ಮಂಡ್ಯ

ಪಾಂಡವಪುರ | ಮಕ್ಕಳೊಂದಿಗೆ ನಾಲೆಗೆ ಹಾರಿದ ತಾಯಿ

ಪಾಂಡವಪುರ: ಗೃಹಿಣಿಯೊಬ್ಬರು ತನ್ನ ಎರಡು ಮಕ್ಕಳೊಂದಿಗೆ ನಾಲೆಗೆ ಬಿದ್ದು ಘಟನೆಯಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿದ್ದು, ತಾಯಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಪಟ್ಟಣದ ಹಾರೋಹಳ್ಳಿ ಗ್ರಾಮದ ನಿವಾಸಿ ಧನಂಜಯ್ ಎಂಬವರ ಪತ್ನಿ ವಿದ್ಯಾ (೩೦) ಬದುಕುಳಿದಿದ್ದು, ತಮ್ಮ ಇಬ್ಬರು ಮಕ್ಕಳಾದ ಲಿತಿಷ(೮), ಕಿಶನ್(೨) ಘಟನೆಯಲ್ಲಿ ಮೃತಪಟ್ಟಿದ್ದಾರೆ. ಮಕ್ಕಳ ಮೃತದೇಹಕ್ಕಾಗಿ ಶೋಧಕಾರ್ಯ ನಡೆಯುತ್ತಿದೆ.

ಹಾರೋಹಳ್ಳಿ ಗ್ರಾಮದ ನಿವಾಸಿ ಧನಂಜಯ್ ಅವರು ಖಾಸಗಿ ಫೈನಾನ್ಸ್ ಕಂಪೆನಿಯೊಂದರಲ್ಲಿ ಬೇರೆ ಜಿಲ್ಲೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಧನಂಜಯ್ ಅವರ ಪತ್ನಿ ವಿದ್ಯಾ ಅವರು ತನ್ನ ಇಬ್ಬರು ಮಕ್ಕಳೊಂದಿಗೆ ತಾಲ್ಲೂಕಿನ ಬನಘಟ್ಟ ಗೇಟ್ ಸಮೀಪದ ವಿ.ನಾಲೆಯ ಬಳಿ ತೆರಳಿದ್ದಾರೆ. ಬೈಕ್ ಮತ್ತು ಮೊಬೈಲ್ ನ್ನು ನಾಲೆಯ ಏರಿಯ ಮೇಲೆ ನಿಲ್ಲಿಸಿ ವಿ.ನಾಲೆಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ವಿದ್ಯಾ ಅವರು ನಾಲೆಯಲ್ಲಿ ಮುಳುಗುತ್ತಿದ್ದನ್ನು ಕಂಡ ಸ್ಥಳೀಯರು ನಾಲೆಗೆ ಹಾರಿ ವಿದ್ಯಳನ್ನು ರಕ್ಷಿಸಿದ್ದಾರೆ, ತಮ್ಮ ಇಬ್ಬರು ಮಕ್ಕಳು ನಾಲೆಯ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಪ್ರಾಣಾಪಾಯದಿಂದ ಪಾರಾಗಿರುವ ವಿದ್ಯಾ, ನಾನು ಮತ್ತು ಮಕ್ಕಳು ನಾಲೆಯ ಏರಿಯ ಮೇಲೆ ಸೆಲಿ ತೆಗೆದುಕೊಳ್ಳಲು ಹೋಗಿ ಕಾಲು ಜಾರಿ ನಾಲೆಗೆ ಬಿದ್ದಿದ್ದೇವೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ ಎನ್ನಲಾಗಿದೆ. ಆದರೆ, ಸೆಲಿ ತೆಗೆದುಕೊಳ್ಳುವುದಕ್ಕಾಗಿ ಹಾರೋಹಳ್ಳಿಯಿಂದ ಬನಘಟ್ಟ ಬಳಿ ಏಕೆ ಹೋಗಿದ್ದರು ಎಂಬ ಅನುಮಾನವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ವಿದ್ಯಾ ಬಳಸುತ್ತಿದ್ದ ಬೈಕ್ ಮತ್ತು ಮೊಬೈಲ್ ಎರಡನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿ.ನಾಲೆಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿರುವುದರಿಂದ ಮಕ್ಕಳ ಮೃತ ದೇಹಕ್ಕಾಗಿ ಶೋಧಕಾರ್ಯ ನಡೆಯುತ್ತಿದೆ.
ಘಟನೆ ಸಂಬಂಧ ಪ್ರಕರಣ ದಾಖಲಾಗಿಲ್ಲ.

ಆಕ್ರಂಧನ: ಪುಟಾಣಿ ಮಕ್ಕಳನ್ನು ಕಳೆದುಕೊಂಡಿರುವ ಪೋಷಕರ ಮನೆಯಲ್ಲಿ ಆಕ್ರಂಧನ ಮುಗಿಲು ಮುಟ್ಟಿದೆ. ಪೋಷಕರ ಗೋಳಾಟ ಮನಕಲುಕುವಂತಿತ್ತು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದಿಲ್ಲಿ ಗಣರಾಜ್ಯೋತ್ಸವಕ್ಕೆ ಬೆದರಿಕೆ : ಗುರುಪತ್ವಂತ್‌ ಸಿಂಗ್‌ ವಿರುದ್ಧ ಎಫ್‌ಐಆರ್‌

ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…

5 hours ago

ಕಾಡಾನೆಗಳ ಲಗ್ಗೆ : ಕಬ್ಬಿನ ಫಸಲು ನಾಶ, ಪರಿಹಾರಕ್ಕಾಗಿ ಒತ್ತಾಯ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…

6 hours ago

ಕೊಡಗಿನ ತಿತಿಮತಿಯಲ್ಲಿ ಹುಲಿ ಪ್ರತ್ಯಕ್ಷ ; ಸ್ಥಳೀಯರಲ್ಲಿ ಆತಂಕ

ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…

6 hours ago

ಖಾಸಗಿ ಶಾಲೆಗಳನ್ನು ನಾಚಿಸುವ ಹೈಟೆಕ್ ಸರ್ಕಾರಿ ಶಾಲೆ : ಆದರೆ ಮಕ್ಕಳ ದಾಖಲಾತಿ ಕೇವಲ 40!

ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…

6 hours ago

ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಜಾಗ ನೀಡುವಂತೆ ಸಿಎಂಗೆ ಪತ್ರ ಬರೆದಿದ್ದೇನೆ : ಎಚ್‌ಡಿಕೆ

ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…

7 hours ago

ರಾಜ್ಯವೇ ನನ್ನ ಪರಿಮಿತಿ, ಜನ ಬಯಸಿದ ಕಡೆ ಸ್ಪರ್ಧೆ : ಎಚ್‌.ಡಿ.ಕುಮಾರಸ್ವಾಮಿ

ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…

7 hours ago