ಮಂಡ್ಯ : ಕಾವೇರಿ ನೀರಿನ ವಿಚಾರದಲ್ಲಿ ಪದೇ ಪದೇ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ರಾಜ್ಯ ಸರ್ಕಾರದ ಧೋರಣೆಯಿಂದ ಹಾಗೂ ಕೋರ್ಟ್ನ ಆದೇಶದಿಂದ ರೈತರು ಪಲ್ಟಿ ಹೊಡೆಯುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ಇಂದು ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಪಲ್ಟಿ ಚಳವಳಿ ನಡೆಸಿದರು.
ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಎದುರು 53ನೇ ದಿನದ ಕಾವೇರಿ ಹೋರಾಟದ ಪ್ರಯುಕ್ತ ಪಲ್ಟಿ ಚಳವಳಿ ಮಾಡುವ ಮೂಲಕ ಸರ್ಕಾರವದ ಗಮನ ಸೆಳೆಯಲು ಬಿಜೆಪಿ ಕಾರ್ಯಕರ್ತರು ಮುಂದಾದರು. ಸದ್ಯ ಕೆಆರ್ಎಸ್ ಅಣೆಕಟ್ಟಿನಲ್ಲಿ 100 ಅಡಿಗಿಂತ ಕಡಿಮೆ ನೀರು ಇದೆ. ಹೀಗಿದ್ದರೂ ಸಹ ತಮಿಳುನಾಡಿಗೆ ನೀರು ಬಿಡಲು ಸರ್ಕಾರ ಸಮ್ಮತಿ ನೀಡುತ್ತಾ ಇದೆ. ಇತ್ತ ಕೋರ್ಟ್ ತಮಿಳುನಾಡಿಗೆ ನೀರು ಬಿಡಿ ಎಂದು ಮಂಡ್ಯ ರೈತರನ್ನು ಪಲ್ಟಿ ಹೊಡೆಸುತ್ತಿದೆ.
ಇದಕ್ಕೆ ವಿಡಂಬನೆ ಮಾಡಲು ಬಿಜೆಪಿ ಕಾರ್ಯಕರ್ತರು ಪಲ್ಟಿ ಹೊಡೆದು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ನೀರು ನಿಲ್ಲಿಸಲು ಮನವಿ ಪತ್ರ ನೀಡಿದರು.
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪಿ.ಎಚ್.ಡಿ ಪ್ರವೇಶಾತಿ ಪಡೆದ ಸಂಶೋಧಕರುಗಳಿಗೆ ಶಿಷ್ಯ ವೇತನ ನೀಡುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ…
ಚಾಮರಾಜನಗರ: ತಾಲ್ಲೂಕಿನ ಬಾಗಳಿ ಗ್ರಾಮದ ಜಮೀನೊಂದರಲ್ಲಿ ಹುಲಿ ಪ್ರತ್ಯಕ್ಷಗೊಂಡಿದ್ದು ರೈತರಲ್ಲಿ ಆತಂಕ ಮೂಡಿಸಿದೆ. ಗ್ರಾಮದ ಪುಟ್ಟಯ್ಯ ಎಂಬವರು ಸೋಮವಾರ ಬೆಳಿಗ್ಗೆ…
ವಾಷಿಂಗ್ಟನ್ : ಅಮೆರಿಕ-ಇರಾನ್ ಸಂಸಂಘರ್ಷವನ್ನು ಕೊನೆಗೊಳಿಸಲು ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಸಾಗಣೆಯನ್ನು ಪುನಃಸ್ಥಾಪಿಸಲು ಪ್ರಾಥಮಿಕ ಒಪ್ಪಂದಕ್ಕೆ ಬಂದಿರುವುದಾಗಿ ಡೊನಾಲ್ಡ್…
ಬೆಂಗಳೂರು : ಆರ್ಎಸ್ಎಸ್ನ ಸಾಂಸ್ಥಿಕ ಮತ್ತು ಕಾನೂನುಬದ್ಧ ಸ್ಥಿತಿಗತಿ ಕುರಿತು ಸ್ಪಷ್ಟನೆ ನೀಡುವಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು…
ಮೈಸೂರು : ಪಬ್ನಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಸಜೀವ ದಹನವಾಗಿರುವ ಘಟನೆ ನಗರದ ದಟ್ಟಗಳ್ಳಿಯಲ್ಲಿ ನಡೆದಿದೆ. ನಗರದ ರಿಂಗ್…
ಬೆಂಗಳೂರು: ಕರ್ನಾಟಕದವರಿಗೆ, ವೋಟ್ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…