ಮಂಡ್ಯ

ನಿಯಮ ಪಾಲಿಸದ ಸವಾರರಿಗೆ ದಂಡ ಪ್ರಯೋಗ

ಮಂಡ್ಯ : ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್‌ವೇನಲ್ಲಿ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳ ಸಂಚಾರಕ್ಕೆ ಆ.1ರಿಂದ ನಿರ್ಬಂಧ ವಿಧಿಸಲಾಗಿದ್ದು, ಎರಡನೇ ದಿನವಾದ ಬುಧವಾರವೂ ಸಹ ಪೊಲೀಸರ ಕಾರ್ಯಾಚರಣೆ ಮುಂದುವರೆದಿತ್ತು.
ರಾಷ್ಟ್ರೀಯ ಹೆದ್ದಾರಿ ಹಾಗೂ ಪೊಲೀಸ್ ಇಲಾಖೆಯ ಕಟ್ಟುನಿಟ್ಟಿನ ಆದೇಶವನ್ನು ಜಾರಿಗೊಳಿಸಲು ಪೊಲೀಸರು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದು, ನಗರದ ಹೊರವಲಯ ಶ್ರೀನಿವಾಸಪುರ ಗೇಟ್‌ನ ಅಮರಾವತಿ ಹೋಟೆಲ್ ಸಮೀಪ ನೀಡಿರುವ ನಿರ್ಗಮನದ ಸ್ಥಳದಲ್ಲಿ ಹೊಸ ರೂಲ್ಸ್ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.

500 ರೂ. ದಂಡ :ನಿರ್ಬಂಧದ ನಡುವೆಯು ನಿಯಮ ಪಾಲಿಸದೆ ಕೆಲ ವಾಹನ ಸವಾರರು ಸಂಚರಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ನಿಯಮ ಪಾಲಿಸದ ಸವಾರರ ಮೇಲೆ ಪೊಲೀಸರು ದಂಡ ಪ್ರಯೋಗ ಮಾಡಿದ್ದಾರೆ.

ಮೊದಲ ದಿನವಾದ ಮಂಗಳವಾರ ಯಾವುದೇ ವಾಹನಗಳಿಗೆ ದಂಡ ವಿಧಿಸದೆ ಕೇವಲ ಜಾಗೃತಿ ಮೂಡಿಸಿ ಬಿಡಲಾಗಿತ್ತು. ಎರಡನೇ ದಿನವಾದ ಬುಧವಾರ ಸುಮಾರು 18 ವಾಹನಗಳಿಗೆ ತಲಾ ೫೦೦ ರೂ.ನಂತೆ ದಂಡ ವಿಧಿಸಲಾಗಿದೆ. 16 ದ್ವಿಚಕ್ರ ವಾಹನ, ಒಂದು ಟ್ರಾಕ್ಟರ್, ಒಂದು ತ್ರಿಚಕ್ರ ವಾಹನಕ್ಕೆ ದಂಡ ವಿಧಿಸಿದ್ದಾರೆ.

ಆ.1ರ ಮಂಗಳವಾರ ಹೊಸ ರೂಲ್ಸ್ ಬಗ್ಗೆ ಪೊಲೀಸರು ಜಾಗೃತಿ ಮೂಡಿಸಿದ್ದರಿಂದ ಬಹುತೇಕ ವಾಹನ ಸವಾರರು ಸರ್ವಿಸ್ ರಸ್ತೆಯತ್ತ ಮುಖ ಮಾಡಿದ್ದದ್ದು ಕಂಡುಬಂತು.

ಪೊಲೀಸರಿಗೆ ಬೈಕ್ ಸವಾರನ ಅವಾಜ್ : ಎಕ್ಸ್ ಪ್ರೆಸ್‌ ವೇನಲ್ಲಿ ಬೈಕ್ ಸವಾರಿ ಮಾಡಿಕೊಂಡು ಬಂದ ಬೈಕ್ ಸವಾರನನ್ನು ತಡೆದ ಪೊಲೀಸರು ದಂಡ ಕಟ್ಟುವಂತೆ ಹೇಳಿದಾಗ, ಹೊಸ ರೂಲ್ಸ್ ನನಗೆ ಗೊತ್ತಿಲ್ಲ, ನಾನು ದಂಡ ಕಟ್ಟುವುದಿಲ್ಲ. ನೀವು ಹೈವೆಗೆ ಹತ್ತುವಾಗ ಹತ್ತಬೇಡಿ ಎಂದು ಹೇಳಲ್ಲ, ಈಗ ದಂಡ ಕಟ್ಟಿ ಅಂತೀರಾ, ನಾನು ಕಟ್ಟಲ್ಲ ಎಂದು ಪೊಲೀಸರಿಗೇ ಅವಾಜ್ ಹಾಕಿದನು.

