ಪಾಂಡವಪುರ : ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿದಾರ ಸಲ್ಲಿಸಿದ್ದ ಅರ್ಜಿಗೆ 30 ದಿನದೊಳಗೆ ಮಾಹಿತಿ ನೀಡದ ಇಲ್ಲಿನ ತಹಶೀಲ್ದಾರ್ ಎಸ್.ಸಂತೋಷ್ ಅವರಿಗೆ ಕರ್ನಾಟಕ ಮಾಹಿತಿ ಆಯೋಗ 25 ಸಾವಿರ ರೂ. ದಂಡ ವಿಧಿಸಿದೆ.
ತಹಶೀಲ್ದಾರ್ ಅವರಿಂದ ದಂಡದ ಮೊತ್ತವನ್ನು ಮುಂದಿನ ತಿಂಗಳ ಸಂಬಳದಲ್ಲಿ ಒಂದೇ ಕಂತಿನಲ್ಲಿ ಸರ್ಕಾರದ ಲೆಕ್ಕ ಶೀರ್ಷಿಕೆಗೆ ಜಮಾ ಮಾಡಿ ವರದಿ ಸಲ್ಲಿಸಿ ಎಂದು ಪಾಂಡವಪುರ ಉಪ ವಿಭಾಗಾಧಿಕಾರಿ ಕೆ.ಆರ್ ಶ್ರೀನಿವಾಸ್ ಅವರಿಗೆ ಆಯೋಗವು ಸೂಚಿಸಿದೆ.
ಅಷ್ಟೆ ಅಲ್ಲದೇ ಅರ್ಜಿದಾರನಿಗೆ ಮಾಹತಿ ನೀಡಲು 240ಕ್ಕೂ ಹೆಚ್ಚು ದಿನ ವಿಳಂಬವಾಗಿರುವ ಬಗ್ಗೆ ಗಂಭೀರವಾಗಿ ಪರಿಗಣಿಸಿರುವ ಆಯೋಗ, ಕಷ್ಟ ಇತರೆ ವೆಚ್ಚಗಳಿಗಾಗಿ ಆರ್ಜಿದಾರನಿಗೆ 10 ಸಾವಿರ ರೂ ಪರಿಹಾರವನ್ನು 15 ದಿನದೊಳಗೆ ನೀಡುವಂತೆ ಆದೇಶಿಸಿದೆ. ತಪ್ಪಿದಲ್ಲಿ ನಾಗರಿಕ ಸೇವಾ ನಿಯಮಗಳ ಪ್ರಕಾರ ಶಿಸ್ತುಕ್ರಮಕ್ಕೆ ಶಿಫಾರಸು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದೆ.
ಪ್ರಕರಣದ ವಿಚಾರಣೆಯನ್ನು ಏ 9 ರಂದು ಬೆಳಿಗ್ಗೆ 11ಕ್ಕೆ ನಿಗದಿ ಮಾಡಿರುವ ಆಯೋಗವು, ಆ ದಿನ ಖುದ್ದು ಹಾಜರಾಗುವಂತೆ ತಹಶೀಲ್ದಾರ್ ಅವರಿಗೆ ಸೂಚಿಸಿದೆ.
ಬೆಂಗಳೂರು: ಹಳೆಯ ವಾಹನಗಳಿಗೆ ಎಚ್ಎಸ್ಆರ್ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…
ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇರುವ ಏಕೈಕ ಬಂಡವಾಳ ಎಂದರೆ ಐದು ಗ್ಯಾರಂಟಿಗಳು ಮಾತ್ರ. ಅವುಗಳನ್ನು ಕೂಡ ಮನಸ್ಸು ಇಚ್ಛೆ,…
ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ ಹತ್ತಿಕ್ಕಲು…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಹಸಿರು ಕ್ರಾಂತಿ ಹರಿಕಾರ ಬಾಬು ಜಗಜೀವನ್ ರಾಮ್ ಅವರ 119ನೇ ಜಯಂತಿಯನ್ನು ಆಚರಣೆ…
ಬೆಂಗಳೂರು: ಅತಿ ಹೆಚ್ಚು ಅಭಿಮಾನಿ ಬಳಗ ಹೊಂದಿರುವ ಐಪಿಎಲ್ನ 2 ತಂಡಗಳಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್…