದೆ. ಈ ಹಿಂದೆ ಉಲ್ಲಾಸ್ ಅವರ ಕುಟುಂಬದವರು ಇದೇ ರೀತಿ ಬಂಡೂರು ಕುರಿಗಳನ್ನು ಸಾಕಿ ದುಬಾರಿ ಬೆಲೆಗೆ ಮಾರಾಟ ಮಾಡಿದ್ದರು‌. ಈಗ ಉಲ್ಲಾಸ್ ಕೂಡ ದುಬಾರಿ ಬೆಲೆಗೆ ಜೋಡಿ ಟಗರು ಮಾರಾಟ ಮಾಡುವ ಮೂಲಕ ಮತ್ತಷ್ಟು ಕುರಿಗಳ ಸಾಕಾಣೆ ಮಾಡುವ ವಿಶ್ವಾಸ ಹೊಂದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

12 mins ago

ಅಸ್ಸಾಂನಲ್ಲಿ ಭೀಕರ ಪ್ರವಾಹ: ಜನಜೀವನ ಅಸ್ತವ್ಯಸ್ತ

ದಿಸ್ಪುರ್:‌ ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…

3 hours ago

ಕೈಕೊಟ್ಟ ಮುಂಗಾರು: ಕಬಿನಿ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…

4 hours ago

ರಾಮಮಂದಿರದಲ್ಲಿ ಅಕ್ರಮ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…

9 hours ago

ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮೇಜರ್ ಸರ್ಜರಿಗೆ ಕೇಂದ್ರ ವರಿಷ್ಠರ ಚಿಂತನೆ

ಬೆಂಗಳೂರು ಡೈರಿ  ಆರ್.ಟಿ.ವಿಠ್ಠಲಮೂರ್ತಿ  ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…

9 hours ago

ಅವನತಿಯತ್ತ ಸಾಗಿದ ಅಗಸನ ಕೆರೆಯ ಪುನಶ್ಚೇತನ

ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ  ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…

9 hours ago