ಮಂಡ್ಯ : ಕಾವೇರಿ ನೀರಿನ ವಿಚಾರದಲ್ಲಿ ಪದೇ ಪದೇ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ರಾಜ್ಯ ಸರ್ಕಾರದ ಧೋರಣೆಯಿಂದ ಹಾಗೂ ಕೋರ್ಟ್ನ ಆದೇಶದಿಂದ ರೈತರು ಪಲ್ಟಿ ಹೊಡೆಯುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ಇಂದು ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಪಲ್ಟಿ ಚಳವಳಿ ನಡೆಸಿದರು.
ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಎದುರು 53ನೇ ದಿನದ ಕಾವೇರಿ ಹೋರಾಟದ ಪ್ರಯುಕ್ತ ಪಲ್ಟಿ ಚಳವಳಿ ಮಾಡುವ ಮೂಲಕ ಸರ್ಕಾರವದ ಗಮನ ಸೆಳೆಯಲು ಬಿಜೆಪಿ ಕಾರ್ಯಕರ್ತರು ಮುಂದಾದರು. ಸದ್ಯ ಕೆಆರ್ಎಸ್ ಅಣೆಕಟ್ಟಿನಲ್ಲಿ 100 ಅಡಿಗಿಂತ ಕಡಿಮೆ ನೀರು ಇದೆ. ಹೀಗಿದ್ದರೂ ಸಹ ತಮಿಳುನಾಡಿಗೆ ನೀರು ಬಿಡಲು ಸರ್ಕಾರ ಸಮ್ಮತಿ ನೀಡುತ್ತಾ ಇದೆ. ಇತ್ತ ಕೋರ್ಟ್ ತಮಿಳುನಾಡಿಗೆ ನೀರು ಬಿಡಿ ಎಂದು ಮಂಡ್ಯ ರೈತರನ್ನು ಪಲ್ಟಿ ಹೊಡೆಸುತ್ತಿದೆ.
ಇದಕ್ಕೆ ವಿಡಂಬನೆ ಮಾಡಲು ಬಿಜೆಪಿ ಕಾರ್ಯಕರ್ತರು ಪಲ್ಟಿ ಹೊಡೆದು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ನೀರು ನಿಲ್ಲಿಸಲು ಮನವಿ ಪತ್ರ ನೀಡಿದರು.
ಕೃಷ್ಣ ಸಿದ್ದಾಪುರ ಜಾಗೃತಿ ಮೂಡಿಸಿದರೂ ಎಚ್ಚೆತ್ತುಕೊಳ್ಳದ ಜನ; ನಿಂತಿರುವ ಲಾರಿಯೊಳಗೆ ರಾಶಿ ರಾಶಿ ಕಸ ಸಿದ್ದಾಪುರ: ಸ್ವಚ್ಛತೆ ಬಗ್ಗೆ ಎಷ್ಟೇ…
ಹೇಮಾವತಿ ಕಾಲುವೆಗೆ ಅಪಾಯ ಸಾಧ್ಯತೆ: ಕಾಮಗಾರಿ ಸ್ಥಗಿತಕೆ ರೈತರ ಒತ್ತಾಯ ಕೆ.ಆರ್.ಪೇಟೆ: ತಾಲ್ಲೂಕಿನ ಶೀಳನೆರೆ ಹೋಬಳಿಯ ಚಟ್ಟಂಗೆರೆ ಗ್ರಾಮದ ಬಳಿ ಸುಮಾರು…
ಎಸ್.ಎಸ್.ಭಟ್ ಕಪಿಲಾ ತೀರದ ಸ್ನಾನಘಟ್ಟದಲ್ಲಿ ಬಕೆಟ್ ನೀರಿಗೆ ೫೦-೧೦೦ ರೂ. ಸುಲಿಗೆ ಎಂದು ಭಕ್ತಾದಿಗಳ ಆರೋಪ ನಂಜನಗೂಡು: ಹಿಮಾಲಯದಲ್ಲಿ ಪ್ರತಿ…
ಬೆಂಗಳೂರು : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್ಡಿಎಲ್) ನ ಐತಿಹಾಸಿಕ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್ಗೆ ನಟಿ…
ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್ ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ…