ಮಂಡ್ಯ

ಪಾಂಡವಪುರ: ಸಾಲ ಬಾಧೆಯಿಂದ ರೈತ ನೇಣಿಗೆ ಶರಣು

ಪಾಂಡವಪುರ : ಸಾಲ ಬಾಧೆ ತಾಳಲಾರದೆ ರೈತನೋರ್ವ ಮನೆಯ ಸೂರಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಕ್ಯಾತನಹಳ್ಳಿಯಲ್ಲಿ ನಡೆದಿದೆ.

ಕ್ಯಾತನಹಳ್ಳಿ ಗ್ರಾಮದ ಕೃಷ್ಣೇಗೌಡ ಅವರ ಪುತ್ರ ಕೆ. ಉಮೇಶ್ (೪೫) ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದಾನೆ.
ಮೃತ ಕೆ.ಉಮೇಶ್ ಕ್ಯಾತನಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಉಪಾಧ್ಯಕ್ಷ ಹಾಗೂ ಹಾಲಿ ನಿರ್ದೇಶಕರಾಗಿದ್ದು, ಇವರು ತಂದೆಯಿಂದ ಬಳುವಳಿಯಾಗಿ ಬಂದಿದ್ದ ೧.೫ ಎಕರೆ ಜಮೀನಿನಲ್ಲಿ ಈ ಮೊದಲು ತರಕಾರಿ ಬೆಳೆದು ಕೈಸುಟ್ಟಿಕೊಂಡಿದ್ದರು. ನಂತರದಲ್ಲಿ ವಿವಿಧ ಸಹಕಾರಿ ಬ್ಯಾಂಕುಗಳಿಂದ ಸಾಲ ಪಡೆದು ತೆಂಗು, ಅಡಿಕೆ ಜತೆಗೆ ಇತರೆ ಮಿಶ್ರ ಬೆಳೆಗಳನ್ನು ಬೆಳೆದಿದ್ದರು ಎನ್ನಲಾಗಿದೆ.

ಆದರೆ `ಬರ’ ಹಿನ್ನೆಲೆಯಲ್ಲಿ ಬೆಳೆದ ಬೆಳೆ ಕೈಸೇರದೆ ಪಡೆದಿದ್ದ ಸಾಲ ಮರುಪಾವತಿಸಲಾಗದೆ ಸಾಲದ ಸುಳಿಗೆ ಸಿಲುಕಿದ್ದರು. ಕ್ಯಾತನಹಳ್ಳಿಯ ಜಿಲ್ಲಾ ಸಹಕಾರ ಬ್ಯಾಂಕ್‌ನಲ್ಲಿ ಚಿನ್ನಾಭರಣಗಳ ಮೇಲಿನ ಸಾಲ ೬ ಲಕ್ಷ ಸಾಲ ಹಾಗೂ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಮರ‍್ನಾಲ್ಕು ಲಕ್ಷ ಸಾಲದ ಜತೆಗೆ ಖಾಸಗಿ ಲೇವಾದೇವಿದಾರರಿಂದಲೂ ಲಕ್ಷಾಂತರ ಸಾಲ ಮಾಡಿದ್ದರು ಎಂದು ತಿಳಿದು ಬಂದಿದೆ.

ಬ್ಯಾಂಕ್ ಸೇರಿದಂತೆ ಇತರೆಡೆಗಳಿಂದ ಸಾಲ ಮರುಪಾವತಿಸುವಂತೆ ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಗುರುವಾರ ಬೆಳಿಗ್ಗೆ ೭.೩೦ರ ಸಮದಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪಾಂಡವಪುರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ವಾರಸುದಾರರಿಗೆ ಒಪ್ಪಿಸಲಾಗಿದೆ.

ಈ ಸಂಬಂಧ ಮೃತರ ಸಹೋದರ ಗೋಪಾಲ್ ನೀಡಿದ ದೂರಿನ ಮೇರೆಗೆ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮೃತರಿಗೆ ಪತ್ನಿ, ಓರ್ವ ಪುತ್ರಿ ಹಾಗೂ ಓರ್ವ ಪುತ್ರ ಇದ್ದಾರೆ.

andolanait

Recent Posts

ಸೈದ್ಧಾಂತಿಕ ಬದ್ಧತೆ; ಪಕ್ಷದ ಸಿದ್ಧಾಂತದಲ್ಲಿ ರಾಜಿ ಸಲ್ಲದು ; ಡಿಕೆಶಿಗೆ ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…

8 hours ago

ಹೊಸ ಸಚಿವ ಸಂಪುಟ ರಚನೆ ಬಗ್ಗೆ ಖರ್ಗೆ ಹೇಳಿದಿಷ್ಟು…

ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…

10 hours ago

ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ನಾಯಕರ ನಡುವೆ ಪೈಪೋಟಿ

ಬೆಂಗಳೂರು : ಡಿ.ಕೆ.ಶಿವಕುಮಾರ್‌ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…

13 hours ago

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

16 hours ago

ಭಾನುವಾರದ ಹಾಡುಪಾಡು | ಶಾಲೆಯೆಂಬ ಕಟ್ಟಡಗಳಿಗೆ ಜೀವ ಬರುವ ಹೊತ್ತು…..

ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…

17 hours ago

ಭಾನುವಾರದ ಹಾಡುಪಾಡು | ಜೂನ್ ಬಂತು ಎಂದರೆ ಶಿಕ್ಷಕರಿಗೆ ಸುಗ್ಗಿ ಕಾಲ

ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…

17 hours ago