ಪಾಂಡವಪುರ : ಸಾಲ ಬಾಧೆ ತಾಳಲಾರದೆ ರೈತನೋರ್ವ ಮನೆಯ ಸೂರಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಕ್ಯಾತನಹಳ್ಳಿಯಲ್ಲಿ ನಡೆದಿದೆ.
ಕ್ಯಾತನಹಳ್ಳಿ ಗ್ರಾಮದ ಕೃಷ್ಣೇಗೌಡ ಅವರ ಪುತ್ರ ಕೆ. ಉಮೇಶ್ (೪೫) ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದಾನೆ.
ಮೃತ ಕೆ.ಉಮೇಶ್ ಕ್ಯಾತನಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಉಪಾಧ್ಯಕ್ಷ ಹಾಗೂ ಹಾಲಿ ನಿರ್ದೇಶಕರಾಗಿದ್ದು, ಇವರು ತಂದೆಯಿಂದ ಬಳುವಳಿಯಾಗಿ ಬಂದಿದ್ದ ೧.೫ ಎಕರೆ ಜಮೀನಿನಲ್ಲಿ ಈ ಮೊದಲು ತರಕಾರಿ ಬೆಳೆದು ಕೈಸುಟ್ಟಿಕೊಂಡಿದ್ದರು. ನಂತರದಲ್ಲಿ ವಿವಿಧ ಸಹಕಾರಿ ಬ್ಯಾಂಕುಗಳಿಂದ ಸಾಲ ಪಡೆದು ತೆಂಗು, ಅಡಿಕೆ ಜತೆಗೆ ಇತರೆ ಮಿಶ್ರ ಬೆಳೆಗಳನ್ನು ಬೆಳೆದಿದ್ದರು ಎನ್ನಲಾಗಿದೆ.
ಆದರೆ `ಬರ’ ಹಿನ್ನೆಲೆಯಲ್ಲಿ ಬೆಳೆದ ಬೆಳೆ ಕೈಸೇರದೆ ಪಡೆದಿದ್ದ ಸಾಲ ಮರುಪಾವತಿಸಲಾಗದೆ ಸಾಲದ ಸುಳಿಗೆ ಸಿಲುಕಿದ್ದರು. ಕ್ಯಾತನಹಳ್ಳಿಯ ಜಿಲ್ಲಾ ಸಹಕಾರ ಬ್ಯಾಂಕ್ನಲ್ಲಿ ಚಿನ್ನಾಭರಣಗಳ ಮೇಲಿನ ಸಾಲ ೬ ಲಕ್ಷ ಸಾಲ ಹಾಗೂ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಮರ್ನಾಲ್ಕು ಲಕ್ಷ ಸಾಲದ ಜತೆಗೆ ಖಾಸಗಿ ಲೇವಾದೇವಿದಾರರಿಂದಲೂ ಲಕ್ಷಾಂತರ ಸಾಲ ಮಾಡಿದ್ದರು ಎಂದು ತಿಳಿದು ಬಂದಿದೆ.
ಬ್ಯಾಂಕ್ ಸೇರಿದಂತೆ ಇತರೆಡೆಗಳಿಂದ ಸಾಲ ಮರುಪಾವತಿಸುವಂತೆ ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಗುರುವಾರ ಬೆಳಿಗ್ಗೆ ೭.೩೦ರ ಸಮದಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪಾಂಡವಪುರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ವಾರಸುದಾರರಿಗೆ ಒಪ್ಪಿಸಲಾಗಿದೆ.
ಈ ಸಂಬಂಧ ಮೃತರ ಸಹೋದರ ಗೋಪಾಲ್ ನೀಡಿದ ದೂರಿನ ಮೇರೆಗೆ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮೃತರಿಗೆ ಪತ್ನಿ, ಓರ್ವ ಪುತ್ರಿ ಹಾಗೂ ಓರ್ವ ಪುತ್ರ ಇದ್ದಾರೆ.
ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…
ಹೈದರಾಬಾದ್: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…
ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…
ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್ ಐಕಾನ್ ಲಿಯಾಂಡರ್ ಪೇಸ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…