ಮಂಡ್ಯ

ಕಾವೇರಿಗಾಗಿ ಮಂಡ್ಯದಲ್ಲಿ ಪಲ್ಟಿ ಚಳವಳಿ

ಮಂಡ್ಯ : ಕಾವೇರಿ ನೀರಿನ ವಿಚಾರದಲ್ಲಿ ಪದೇ ಪದೇ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ರಾಜ್ಯ ಸರ್ಕಾರದ ಧೋರಣೆಯಿಂದ ಹಾಗೂ ಕೋರ್ಟ್‌ನ ಆದೇಶದಿಂದ ರೈತರು ಪಲ್ಟಿ ಹೊಡೆಯುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ಇಂದು ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಪಲ್ಟಿ ಚಳವಳಿ ನಡೆಸಿದರು.

ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಎದುರು 53ನೇ ದಿನದ ಕಾವೇರಿ ಹೋರಾಟದ ಪ್ರಯುಕ್ತ ಪಲ್ಟಿ ಚಳವಳಿ ಮಾಡುವ ಮೂಲಕ ಸರ್ಕಾರವದ ಗಮನ ಸೆಳೆಯಲು ಬಿಜೆಪಿ ಕಾರ್ಯಕರ್ತರು ಮುಂದಾದರು. ಸದ್ಯ ಕೆಆರ್‌ಎಸ್ ಅಣೆಕಟ್ಟಿನಲ್ಲಿ 100 ಅಡಿಗಿಂತ ಕಡಿಮೆ ನೀರು ಇದೆ. ಹೀಗಿದ್ದರೂ ಸಹ ತಮಿಳುನಾಡಿಗೆ ನೀರು ಬಿಡಲು ಸರ್ಕಾರ ಸಮ್ಮತಿ ನೀಡುತ್ತಾ ಇದೆ. ಇತ್ತ ಕೋರ್ಟ್ ತಮಿಳುನಾಡಿಗೆ ನೀರು ಬಿಡಿ ಎಂದು ಮಂಡ್ಯ ರೈತರನ್ನು ಪಲ್ಟಿ ಹೊಡೆಸುತ್ತಿದೆ.

ಇದಕ್ಕೆ ವಿಡಂಬನೆ ಮಾಡಲು ಬಿಜೆಪಿ ಕಾರ್ಯಕರ್ತರು ಪಲ್ಟಿ ಹೊಡೆದು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ನೀರು ನಿಲ್ಲಿಸಲು ಮನವಿ ಪತ್ರ ನೀಡಿದರು.

lokesh

Recent Posts

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

5 mins ago

ಓದುಗರ ಪತ್ರ: ಸಿಜೆಪಿ ಯಾವುದೇ ಪಕ್ಷದ ಬಾಲಂಗೋಚಿಯಾಗದಿರಲಿ

ಪರೀಕ್ಷೆಗಳ ಅಕ್ರಮ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದು ಕಾಕ್ರೋಚ್ ಜನತಾ ಪಕ್ಷ ನಡೆಸಿದ ಚಳವಳಿ ತನ್ನ…

6 mins ago

ಓದುಗರ ಪತ್ರ: ದಸರೆಯಲ್ಲಿ ಕಂಬಳದ ವ್ಯಾಮೋಹವೇಕೇ?

ವಿಶ್ವವಿಖ್ಯಾತ ಮೈಸೂರು ದಸರೆಗೆ ತನ್ನದೇ ಆದ ಇತಿಹಾಸವಿದೆ. ಇತ್ತೀಚಿನ ವರ್ಷಗಳಲ್ಲಿ ಸಮುದಾಯಗಳಿಗೆ ಅನುಕೂಲವಾಗುವಂತಹ ಇಲ್ಲವೆ ಸ್ಪೂರ್ತಿ ನೀಡುವಂತಹ ಕಾರ್ಯಕ್ರಮಗಳು ಸೇರ್ಪಡೆಯಾಗುತ್ತಿವೆ.…

9 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡ ಚಿತ್ರರಂಗದ ಕಾಯಕಲ್ಪವೂ, ಅವರಿವರ ಭಾವವೂ

ಎಲ್ಲ ಕಡೆ ಈಗ ಕನ್ನಡ ಚಿತ್ರರಂಗವನ್ನು ಉಳಿಸುವ ಚರ್ಚೆಗಳು. ಏಕಪರದೆಯ ಚಿತ್ರಮಂದಿರಗಳು ಮುಚ್ಚದ ಹಾಗೆ ಮಾಡಲು ಏನು ಮಾಡಬೇಕು, ಜನರನ್ನು…

11 mins ago

ಮಳೆಗಾಲದ ಸಾಂಕ್ರಾಮಿಕ ರೋಗಗಳ ಆತಂಕ

ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ೨೯ ಡೆಂಗ್ಯು ಪ್ರಕರಣಗಳು ದೃಢ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ   ಮಡಿಕೇರಿ:…

15 mins ago