ಪಾಂಡವಪುರ : ಸಾಲ ಬಾಧೆ ತಾಳಲಾರದೆ ರೈತನೋರ್ವ ಮನೆಯ ಸೂರಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಕ್ಯಾತನಹಳ್ಳಿಯಲ್ಲಿ ನಡೆದಿದೆ.
ಕ್ಯಾತನಹಳ್ಳಿ ಗ್ರಾಮದ ಕೃಷ್ಣೇಗೌಡ ಅವರ ಪುತ್ರ ಕೆ. ಉಮೇಶ್ (೪೫) ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದಾನೆ.
ಮೃತ ಕೆ.ಉಮೇಶ್ ಕ್ಯಾತನಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಉಪಾಧ್ಯಕ್ಷ ಹಾಗೂ ಹಾಲಿ ನಿರ್ದೇಶಕರಾಗಿದ್ದು, ಇವರು ತಂದೆಯಿಂದ ಬಳುವಳಿಯಾಗಿ ಬಂದಿದ್ದ ೧.೫ ಎಕರೆ ಜಮೀನಿನಲ್ಲಿ ಈ ಮೊದಲು ತರಕಾರಿ ಬೆಳೆದು ಕೈಸುಟ್ಟಿಕೊಂಡಿದ್ದರು. ನಂತರದಲ್ಲಿ ವಿವಿಧ ಸಹಕಾರಿ ಬ್ಯಾಂಕುಗಳಿಂದ ಸಾಲ ಪಡೆದು ತೆಂಗು, ಅಡಿಕೆ ಜತೆಗೆ ಇತರೆ ಮಿಶ್ರ ಬೆಳೆಗಳನ್ನು ಬೆಳೆದಿದ್ದರು ಎನ್ನಲಾಗಿದೆ.
ಆದರೆ `ಬರ’ ಹಿನ್ನೆಲೆಯಲ್ಲಿ ಬೆಳೆದ ಬೆಳೆ ಕೈಸೇರದೆ ಪಡೆದಿದ್ದ ಸಾಲ ಮರುಪಾವತಿಸಲಾಗದೆ ಸಾಲದ ಸುಳಿಗೆ ಸಿಲುಕಿದ್ದರು. ಕ್ಯಾತನಹಳ್ಳಿಯ ಜಿಲ್ಲಾ ಸಹಕಾರ ಬ್ಯಾಂಕ್ನಲ್ಲಿ ಚಿನ್ನಾಭರಣಗಳ ಮೇಲಿನ ಸಾಲ ೬ ಲಕ್ಷ ಸಾಲ ಹಾಗೂ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಮರ್ನಾಲ್ಕು ಲಕ್ಷ ಸಾಲದ ಜತೆಗೆ ಖಾಸಗಿ ಲೇವಾದೇವಿದಾರರಿಂದಲೂ ಲಕ್ಷಾಂತರ ಸಾಲ ಮಾಡಿದ್ದರು ಎಂದು ತಿಳಿದು ಬಂದಿದೆ.
ಬ್ಯಾಂಕ್ ಸೇರಿದಂತೆ ಇತರೆಡೆಗಳಿಂದ ಸಾಲ ಮರುಪಾವತಿಸುವಂತೆ ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಗುರುವಾರ ಬೆಳಿಗ್ಗೆ ೭.೩೦ರ ಸಮದಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪಾಂಡವಪುರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ವಾರಸುದಾರರಿಗೆ ಒಪ್ಪಿಸಲಾಗಿದೆ.
ಈ ಸಂಬಂಧ ಮೃತರ ಸಹೋದರ ಗೋಪಾಲ್ ನೀಡಿದ ದೂರಿನ ಮೇರೆಗೆ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮೃತರಿಗೆ ಪತ್ನಿ, ಓರ್ವ ಪುತ್ರಿ ಹಾಗೂ ಓರ್ವ ಪುತ್ರ ಇದ್ದಾರೆ.
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…
ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…