ಮಂಡ್ಯ

ʻಕನ್ನಡಕ್ಕಾಗಿ ಓಟʼ ಬೃಹತ್‌ ಮ್ಯಾರಥಾನ್‌ನಲ್ಲಿ ಭಾಗವಹಿಸಿ : ಪಿ. ರವಿಕುಮಾರ್

ಮಂಡ್ಯ: ಜಿಲ್ಲೆಯಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ “ಕನ್ನಡಕ್ಕಾಗಿ ಓಟ” ಎಂಬ ಘೋಷವಾಕ್ಯದೊಂದಿಗೆ ಮ್ಯಾರಥಾನ್ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದ್ದು, ಪ್ರತಿಯೊಬ್ಬರೂ ಮ್ಯಾರಥಾನ್‌ನಲ್ಲಿ ಭಾಗವಹಿಸಬೇಕು ಎಂದು ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ. ರವಿಕುಮಾರ್ ತಿಳಿಸಿದರು.

ಅವರು ಇಂದು(ಡಿ.15) ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ 87ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಏರ್ಪಡಿಸಲಾಗಿರುವ “ಕನ್ನಡಕ್ಕಾಗಿ ಓಟ” ಮ್ಯಾರಥಾನ್ ಕಾರ್ಯಕ್ರಮದ ಟೀ ಶರ್ಟ್ ಬಿಡುಗಡೆ ಮಾಡಿ ಮಾತನಾಡಿದರು.

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ “ಕನ್ನಡಕ್ಕಾಗಿ ಓಟ” ಮ್ಯಾರಥಾನ್ ಡಿಸೆಂಬರ್ 17 ರಂದು ಬೆಳಿಗ್ಗೆ 7.00 ಗಂಟೆಗೆ ನಗರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಿಂದ ಸಮ್ಮೇಳನ ನಡೆಯುವ ಸ್ಥಳ (ಸ್ಯಾಂಟೋ ಆಸ್ಪತ್ರೆ ಹಿಂಭಾಗ) ದವರೆಗೆ ಹಮ್ಮಿಕೊಳ್ಳಲಾಗಿದೆ. ಈ ಸ್ಪರ್ಧೆಯಲ್ಲಿ ಪ್ರತಿಯೊಬ್ಬರೂ ಭಾಗವಹಿಸಿ ಎಂದರು.

ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಕುಡಿಯುವ ನೀರು, ಬಿಸ್ಕೆಟ್ ವ್ಯವಸ್ಥೆ ಮಾಡಲಾಗಿದೆ. ಪೊಲೀಸ್ ಬಂದೋಬಸ್ತ್ ವ್ಯವಸ್ಥೆ, ವೈದ್ಯರ ತಂಡ ಸೇರಿದಂತೆ ಎಲ್ಲಾ ಸಕಲ ಸಿದ್ದತೆಗಳನ್ನು ಜಿಲ್ಲಾಡಳಿತ ಮಾಡಿಕೊಂಡಿದೆ ಎಂದು ಹೇಳಿದರು.

ಆರೋಗ್ಯಕ್ಕಾಗಿ ಓಡಿ ನಿಮ್ಮ ಆರೋಗ್ಯವನ್ನು ನೀವೇ ವೃದ್ಧಿಸಿಕೊಳ್ಳಬೇಕು ಅದಕ್ಕಾಗಿಯಾದರೂ ಓಡಬೇಕು. ಸಾರ್ವಜನಿಕರು ಸಂತೋಷದಿಂದ ಈ ಸ್ಪರ್ಧೆಯಲ್ಲಿ ಭಾಗಿಯಾಗಬೇಕು ಎಂದರು.

ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅರ್ಥಪೂರ್ಣವಾಗಿ, ವಿಜೃಂಭಣೆಯಿಂದ ಎಲ್ಲರೂ ಒಟ್ಟಾಗಿ ಸೇರಿ ಆಚರಣೆ ಮಾಡಬೇಕು ಎಂದು ಹೇಳಿದರು.

