ಮಂಡ್ಯ

ಮಂಡ್ಯ | ಇ-ಸ್ವತ್ತಿಗೆ 20 ಸಾವಿರ ಲಂಚ ; ಪಿಡಿಓ,ಬಿಲ್‌ಕಲೆಕ್ಟರ್‌ ಲೋಕಾ ಬಲೆಗೆ

ಕೆ.ಆರ್.ಪೇಟೆ : ತಾಲ್ಲೂಕಿನ ಶೀಳನೆರೆ ಹೋಬಳಿಯ ಮುರುಕನಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಯ್ಯದ್ ಮುಜಾಕಿರ್ ಹಾಗೂ ಬಿಲ್ ಕಲೆಕ್ಟರ್ ನಾಗೇಶ್ ಅವರು ರೈತರೊಬ್ಬರಿಂದ ಮನೆಯ ಇಸ್ವತ್ತು ಖಾತೆ ಮಾಡಿಕೊಡಲು 20ಸಾವಿರ ರೂ ಲಂಚ ಪಡೆಯುವಾಗ ಲೋಕಾಯುಕ್ತ ಇನ್ಸ್ಪೆಕ್ಟರ್ ಬಿ.ಪಿ.ಬ್ಯಾಟರಾಯಿಗೌಡ ಅವರ ತಂಡದ  ಬಲೆಗೆ ಬಿದ್ದಿದ್ದಾರೆ.

ಘಟನೆ ವಿವರ: ತಾಲ್ಲೂಕಿನ ಮುರುಕನಹಳ್ಳಿ ಗ್ರಾಮದ ಕಾಂತರಾಜು ಮತ್ತು ದೇವರಾಜು ಅವರು ತಮ್ಮ ತಂದೆಯಿಂದ ಬಂದ ಮನೆಯನ್ನು ವಿಭಾಗ ಪತ್ರ ಮಾಡಿಸಿಕೊಂಡು ಈ ವಿಭಾಗದ ಪತ್ರದಂತೆ ಖಾತೆ ಮಾಡಿಕೊಂಡುವಂತೆ ಕಾಂತರಾಜು ಜುಲೈ 30ರಂದು ಖಾತೆ ಮಾಡಿಕೊಡುವಂತೆ ಪಿಡಿಓ ಸಯ್ಯದ್ ಮುಜಾಕಿರ್ ಅವರಿಗೆ ಅರ್ಜಿ ಸಲ್ಲಿಸಿದ್ದಾರೆ.

ಆಗ ಇಸ್ವತ್ತು ಮತ್ತು ಖಾತೆಯನ್ನು ಬೇಗ ಮಾಡಿಕೊಡಲು 50ಸಾವಿರ ರೂ ನೀಡಬೇಕು ಎಂದು ಕೇಳಿದ್ದಾರೆ. ಆ.04ರಂದು ಮತ್ತೆ ಗ್ರಾಮ ಪಂಚಾಯಿತಿ ಕಚೇರಿಗೆ ಬಂದ ಕಾಂತರಾಜು 50ಸಾವಿರ ರೂ ಕೊಡಲು ನನ್ನಿಂದ ಸಾಧ್ಯವಿಲ್ಲ ಸಾರ್ ಕಡಿಮೆ ಮಾಡಿಕೊಳ್ಳಿ ಎಂದು ಪಿಡಿಓಗೆ ಕೇಳಿಕೊಂಡಿದ್ದಾರೆ. ಆಗ 40ಸಾವಿರಕ್ಕೆ ಒಪ್ಪಂದ ಮಾಡಿಕೊಂಡು ಬಂದು 20ಸಾವಿರ ರೂಗಳನ್ನು 10ದಿದೊಳಗೆ ಕೊಡುತ್ತೇನೆ ಎಂದು ಹೇಳಿದ್ದಾರೆ.

