ಮಂಡ್ಯ

ಪಾಂಡವಪುರ ಎಸಿ ವರ್ಗಾವಣೆಗೆ ಒತ್ತಡ: ಭಾರತೀಯ ಕಿಸಾನ್ ಸಂಘ

ಮಂಡ್ಯ: ಜನಪರವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪಾಂಡವಪುರ ಉಪ ವಿಭಾಗಾಧಿಕಾರಿ ಕೆ.ಆರ್. ಶ್ರೀನಿವಾಸ್ ಅವರ ವಿರುದ್ಧ ಕೆಲ ಪಟ್ಟಭದ್ರ ಹಿತಾಸಕ್ತಿಗಳು ರಾಜಕೀಯ ಪಿತೂರಿಯಿಂದ ವರ್ಗಾವಣೆಗೆ ಒತ್ತಡ ಹೇರುತ್ತಿವೆ. ಇದನ್ನು ನಿಲ್ಲಿಸಿ ಅವರನ್ನೆ ಮುಂದುವರಿಸಬೇಕೆಂದು ಭಾರತೀಯ ಕಿಸಾನ್ ಸಂಘದ ಕಾರ್ಯಕರ್ತರು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದರು.

ಜಿಲ್ಲಾಧಿಕಾರಿ ಕಚೇರಿ ಬಳಿ ಸಚಿವ ಚಲುವರಾಯಸ್ವಾಮಿ ಅವರನ್ನು ಭೇಟಿ ಮಾಡಿದ ಕಿಸಾನ್ ಸಂಘದ ಕಾರ್ಯಕರ್ತರು, ಶ್ರೀನಿವಾಸ್ ಅವರು ಒಳ್ಳೆಯ ಪ್ರಾಮಾಣಿಕ ಅಧಿಕಾರಿಯಾಗಿದ್ದು, ಈ ಅಧಿಕಾರಿಯವರ ಬಳಿ ಯಾರೇ ಸಾಮಾನ್ಯರು ಭೇಟಿ ಮಾಡಿದರೆ ಅವರ ಕೆಲಸಗಳನ್ನು ಮಾಡಿಕೊಟ್ಟು ಸಾರ್ವಜನಿಕರಿಗೆ ಅನುಕೂಲ ಮಾಡುತ್ತಿದ್ದಾರೆ ಎಂದು ಮನವಿಯಲ್ಲಿ ತಿಳಿಸಿದರು.

ಪಾಂಡವಪುರ, ನಾಗಮಂಗಲ, ಶ್ರೀರಂಗಪಟ್ಟಣ, ಕೆ.ಆರ್. ಪೇಟೆ ತಾಲೂಕಿನ ಕೆಲಸ ಕಾರ್ಯಗಳು ನ್ಯಾಯಸಮ್ಮತವಾಗಿ ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದಾರೆ. ತಮ್ಮ ದುರುದ್ದೇಶಗಳಿಗೆ ಅನುಗುಣವಾಗಿ ನಡೆದುಕೊಳ್ಳುತ್ತಿಲ್ಲ ಎಂಬ ಕಾರಣಕ್ಕಾಗಿ ಪಟ್ಟಭದ್ರಾ ಹಿತಾಶಕ್ತಿಗಳು ಅವರನ್ನು ತೇಜೋವಧೆ ಮಾಡಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೆ.ಆರ್. ಶ್ರೀನಿವಾಸ್ ಅವರನ್ನು ಅದೇ ಹುದ್ದೆಯಲ್ಲಿ ಮುಂದುವರಿಸುವ ಮೂಲಕ ಜನಪರವಾಗಿ ಕೆಲಸ ಮಾಡಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಒತ್ತಾಯಿಸಿದರು.

ಸಂಘದ ದಕ್ಷಿಣ ಪ್ರಾಂತ ಅಧ್ಯಕ್ಷ ಹಾಡ್ಯ ರಮೇಶರಾಜು, ಮುಖಂಡರಾದ ಬಿ.ಪಿ. ಅಪ್ಪಾಜಿ, ಪುಟ್ಟಮ್ಮ, ಶಿವಣ್ಣ ನಾಗಮಂಗಲ, ಬೆಟ್ಟಪ್ಪ, ಅಚ್ಚುತ, ತಮ್ಮಣ್ಣ ಸೇರಿದಂತೆ ಹಲವರು ಇದ್ದರು.

ಆಂದೋಲನ ಡೆಸ್ಕ್

Recent Posts

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

1 hour ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

3 hours ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

3 hours ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

3 hours ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

3 hours ago

ಮೈಸೂರು ಸ್ವಚ್ಛವಾಗಿಡಲು ಜನರಿಗೆ ಕೆಲ ಅಭ್ಯಾಸ ಅಗತ್ಯ

ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…

3 hours ago