ಪಾಂಡವಪುರ: ಗೃಹಿಣಿಯೊಬ್ಬರು ತನ್ನ ಎರಡು ಮಕ್ಕಳೊಂದಿಗೆ ನಾಲೆಗೆ ಬಿದ್ದು ಘಟನೆಯಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿದ್ದು, ತಾಯಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಪಟ್ಟಣದ ಹಾರೋಹಳ್ಳಿ ಗ್ರಾಮದ ನಿವಾಸಿ ಧನಂಜಯ್ ಎಂಬವರ ಪತ್ನಿ ವಿದ್ಯಾ (೩೦) ಬದುಕುಳಿದಿದ್ದು, ತಮ್ಮ ಇಬ್ಬರು ಮಕ್ಕಳಾದ ಲಿತಿಷ(೮), ಕಿಶನ್(೨) ಘಟನೆಯಲ್ಲಿ ಮೃತಪಟ್ಟಿದ್ದಾರೆ. ಮಕ್ಕಳ ಮೃತದೇಹಕ್ಕಾಗಿ ಶೋಧಕಾರ್ಯ ನಡೆಯುತ್ತಿದೆ.
ಹಾರೋಹಳ್ಳಿ ಗ್ರಾಮದ ನಿವಾಸಿ ಧನಂಜಯ್ ಅವರು ಖಾಸಗಿ ಫೈನಾನ್ಸ್ ಕಂಪೆನಿಯೊಂದರಲ್ಲಿ ಬೇರೆ ಜಿಲ್ಲೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಧನಂಜಯ್ ಅವರ ಪತ್ನಿ ವಿದ್ಯಾ ಅವರು ತನ್ನ ಇಬ್ಬರು ಮಕ್ಕಳೊಂದಿಗೆ ತಾಲ್ಲೂಕಿನ ಬನಘಟ್ಟ ಗೇಟ್ ಸಮೀಪದ ವಿ.ನಾಲೆಯ ಬಳಿ ತೆರಳಿದ್ದಾರೆ. ಬೈಕ್ ಮತ್ತು ಮೊಬೈಲ್ ನ್ನು ನಾಲೆಯ ಏರಿಯ ಮೇಲೆ ನಿಲ್ಲಿಸಿ ವಿ.ನಾಲೆಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ವಿದ್ಯಾ ಅವರು ನಾಲೆಯಲ್ಲಿ ಮುಳುಗುತ್ತಿದ್ದನ್ನು ಕಂಡ ಸ್ಥಳೀಯರು ನಾಲೆಗೆ ಹಾರಿ ವಿದ್ಯಳನ್ನು ರಕ್ಷಿಸಿದ್ದಾರೆ, ತಮ್ಮ ಇಬ್ಬರು ಮಕ್ಕಳು ನಾಲೆಯ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಪ್ರಾಣಾಪಾಯದಿಂದ ಪಾರಾಗಿರುವ ವಿದ್ಯಾ, ನಾನು ಮತ್ತು ಮಕ್ಕಳು ನಾಲೆಯ ಏರಿಯ ಮೇಲೆ ಸೆಲಿ ತೆಗೆದುಕೊಳ್ಳಲು ಹೋಗಿ ಕಾಲು ಜಾರಿ ನಾಲೆಗೆ ಬಿದ್ದಿದ್ದೇವೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ ಎನ್ನಲಾಗಿದೆ. ಆದರೆ, ಸೆಲಿ ತೆಗೆದುಕೊಳ್ಳುವುದಕ್ಕಾಗಿ ಹಾರೋಹಳ್ಳಿಯಿಂದ ಬನಘಟ್ಟ ಬಳಿ ಏಕೆ ಹೋಗಿದ್ದರು ಎಂಬ ಅನುಮಾನವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ವಿದ್ಯಾ ಬಳಸುತ್ತಿದ್ದ ಬೈಕ್ ಮತ್ತು ಮೊಬೈಲ್ ಎರಡನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿ.ನಾಲೆಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿರುವುದರಿಂದ ಮಕ್ಕಳ ಮೃತ ದೇಹಕ್ಕಾಗಿ ಶೋಧಕಾರ್ಯ ನಡೆಯುತ್ತಿದೆ.
ಘಟನೆ ಸಂಬಂಧ ಪ್ರಕರಣ ದಾಖಲಾಗಿಲ್ಲ.
ಆಕ್ರಂಧನ: ಪುಟಾಣಿ ಮಕ್ಕಳನ್ನು ಕಳೆದುಕೊಂಡಿರುವ ಪೋಷಕರ ಮನೆಯಲ್ಲಿ ಆಕ್ರಂಧನ ಮುಗಿಲು ಮುಟ್ಟಿದೆ. ಪೋಷಕರ ಗೋಳಾಟ ಮನಕಲುಕುವಂತಿತ್ತು.
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…
ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…
ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…
ಎಚ್.ಎಸ್.ದಿನೇಶ್ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…
ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…