ಪಿಡಿಓ ಅವರು ಲಂಚಕ್ಕೆ ಬೇಡಿಕೆ ಇಡುವ ಸಂಭಾಷಣೆಯ ವಾಯ್ಸ್ ರೆಕಾರ್ಡ್ ಮಾಡಿಕೊಂಡು ಬಂದು ಮಂಡ್ಯದ ಲೋಕಾಯಕ್ತ ಎಸ್.ಪಿ ಸುರೇಶ್‌ಬಾಬು ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದರು. ಈ ದೂರಿನ ಮೇರೆಗೆ ಸುರೇಶ್ ಬಾಬು ಅವರ ನಿರ್ದೇಶನದ ಮೇರೆಗೆ ಲೋಕಾಯುಕ್ತ ಇನ್ಸ್ಪೆಕ್ಟರ್ ಬಿ.ಪಿ.ಬ್ಯಾಟರಾಯಗೌಡ ನೇತೃತ್ವದ ಅಧಿಕಾರಿಗಳ ತಂಡವು ಬುಧವಾರ ಮಧ್ಯಾಹ್ನ ಸುಮಾರು 4ಗಂಟೆ ಸಮಯದಲ್ಲಿ ದಾಳಿ ನಡೆಸಿ ಹೊನ್ನೇನಹಳ್ಳಿ ಗ್ರಾಮದ ಕಾಂತರಾಜು ಎಂಬ ರೈತನಿಂದ 20ಸಾವಿರ ರೂ ಪಡೆಯುತ್ತಿದ್ದಾಗ ದಾಳಿ ನಡೆಸಿ ಪಿಡಿಓ ಸಯ್ಯದ್ ಮುಜಾಕಿರ್ ಮತ್ತು ಬಿಲ್ ಕಲೆಕ್ಟರ್ ನಾಗೇಶ್ ಅವರನ್ನು 20ಸಾವಿರ ರೂ ಲಂಚದ ಸಮೇತ ಬಂಧಿಸಿದ್ದಾರೆ.

ದಾಳಿಯಲ್ಲಿ ಲೋಕಾಯುಕ್ತ ಸಿಬ್ಬಂದಿಗಳಾದ ಶಂಕರ್, ಸಿದ್ದಲಿಂಗಸ್ವಾಮಿ, ದಿನೇಶ್, ಶರತ್, ಮಹದೇವ್, ನವೀನ್, ಇಫ್ರಾನ್ ಮತ್ತಿತರರು ಭಾಗವಹಿಸಿದ್ದರು.

 

ಆಂದೋಲನ ಡೆಸ್ಕ್

Recent Posts

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

24 mins ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

50 mins ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

2 hours ago

ಪ್ರಕೃತಿ ವಿಕೋಪ ನಿರ್ವಹಣೆ: ಜಿಲ್ಲೆಗಳ ಮೇಲುಸ್ತುವಾರಿಗೆ ಸಚಿವರ ನೇಮಕ

ಬೆಂಗಳೂರು: ರಾಜ್ಯದಲ್ಲಿ ಪ್ರಕೃತಿ ವಿಕೋಪ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ನಡೆಸುವ ಉದ್ದೇಶದಿಂದ ಸಚಿವರಿಗೆ ವಿವಿಧ ಜಿಲ್ಲೆಗಳ ಮೇಲುಸ್ತುವಾರಿಯನ್ನು ಹಂಚಿಕೆ ಮಾಡಿ ಅಧಿಸೂಚನೆ…

2 hours ago

ವೆನಿಜುವೆಲಾ ದೇಶದಲ್ಲಿ ಕಂಡು ಕೇಳರಿಯದ ಭೀಕರ ಭೂಕಂಪ

ವೆನಿಜುವೆಲಾ: ವೆನಿಜುವೆಲಾ ದೇಶದ ಇತಿಹಾಸದಲ್ಲೇ ಕಂಡು ಕೇಳರಿಯದ ಭೀಕರ ಭೂಕಂಪ ಸಂಭವಿಸಿ ಸಾವಿರಾರು ಜನ ಸಾವನ್ನಪ್ಪಿದ್ದು, ಭಾರೀ ಪ್ರಮಾಣದ ಜನರು…

3 hours ago

ವೆನೆಜುವೆಲಾದಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ತುರ್ತು ಪರಿಸ್ಥಿತಿ ಘೋಷಣೆ

ಕ್ಯಾರಕಾಸ್‌ : ವೆನೆಜುವೆಲಾ ಕರಾವಳಿಯ ಸಮೀಪ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳು ದೇಶವನ್ನು ಬೆಚ್ಚಿಬೀಳಿಸಿವೆ. ರಿಕ್ಟರ್ ಮಾಪಕದಲ್ಲಿ…

6 hours ago