ಮಂಡ್ಯ: ಅಧಿಕಾರ ದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ ಪಾಂಡವಪುರ ಎಸಿ ಎಲ್.ಎಂ.ನಂದೀಶ್ ಅವರನ್ನು ಅಮಾನತು ಮಾಡಲಾಗಿದೆ.
ಅಧಿಕಾರ ದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾಧಿಕಾರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಇದರ ಮೇರೆಗೆ ಪಾಂಡವಪುರ ಉಪವಿಭಾಗಾಧಿಕಾರಿ ನಂದೀಶ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಉಮಾದೇವಿ ಆದೇಶ ಹೊರಡಿಸಿದ್ದಾರೆ.
ಫೆಬ್ರವರಿ.28ರಂದು ಮೈಸೂರು ಉಪವಿಭಾಗದ ಪ್ರಭಾರ ಉಪವಿಭಾಗಾಧಿಕಾರಿಯಾಗಿ ನಂದೀಶ್ ಅಧಿಕಾರ ವಹಿಸಿಕೊಂಡರು. ಆಗಗ ಉಪವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ದಾಖಲಾಗಿದ್ದ ಪ್ರಕರಣಗಳ ಎದುರುದಾರರಿಗೆ ವಿಚಾರಣೆಗೆ ಅವಕಾಶ ಕಲ್ಪಿಸದೇ, ಅವರಿಂದ ದಾಖಲೆಗಳನ್ನು ಪಡೆದುಕೊಳ್ಳದೇ ವಿಚಾರಣೆಗೆ ತೆಗೆದುಕೊಂಡ ದಿನದಂದೇ ಆದೇಶ ಹೊರಡಿಸಿದ್ದರು.
ಇದರ ಜೊತೆಗೆ ಪಕ್ಷಕಾರರು ಅವರ ನಿಲುವುಗಳನ್ನು ಮಂಡಿಸಲು ಅವಕಾಶ ನೀಡದೇ ನೈಸರ್ಗಿಕ ನ್ಯಾಯದ ತತ್ವಗಳಿಗೆ ವಿರುದ್ಧವಾಗಿ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದ ಆರೋಪ ಹೊತ್ತಿದ್ದರು. ಈ ಆರೋಪಗಳ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗಿದೆ ಎಂದು ಅಮಾನತು ಆದೇಶದಲ್ಲಿ ತಿಳಿಸಲಾಗಿದೆ.
ಗಂಭೀರ ಸ್ವರೂಪದ ಕರ್ತವ್ಯ ಲೋಪ ಎಸಗಿರುವ ಆರೋಪಗಳು ಕಂಡುಬಂದಿರುವುದರಿಂದ ಸರ್ಕಾರಿ ಸೇವೆಯಲ್ಲಿ ಮುಂದುವರಿದರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದ್ದು, ಇವರ ವಿರುದ್ಧ ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…