ಇದಕ್ಕೆ ಬೈಕ್ ಸವಾರನಿಗೆ ಬುದ್ಧಿವಾದ ಹೇಳಿದ ಪೊಲೀಸರು, ನೀವು ಹೆದ್ದಾರಿ ಪ್ರವೇಶಿಸುವಾಗ ಬೋರ್ಡ್ ಹಾಕಿದ್ದೇವೆ ನೋಡಿದ್ದೀರಾ? ನಿನ್ನೆ ಮೊನ್ನೆಯಿಂದ ಮಾಧ್ಯಮಗಳಲ್ಲಿ ಬರುತ್ತಿದೆ, ನೋಡಿಲ್ವಾ ಎಂದು ಹೇಳಿದರು.
ಇದಕ್ಕೆ ಪ್ರತಿಕ್ರಿಯಿಸಿದ ಬೈಕ್ ಸವಾರ ನಾನು ಈ ಹೊಸ ರೂಲ್ಸ್ ಎಲ್ಲೂ ನೋಡಿಲ್ಲ, ನಾನು ಕಟ್ಟಲ್ಲ ಎಂದು ಬೈಕ್ ಸವಾರ ಮೊಂಡುವಾದ ಮಾಡಿದನು.

ಇದಕ್ಕೆ ಪೊಲೀಸರು, ಸರಿಯಪ್ಪಾ ಹೊಸ ರೂಲ್ಸ್ ಗೊತ್ತಿಲ್ಲ ಅಂತೀಯಾ, ಹೆಲ್ಮೆಟ್ ಯಾಕೆ ಹಾಕಿಲ್ಲ? ನಿನಗೆ ಹೆಲ್ಮೆಟ್ ಹಾಕೋ ಹಳೆ ರೂಲ್ಸ್ ಗೊತ್ತಿಲ್ವಾ? ಎಂಬ ಪೊಲೀಸರ ಮರುಪ್ರಶ್ನೆಗೆ ಬೈಕ್ ಸವಾರ ಕಕ್ಕಾಬಿಕ್ಕಿಯಾದ.
ಇದೇ ವೇಳೆ ಸ್ಥಳಕ್ಕೆ ಆಗಮಿಸಿದ ಸಾರ್ವಜನಿಕರು, ಪೊಲೀಸರು ನಮ್ಮ ಒಳ್ಳೆಯದಕ್ಕೇ ಹೇಳೋದು ಅಲ್ವಾ ಎಂದು ಬೈಕ್ ಸವಾರನನ್ನು ತರಾಟೆಗೆ ತೆಗೆದುಕೊಂಡರು. ಬಳಿಕ ಮಂಕಾದ ಬೈಕ್ ಸವಾರ ದಂಡ ಕಟ್ಟಿ ತೆರಳಿದನು.

lokesh

Recent Posts

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ: ಮಹದೇಶ್ವರನಿಗೆ ಎಣ್ಣೆಮಜ್ಜನ ಸೇವೆ, ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…

4 mins ago

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಂಜುಂಡೇಶ್ವರ ಸನ್ನಿಧಿಗೆ ಹರಿದು ಬಂದ ಭಕ್ತಸಾಗರ

ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…

2 hours ago

ಸುಂಟಿಕೊಪ್ಪ: ನೂತನ ಪೊಲೀಸ್‌ ವಸತಿ ಗೃಹ ಉದ್ಘಾಟಿಸಿದ ಸಚಿವ ಪರಮೇಶ್ವರ್‌

ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ‌ ವೆಚ್ಚದಲ್ಲಿ…

2 hours ago

ನಂಜುಂಡೇಶ್ವರನ ದೇವಸ್ಥಾನದಲ್ಲಿ ಇನ್ಮುಂದೆ ದಿನ 24 ಗಂಟೆಯೂ ಪ್ರಸಾದ ವಿತರಣೆ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…

2 hours ago

ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತ ದೇಹ ಪತ್ತೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…

3 hours ago

ಫೆ.17ರಂದು ಬಾಂಗ್ಲಾ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್‌ ಪ್ರಮಾಣವಚನ ಸ್ವೀಕಾರ: ಪ್ರಧಾನಿ ಮೋದಿಗೆ ಆಹ್ವಾನ

ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್‌ ರೆಹಮಾನ್‌ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ…

4 hours ago