ಪಾಂಡವಪುರ : ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿದಾರ ಸಲ್ಲಿಸಿದ್ದ ಅರ್ಜಿಗೆ 30 ದಿನದೊಳಗೆ ಮಾಹಿತಿ ನೀಡದ ಇಲ್ಲಿನ ತಹಶೀಲ್ದಾರ್ ಎಸ್.ಸಂತೋಷ್ ಅವರಿಗೆ ಕರ್ನಾಟಕ ಮಾಹಿತಿ ಆಯೋಗ 25 ಸಾವಿರ ರೂ. ದಂಡ ವಿಧಿಸಿದೆ.
ತಹಶೀಲ್ದಾರ್ ಅವರಿಂದ ದಂಡದ ಮೊತ್ತವನ್ನು ಮುಂದಿನ ತಿಂಗಳ ಸಂಬಳದಲ್ಲಿ ಒಂದೇ ಕಂತಿನಲ್ಲಿ ಸರ್ಕಾರದ ಲೆಕ್ಕ ಶೀರ್ಷಿಕೆಗೆ ಜಮಾ ಮಾಡಿ ವರದಿ ಸಲ್ಲಿಸಿ ಎಂದು ಪಾಂಡವಪುರ ಉಪ ವಿಭಾಗಾಧಿಕಾರಿ ಕೆ.ಆರ್ ಶ್ರೀನಿವಾಸ್ ಅವರಿಗೆ ಆಯೋಗವು ಸೂಚಿಸಿದೆ.
ಅಷ್ಟೆ ಅಲ್ಲದೇ ಅರ್ಜಿದಾರನಿಗೆ ಮಾಹತಿ ನೀಡಲು 240ಕ್ಕೂ ಹೆಚ್ಚು ದಿನ ವಿಳಂಬವಾಗಿರುವ ಬಗ್ಗೆ ಗಂಭೀರವಾಗಿ ಪರಿಗಣಿಸಿರುವ ಆಯೋಗ, ಕಷ್ಟ ಇತರೆ ವೆಚ್ಚಗಳಿಗಾಗಿ ಆರ್ಜಿದಾರನಿಗೆ 10 ಸಾವಿರ ರೂ ಪರಿಹಾರವನ್ನು 15 ದಿನದೊಳಗೆ ನೀಡುವಂತೆ ಆದೇಶಿಸಿದೆ. ತಪ್ಪಿದಲ್ಲಿ ನಾಗರಿಕ ಸೇವಾ ನಿಯಮಗಳ ಪ್ರಕಾರ ಶಿಸ್ತುಕ್ರಮಕ್ಕೆ ಶಿಫಾರಸು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದೆ.
ಪ್ರಕರಣದ ವಿಚಾರಣೆಯನ್ನು ಏ 9 ರಂದು ಬೆಳಿಗ್ಗೆ 11ಕ್ಕೆ ನಿಗದಿ ಮಾಡಿರುವ ಆಯೋಗವು, ಆ ದಿನ ಖುದ್ದು ಹಾಜರಾಗುವಂತೆ ತಹಶೀಲ್ದಾರ್ ಅವರಿಗೆ ಸೂಚಿಸಿದೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…