ಮಂಡ್ಯ

ಮಂಡ್ಯ | ಇ-ಸ್ವತ್ತಿಗೆ 20 ಸಾವಿರ ಲಂಚ ; ಪಿಡಿಓ,ಬಿಲ್‌ಕಲೆಕ್ಟರ್‌ ಲೋಕಾ ಬಲೆಗೆ

ಕೆ.ಆರ್.ಪೇಟೆ : ತಾಲ್ಲೂಕಿನ ಶೀಳನೆರೆ ಹೋಬಳಿಯ ಮುರುಕನಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಯ್ಯದ್ ಮುಜಾಕಿರ್ ಹಾಗೂ ಬಿಲ್ ಕಲೆಕ್ಟರ್ ನಾಗೇಶ್ ಅವರು ರೈತರೊಬ್ಬರಿಂದ ಮನೆಯ ಇಸ್ವತ್ತು ಖಾತೆ ಮಾಡಿಕೊಡಲು 20ಸಾವಿರ ರೂ ಲಂಚ ಪಡೆಯುವಾಗ ಲೋಕಾಯುಕ್ತ ಇನ್ಸ್ಪೆಕ್ಟರ್ ಬಿ.ಪಿ.ಬ್ಯಾಟರಾಯಿಗೌಡ ಅವರ ತಂಡದ  ಬಲೆಗೆ ಬಿದ್ದಿದ್ದಾರೆ.

ಘಟನೆ ವಿವರ: ತಾಲ್ಲೂಕಿನ ಮುರುಕನಹಳ್ಳಿ ಗ್ರಾಮದ ಕಾಂತರಾಜು ಮತ್ತು ದೇವರಾಜು ಅವರು ತಮ್ಮ ತಂದೆಯಿಂದ ಬಂದ ಮನೆಯನ್ನು ವಿಭಾಗ ಪತ್ರ ಮಾಡಿಸಿಕೊಂಡು ಈ ವಿಭಾಗದ ಪತ್ರದಂತೆ ಖಾತೆ ಮಾಡಿಕೊಂಡುವಂತೆ ಕಾಂತರಾಜು ಜುಲೈ 30ರಂದು ಖಾತೆ ಮಾಡಿಕೊಡುವಂತೆ ಪಿಡಿಓ ಸಯ್ಯದ್ ಮುಜಾಕಿರ್ ಅವರಿಗೆ ಅರ್ಜಿ ಸಲ್ಲಿಸಿದ್ದಾರೆ.

ಆಗ ಇಸ್ವತ್ತು ಮತ್ತು ಖಾತೆಯನ್ನು ಬೇಗ ಮಾಡಿಕೊಡಲು 50ಸಾವಿರ ರೂ ನೀಡಬೇಕು ಎಂದು ಕೇಳಿದ್ದಾರೆ. ಆ.04ರಂದು ಮತ್ತೆ ಗ್ರಾಮ ಪಂಚಾಯಿತಿ ಕಚೇರಿಗೆ ಬಂದ ಕಾಂತರಾಜು 50ಸಾವಿರ ರೂ ಕೊಡಲು ನನ್ನಿಂದ ಸಾಧ್ಯವಿಲ್ಲ ಸಾರ್ ಕಡಿಮೆ ಮಾಡಿಕೊಳ್ಳಿ ಎಂದು ಪಿಡಿಓಗೆ ಕೇಳಿಕೊಂಡಿದ್ದಾರೆ. ಆಗ 40ಸಾವಿರಕ್ಕೆ ಒಪ್ಪಂದ ಮಾಡಿಕೊಂಡು ಬಂದು 20ಸಾವಿರ ರೂಗಳನ್ನು 10ದಿದೊಳಗೆ ಕೊಡುತ್ತೇನೆ ಎಂದು ಹೇಳಿದ್ದಾರೆ.

ಪಿಡಿಓ ಅವರು ಲಂಚಕ್ಕೆ ಬೇಡಿಕೆ ಇಡುವ ಸಂಭಾಷಣೆಯ ವಾಯ್ಸ್ ರೆಕಾರ್ಡ್ ಮಾಡಿಕೊಂಡು ಬಂದು ಮಂಡ್ಯದ ಲೋಕಾಯಕ್ತ ಎಸ್.ಪಿ ಸುರೇಶ್‌ಬಾಬು ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದರು. ಈ ದೂರಿನ ಮೇರೆಗೆ ಸುರೇಶ್ ಬಾಬು ಅವರ ನಿರ್ದೇಶನದ ಮೇರೆಗೆ ಲೋಕಾಯುಕ್ತ ಇನ್ಸ್ಪೆಕ್ಟರ್ ಬಿ.ಪಿ.ಬ್ಯಾಟರಾಯಗೌಡ ನೇತೃತ್ವದ ಅಧಿಕಾರಿಗಳ ತಂಡವು ಬುಧವಾರ ಮಧ್ಯಾಹ್ನ ಸುಮಾರು 4ಗಂಟೆ ಸಮಯದಲ್ಲಿ ದಾಳಿ ನಡೆಸಿ ಹೊನ್ನೇನಹಳ್ಳಿ ಗ್ರಾಮದ ಕಾಂತರಾಜು ಎಂಬ ರೈತನಿಂದ 20ಸಾವಿರ ರೂ ಪಡೆಯುತ್ತಿದ್ದಾಗ ದಾಳಿ ನಡೆಸಿ ಪಿಡಿಓ ಸಯ್ಯದ್ ಮುಜಾಕಿರ್ ಮತ್ತು ಬಿಲ್ ಕಲೆಕ್ಟರ್ ನಾಗೇಶ್ ಅವರನ್ನು 20ಸಾವಿರ ರೂ ಲಂಚದ ಸಮೇತ ಬಂಧಿಸಿದ್ದಾರೆ.

ದಾಳಿಯಲ್ಲಿ ಲೋಕಾಯುಕ್ತ ಸಿಬ್ಬಂದಿಗಳಾದ ಶಂಕರ್, ಸಿದ್ದಲಿಂಗಸ್ವಾಮಿ, ದಿನೇಶ್, ಶರತ್, ಮಹದೇವ್, ನವೀನ್, ಇಫ್ರಾನ್ ಮತ್ತಿತರರು ಭಾಗವಹಿಸಿದ್ದರು.

 

ಆಂದೋಲನ ಡೆಸ್ಕ್

Recent Posts

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

1 hour ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

2 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

4 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

7 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

7 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

7 hours ago