ಮಂಡ್ಯ

ಮೇಲುಕೋಟೆಯಲ್ಲಿ ಹೆಜ್ಜೇನು ಕಡಿತ : ಭಕ್ತರ ಪರದಾಟ

ಮೇಲುಕೋಟೆ: ಅಷ್ಠತೀರ್ಥೋತ್ಸವದ ವೇಳೆ ಯಾದವತೀರ್ಥದ ಸಮೀಪ ಜೇನುಕಲ್ಲು ಮಂಟಿ ಬಳಿ ಹೆಜ್ಜೇನುದಾಳಿ ಮಾಡಿದ ಪರಿಣಾಮ ಭಕ್ತರು ಆತಂಕದಿಂದ ದೌಡಾಯಿಸಿದ ಘಟನೆ ನಡೆದಿದೆ. ಉತ್ಸವದಲ್ಲಿ ಭಾಗಿಯಾಗಿದ್ದ ಭಕ್ತರೊಬ್ಬರು ಜೇನುಕಟ್ಟಿರುವುದನ್ನು ಗಮನಿಸದೆ ಕರ್ಪೂರ ಹಚ್ಚಿದ ಪರಿಣಾಮ ಹೊಗೆಗೆ ಜೇನು ಚದುರಿದೆ. ರಾಜ್ಯ ಮತ್ತು ಆಂದ್ರಪ್ರದೇಶದ ೩೦ಕ್ಕೂ ಹೆಚ್ಚು ಮಂದಿಯ ಮೇಲೆ ಜೇನುದಾಳಿ ಮಾಡಿ ಕಚ್ಚಿದೆ.

ಮೇಲುಕೋಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಾಜಮುಡಿ, ತೊಟ್ಟಲಮಡು ಜಾತ್ರೆಯ ದಿನವೂ ವೈದ್ಯರಿಲ್ಲದ ಕಾರಣ ನರ್ಸ್‌ಗಳೇ ಚಿಕಿತ್ಸೆ ನೀಡಿದ್ದಾರೆ. ೨೦ ಮಂದಿ ಭಕ್ತರಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ವೈದ್ಯರಿಲ್ಲದ ಕಾರಣ ಗಂಭೀರ ದಾಳಿಗೊಳಗಾದ ಎಂಟು ಮಂದಿ ಭಕ್ತರಾದ ಆಂದ್ರಪ್ರದೇಶದ ಜಯಶ್ರೀ, ರವಿಶಂಕರ್, ವಿಜಯಲಕ್ಷಿ, ನಾರಾಯಣನ್, ತಮಿಳುನಾಡಿನ ಬಾಲಾಜಿರಾವ್, ಮೋಹನ್, ಕುಮಾರ್, ಬೆಂಗಳೂರಿನ ರಾಜವರ್ಷನ್ ಮತ್ತು ಶ್ರೀರಂಗಪಟ್ಟಣದ ಮೋಹನ್‌ಕುಮಾರ್ ಅವರುಗಳನ್ನು ತಾಲ್ಲೂಕು ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಆಂಬುಲೆನ್ಸ್ ಮೂಲಕ ಕಳುಹಿಸಿಕೊಡಲಾಯಿತು.

ಯಾರಿಗೂ ಪ್ರಾಣಾಪಾಯವಿಲ್ಲ ಎಂದು ಕರ್ತವ್ಯ ನಿರತ ನರ್ಸ್‌ಗಳು ಮಾಹಿತಿ ನೀಡಿದ್ದಾರೆ. ಮೇಲುಕೋಟೆಯಲ್ಲಿ ವೈದ್ಯರಿಲ್ಲದೆ ಚಿಕಿತ್ಸೆಗಾಗಿ ಭಕ್ತರು ಪರದಾಡಿದ ಕಾರಣ ನಾಗರೀಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಜೇನು ದಾಳಿಯ ವಿಚಾರ ತಿಳಿಯುತ್ತಿದ್ದಂತೆ ಪಲಾಶರ ತೀರ್ಥದ ಬಳಿ ಉತ್ಸವದ ಜೊತೆಯಲ್ಲಿದ್ದ ಪಾರುಪತ್ತೇಗಾರರಾದ ಸ್ಥಾನೀಕಂ ಶ್ರೀನಿವಾಸನರಸಿಂಹನ್ ಗುರೂಜಿ ಮತ್ತು ಎಂ.ಎನ್.ಪಾರ್ಥಸಾರಥಿ ಆಸ್ಪತ್ರೆ ಸಿಬ್ಬಂದಿಯನ್ನು ಸಂಪರ್ಕಿಸಿ ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದಾರೆ. ಭಕ್ತರಿಗೆ ಸಾಂತ್ವನ ಹೇಳಿ ಧೈರ್ಯತುಂಬಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆಪಡೆಯಲು ಸಹಕಾರ ನೀಡಿದ್ದಾರೆ.

andolana

Recent Posts

ಮುಡಾಗೆ ಆರ್ಥಿಕ ಸಂಕಷ್ಟ; 20 ಕೋಟಿ ರೂ ನಷ್ಟ

ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…

53 mins ago

ಆಂದೋಲನ ಫಲಶ್ರುತಿ: ಕೊನೆಗೂ ತೆರವಾಯ್ತು ಬೃಹತ್‌ ಮರದ ಕಾಂಡ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…

1 hour ago

ಜಂಬೂ ಸವಾರಿ ಮಾರ್ಗದಲ್ಲಿ ಸಣ್ಣ ಬದಲಾವಣೆ

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…

1 hour ago

ಪೈಲ್ವಾನರ ಕಸರತ್ತಿಗೆ ಗರಡಿ ಮನೆಗಳು ಸಜ್ಜು

ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…

1 hour ago

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

9 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

11 hours ago