ಮಂಡ್ಯ

ಪಾಂಡವಪುರ | ಮಕ್ಕಳೊಂದಿಗೆ ನಾಲೆಗೆ ಹಾರಿದ ತಾಯಿ

ಪಾಂಡವಪುರ: ಗೃಹಿಣಿಯೊಬ್ಬರು ತನ್ನ ಎರಡು ಮಕ್ಕಳೊಂದಿಗೆ ನಾಲೆಗೆ ಬಿದ್ದು ಘಟನೆಯಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿದ್ದು, ತಾಯಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಪಟ್ಟಣದ ಹಾರೋಹಳ್ಳಿ ಗ್ರಾಮದ ನಿವಾಸಿ ಧನಂಜಯ್ ಎಂಬವರ ಪತ್ನಿ ವಿದ್ಯಾ (೩೦) ಬದುಕುಳಿದಿದ್ದು, ತಮ್ಮ ಇಬ್ಬರು ಮಕ್ಕಳಾದ ಲಿತಿಷ(೮), ಕಿಶನ್(೨) ಘಟನೆಯಲ್ಲಿ ಮೃತಪಟ್ಟಿದ್ದಾರೆ. ಮಕ್ಕಳ ಮೃತದೇಹಕ್ಕಾಗಿ ಶೋಧಕಾರ್ಯ ನಡೆಯುತ್ತಿದೆ.

ಹಾರೋಹಳ್ಳಿ ಗ್ರಾಮದ ನಿವಾಸಿ ಧನಂಜಯ್ ಅವರು ಖಾಸಗಿ ಫೈನಾನ್ಸ್ ಕಂಪೆನಿಯೊಂದರಲ್ಲಿ ಬೇರೆ ಜಿಲ್ಲೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಧನಂಜಯ್ ಅವರ ಪತ್ನಿ ವಿದ್ಯಾ ಅವರು ತನ್ನ ಇಬ್ಬರು ಮಕ್ಕಳೊಂದಿಗೆ ತಾಲ್ಲೂಕಿನ ಬನಘಟ್ಟ ಗೇಟ್ ಸಮೀಪದ ವಿ.ನಾಲೆಯ ಬಳಿ ತೆರಳಿದ್ದಾರೆ. ಬೈಕ್ ಮತ್ತು ಮೊಬೈಲ್ ನ್ನು ನಾಲೆಯ ಏರಿಯ ಮೇಲೆ ನಿಲ್ಲಿಸಿ ವಿ.ನಾಲೆಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ವಿದ್ಯಾ ಅವರು ನಾಲೆಯಲ್ಲಿ ಮುಳುಗುತ್ತಿದ್ದನ್ನು ಕಂಡ ಸ್ಥಳೀಯರು ನಾಲೆಗೆ ಹಾರಿ ವಿದ್ಯಳನ್ನು ರಕ್ಷಿಸಿದ್ದಾರೆ, ತಮ್ಮ ಇಬ್ಬರು ಮಕ್ಕಳು ನಾಲೆಯ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಪ್ರಾಣಾಪಾಯದಿಂದ ಪಾರಾಗಿರುವ ವಿದ್ಯಾ, ನಾನು ಮತ್ತು ಮಕ್ಕಳು ನಾಲೆಯ ಏರಿಯ ಮೇಲೆ ಸೆಲಿ ತೆಗೆದುಕೊಳ್ಳಲು ಹೋಗಿ ಕಾಲು ಜಾರಿ ನಾಲೆಗೆ ಬಿದ್ದಿದ್ದೇವೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ ಎನ್ನಲಾಗಿದೆ. ಆದರೆ, ಸೆಲಿ ತೆಗೆದುಕೊಳ್ಳುವುದಕ್ಕಾಗಿ ಹಾರೋಹಳ್ಳಿಯಿಂದ ಬನಘಟ್ಟ ಬಳಿ ಏಕೆ ಹೋಗಿದ್ದರು ಎಂಬ ಅನುಮಾನವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ವಿದ್ಯಾ ಬಳಸುತ್ತಿದ್ದ ಬೈಕ್ ಮತ್ತು ಮೊಬೈಲ್ ಎರಡನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿ.ನಾಲೆಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿರುವುದರಿಂದ ಮಕ್ಕಳ ಮೃತ ದೇಹಕ್ಕಾಗಿ ಶೋಧಕಾರ್ಯ ನಡೆಯುತ್ತಿದೆ.
ಘಟನೆ ಸಂಬಂಧ ಪ್ರಕರಣ ದಾಖಲಾಗಿಲ್ಲ.

ಆಕ್ರಂಧನ: ಪುಟಾಣಿ ಮಕ್ಕಳನ್ನು ಕಳೆದುಕೊಂಡಿರುವ ಪೋಷಕರ ಮನೆಯಲ್ಲಿ ಆಕ್ರಂಧನ ಮುಗಿಲು ಮುಟ್ಟಿದೆ. ಪೋಷಕರ ಗೋಳಾಟ ಮನಕಲುಕುವಂತಿತ್ತು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

2 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

3 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

4 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

4 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

4 hours ago

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

7 hours ago