Rams Sold for 160000
ಮಂಡ್ಯ: ಇತ್ತೀಚೆಗೆ ಬಂಡೂರು ತಳಿಯ ಟಗರುಗಳಿಗೆ ಭಾರೀ ಬೇಡಿಕೆ ಹೆಚ್ಚಾಗಿದೆ. ಇದಕ್ಕೆ ತಾಜ ಉದಾಹರಣೆ ಎಂಬಂತೆ ಇಲ್ಲೊಂದು ಗ್ರಾಮದಲ್ಲಿ ದಾಖಲೆಯ ಬೆಲೆಗೆ ಬಂಡೂರು ತಳಿಯ ಜೋಡಿ ಟಗರು ಮಾರಾಟವಾಗಿದೆ.
ನಾವೆಲ್ಲಾ ಸಹಜವಾಗಿ ಕುರಿ ಅಂದ್ರೆ ಸುಮಾರು 15 ರಿಂದ 20 ಸಾವಿರ ರೂ ಬೆಲೆ ಅಂದುಕೊಳ್ತಿವಿ. ಆದ್ರೆ ಈಗ ಆಗಲ್ಲ, ಬಂಡೂರು ತಳಿಯ ಕುರಿಗಳಿಗೆ ಎಲ್ಲಿಲ್ಲದ ಬೇಡಿಕೆ ಹೆಚ್ಚಾಗಿದೆ. ಹೀಗಾಗಿ ಬಂಡೂರು ತಳಿಯ ಕುರಿಗಳನ್ನು ಲಕ್ಷ ಲಕ್ಷ ಹಣ ಕೊಟ್ಟು ಖರೀದಿ ಮಾಡ್ತಿದ್ದಾರೆ. ಈಗ ಇಂತಹದ್ದೊಂದು ಪ್ರಸಂಗ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಉಲ್ಲಾಸ್ ಗೌಡ ಎಂಬ ಯುವಕ ಸಾಕಿದ ಬಂಡೂರು ತಳಿಯ ಜೋಡಿ ಟಗರು ಬರೋಬ್ಬರಿ 1.60 ಲಕ್ಷಕ್ಕೆ ಮಾರಾಟವಾಗಿದೆ.
ವಿದ್ಯಾರ್ಥಿಯಾಗಿರುವ ಉಲ್ಲಾಸ್ ಬಂಡೂರು ತಳಿಯ ಕುರಿಗಳು ನಶಿಸಬಾರದು ಎಂಬ ನಿಟ್ಟಿನಲ್ಲಿ ಬಂಡೂರು ತಳಿಯ ಕುರಿಗಳನ್ನು ಸಾಕಾಣಿ ಮಾಡುತ್ತಿದ್ದಾನೆ. ಹೀಗಾಗಿ ಉಲ್ಲಾಸ್ ಬಳಿ ವಡ್ಡರಹಳ್ಳಿ ಗ್ರಾಮದ ರೈತರಾದ ಕುಮಾರ್ ಹಾಗೂ ಕುಳ್ಳೇಗೌಡ ದುಬಾರಿ ಹಣ ಕೊಟ್ಟು ಜೋಡಿ ಟಗರುಗಳನ್ನು ಖರೀದಿಸಿದ್ದಾರೆ.
ಇನ್ನು ಟಗರು ಖರೀದಿ ಬಳಿಕ ಗ್ರಾಮದಲ್ಲಿ ಟಗರುಗಳನ್ನು ಮೆರವಣಿಗೆ ಮಾಡಿ ಖರೀದಿ ಮಾಡಿದ ರೈತರಿಗೆ ಅಭಿನಂದನೆ ಸಲ್ಲಿಸಿ ಟಗರುಗಳನ್ನು ಹಸ್ತಾಂತರ ಮಾಡಲಾಗಿದೆ. ಈ ಹಿಂದೆ ಉಲ್ಲಾಸ್ ಅವರ ಕುಟುಂಬದವರು ಇದೇ ರೀತಿ ಬಂಡೂರು ಕುರಿಗಳನ್ನು ಸಾಕಿ ದುಬಾರಿ ಬೆಲೆಗೆ ಮಾರಾಟ ಮಾಡಿದ್ದರು. ಈಗ ಉಲ್ಲಾಸ್ ಕೂಡ ದುಬಾರಿ ಬೆಲೆಗೆ ಜೋಡಿ ಟಗರು ಮಾರಾಟ ಮಾಡುವ ಮೂಲಕ ಮತ್ತಷ್ಟು ಕುರಿಗಳ ಸಾಕಾಣೆ ಮಾಡುವ ವಿಶ್ವಾಸ ಹೊಂದಿದ್ದಾರೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…