ಮಂಡ್ಯ

ಮೇಲುಕೋಟೆಯಲ್ಲಿ ಹೆಜ್ಜೇನು ಕಡಿತ : ಭಕ್ತರ ಪರದಾಟ

ಮೇಲುಕೋಟೆ: ಅಷ್ಠತೀರ್ಥೋತ್ಸವದ ವೇಳೆ ಯಾದವತೀರ್ಥದ ಸಮೀಪ ಜೇನುಕಲ್ಲು ಮಂಟಿ ಬಳಿ ಹೆಜ್ಜೇನುದಾಳಿ ಮಾಡಿದ ಪರಿಣಾಮ ಭಕ್ತರು ಆತಂಕದಿಂದ ದೌಡಾಯಿಸಿದ ಘಟನೆ ನಡೆದಿದೆ. ಉತ್ಸವದಲ್ಲಿ ಭಾಗಿಯಾಗಿದ್ದ ಭಕ್ತರೊಬ್ಬರು ಜೇನುಕಟ್ಟಿರುವುದನ್ನು ಗಮನಿಸದೆ ಕರ್ಪೂರ ಹಚ್ಚಿದ ಪರಿಣಾಮ ಹೊಗೆಗೆ ಜೇನು ಚದುರಿದೆ. ರಾಜ್ಯ ಮತ್ತು ಆಂದ್ರಪ್ರದೇಶದ ೩೦ಕ್ಕೂ ಹೆಚ್ಚು ಮಂದಿಯ ಮೇಲೆ ಜೇನುದಾಳಿ ಮಾಡಿ ಕಚ್ಚಿದೆ.

ಮೇಲುಕೋಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಾಜಮುಡಿ, ತೊಟ್ಟಲಮಡು ಜಾತ್ರೆಯ ದಿನವೂ ವೈದ್ಯರಿಲ್ಲದ ಕಾರಣ ನರ್ಸ್‌ಗಳೇ ಚಿಕಿತ್ಸೆ ನೀಡಿದ್ದಾರೆ. ೨೦ ಮಂದಿ ಭಕ್ತರಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ವೈದ್ಯರಿಲ್ಲದ ಕಾರಣ ಗಂಭೀರ ದಾಳಿಗೊಳಗಾದ ಎಂಟು ಮಂದಿ ಭಕ್ತರಾದ ಆಂದ್ರಪ್ರದೇಶದ ಜಯಶ್ರೀ, ರವಿಶಂಕರ್, ವಿಜಯಲಕ್ಷಿ, ನಾರಾಯಣನ್, ತಮಿಳುನಾಡಿನ ಬಾಲಾಜಿರಾವ್, ಮೋಹನ್, ಕುಮಾರ್, ಬೆಂಗಳೂರಿನ ರಾಜವರ್ಷನ್ ಮತ್ತು ಶ್ರೀರಂಗಪಟ್ಟಣದ ಮೋಹನ್‌ಕುಮಾರ್ ಅವರುಗಳನ್ನು ತಾಲ್ಲೂಕು ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಆಂಬುಲೆನ್ಸ್ ಮೂಲಕ ಕಳುಹಿಸಿಕೊಡಲಾಯಿತು.

ಯಾರಿಗೂ ಪ್ರಾಣಾಪಾಯವಿಲ್ಲ ಎಂದು ಕರ್ತವ್ಯ ನಿರತ ನರ್ಸ್‌ಗಳು ಮಾಹಿತಿ ನೀಡಿದ್ದಾರೆ. ಮೇಲುಕೋಟೆಯಲ್ಲಿ ವೈದ್ಯರಿಲ್ಲದೆ ಚಿಕಿತ್ಸೆಗಾಗಿ ಭಕ್ತರು ಪರದಾಡಿದ ಕಾರಣ ನಾಗರೀಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಜೇನು ದಾಳಿಯ ವಿಚಾರ ತಿಳಿಯುತ್ತಿದ್ದಂತೆ ಪಲಾಶರ ತೀರ್ಥದ ಬಳಿ ಉತ್ಸವದ ಜೊತೆಯಲ್ಲಿದ್ದ ಪಾರುಪತ್ತೇಗಾರರಾದ ಸ್ಥಾನೀಕಂ ಶ್ರೀನಿವಾಸನರಸಿಂಹನ್ ಗುರೂಜಿ ಮತ್ತು ಎಂ.ಎನ್.ಪಾರ್ಥಸಾರಥಿ ಆಸ್ಪತ್ರೆ ಸಿಬ್ಬಂದಿಯನ್ನು ಸಂಪರ್ಕಿಸಿ ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದಾರೆ. ಭಕ್ತರಿಗೆ ಸಾಂತ್ವನ ಹೇಳಿ ಧೈರ್ಯತುಂಬಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆಪಡೆಯಲು ಸಹಕಾರ ನೀಡಿದ್ದಾರೆ.

andolana

Recent Posts

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…

4 hours ago

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

4 hours ago

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

5 hours ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

6 hours ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

8 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

10 hours ago