ಸಮ್ಮೇಳನವು ಯಾವುದೇ ಅಡತಡೆ ಇಲ್ಲದೆ ನಡೆಯಬೇಕೆಂದು ಕಳೆದ 4,5 ತಿಂಗಳಿಂದಲೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವರು, ಜಿಲ್ಲೆಯ ಎಲ್ಲಾ ಶಾಸಕರು ಒಟ್ಟಾಗಿ ಸೇರಿ ನಿಭಾಯಿಸಿಕೊಂಡು ಹೋಗುತ್ತಿದ್ದಾರೆ. ಅದರಂತೆ ಜನರ ಸಹಕಾರವೂ ನಮಗೆ ಬಹಳ ಮುಖ್ಯ. ಆದ್ದರಿಂದ ಎಲ್ಲರೂ ಒಟ್ಟಾಗಿ ಸೇರಿ ಈ ಸಮ್ಮೇಳನದಲ್ಲಿ ಕೈ ಜೋಡಿಸಬೇಕು ಎಂದು ತಿಳಿಸಿದರು.

ಕನ್ನಡ ಸಾಹಿತ್ಯ ಸಮ್ಮೇಳನವು ಹಿಂದೆಂದಿಗಿಂತಲೂ ವಿಶಿಷ್ಟಮಯವಾಗಿ ಹಾಗೂ ವಿಶ್ವಮಟ್ಟದಲ್ಲಿ ಹೆಸರು ಮಾಡುವ ನಿಟ್ಟಿನಲ್ಲಿ ಮಂಡ್ಯ ಜಿಲ್ಲೆಯಲ್ಲಿರುವ ಎಲ್ಲಾ ಸಾರ್ವಜನಿಕರು, ಶಾಲಾ ಕಾಲೇಜಿನ ವಿದ್ಯಾರ್ಥಿಗಳು, ಎಲ್ಲಾ ಸಂಘ-ಸಂಸ್ಥೆಯ ಪದಾಧಿಕಾರಿಗಳು, ಸದಸ್ಯರುಗಳು, ಎಲ್ಲಾ ಅಧಿಕಾರಿ- ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮ್ಯಾರಥಾನ್ ಸ್ಪರ್ಧೆಯಲ್ಲಿ ಭಾಗವಹಿಸಿ ಎಂದು ಹೇಳಿದರು.

ಸ್ಪರ್ಧೆಯಲ್ಲಿ ಸುಮಾರು 35,000 ದಿಂದ 40,000 ಸಾವಿರದವರೆಗೂ ಜನರು ಭಾಗವಹಿಸಬೇಕು. ಕಾರ್ಯಕ್ರಮದ ಉದ್ಘಾಟನೆಗೆ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ನಿರ್ಮಲಾನಂದ ಸ್ವಾಮೀಜಿ ಅವರು ಆಗಮಿಸಲಿದ್ದು ಅವರೊಡನೆ ವಿನಯ್ ಗುರೂಜಿ ಹಾಗೂ ಚಲನಚಿತ್ರದ ನಟ-ನಟಿಯರು ಕೂಡ ಆಗಮಿಸಲಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಎಂ ವಿ ಪ್ರಕಾಶ್ (ನಾಗೇಶ್), ಮುಡಾ ಅಧ್ಯಕ್ಷ ನಹೀಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಮೋಹನ್, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಂಚಾಲಕಿ ಮೀರಾ ಶಿವಲಿಂಗಯ್ಯ, ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಗೌರವ ಕಾರ್ಯದರ್ಶಿ ವಿ.ಹರ್ಷ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಟಿ-20 ವಿಶ್ವಕಪ್‌ | ಸ್ಕಾಟ್ಲೆಂಡ್‌ ವಿರುದ್ಧ ಇಂಗ್ಲೆಂಡ್‌ 5 ವಿಕೆಟ್‌ ಗೆಲುವು

ಕೋಲ್ಕತ್ತ : ಟಿ-20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ…

3 hours ago

ಡಿಕೆಶಿ ಮುಖ್ಯಮಂತ್ರಿ ಆಗೇ ಆಗ್ತರೆ : ಶಾಸಕ ಗಣಿಗ ರವಿಕುಮಾರ್‌

ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್‌…

3 hours ago

ಮೈಸೂರು | ಶಿವರಾತ್ರಿಗೆ ಎಲ್ಲೆಡೆ ಸಿದ್ಧತೆ

ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…

3 hours ago

ಮೈಸೂರು | 4 ಲಕ್ಷ ಮೌಲ್ಯದ ಡ್ರಗ್ಸ್ ವಶ‌ ; ಆರೋಪಿ ಬಂಧನ

ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…

3 hours ago

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ; ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಪ್ರಗತಿ : ಸಿಎಂ ಮೆಚ್ಚುಗೆ

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…

5 hours ago

ರಾಜ್ಯದ 22 ಸಾವಿರಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

​ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…

6 hours ago