ಮಂಡ್ಯ

ನಿಯಮ ಪಾಲಿಸದ ಸವಾರರಿಗೆ ದಂಡ ಪ್ರಯೋಗ

ಮಂಡ್ಯ : ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್‌ವೇನಲ್ಲಿ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳ ಸಂಚಾರಕ್ಕೆ ಆ.1ರಿಂದ ನಿರ್ಬಂಧ ವಿಧಿಸಲಾಗಿದ್ದು, ಎರಡನೇ ದಿನವಾದ ಬುಧವಾರವೂ ಸಹ ಪೊಲೀಸರ ಕಾರ್ಯಾಚರಣೆ ಮುಂದುವರೆದಿತ್ತು.
ರಾಷ್ಟ್ರೀಯ ಹೆದ್ದಾರಿ ಹಾಗೂ ಪೊಲೀಸ್ ಇಲಾಖೆಯ ಕಟ್ಟುನಿಟ್ಟಿನ ಆದೇಶವನ್ನು ಜಾರಿಗೊಳಿಸಲು ಪೊಲೀಸರು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದು, ನಗರದ ಹೊರವಲಯ ಶ್ರೀನಿವಾಸಪುರ ಗೇಟ್‌ನ ಅಮರಾವತಿ ಹೋಟೆಲ್ ಸಮೀಪ ನೀಡಿರುವ ನಿರ್ಗಮನದ ಸ್ಥಳದಲ್ಲಿ ಹೊಸ ರೂಲ್ಸ್ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.

500 ರೂ. ದಂಡ :ನಿರ್ಬಂಧದ ನಡುವೆಯು ನಿಯಮ ಪಾಲಿಸದೆ ಕೆಲ ವಾಹನ ಸವಾರರು ಸಂಚರಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ನಿಯಮ ಪಾಲಿಸದ ಸವಾರರ ಮೇಲೆ ಪೊಲೀಸರು ದಂಡ ಪ್ರಯೋಗ ಮಾಡಿದ್ದಾರೆ.

ಮೊದಲ ದಿನವಾದ ಮಂಗಳವಾರ ಯಾವುದೇ ವಾಹನಗಳಿಗೆ ದಂಡ ವಿಧಿಸದೆ ಕೇವಲ ಜಾಗೃತಿ ಮೂಡಿಸಿ ಬಿಡಲಾಗಿತ್ತು. ಎರಡನೇ ದಿನವಾದ ಬುಧವಾರ ಸುಮಾರು 18 ವಾಹನಗಳಿಗೆ ತಲಾ ೫೦೦ ರೂ.ನಂತೆ ದಂಡ ವಿಧಿಸಲಾಗಿದೆ. 16 ದ್ವಿಚಕ್ರ ವಾಹನ, ಒಂದು ಟ್ರಾಕ್ಟರ್, ಒಂದು ತ್ರಿಚಕ್ರ ವಾಹನಕ್ಕೆ ದಂಡ ವಿಧಿಸಿದ್ದಾರೆ.

ಆ.1ರ ಮಂಗಳವಾರ ಹೊಸ ರೂಲ್ಸ್ ಬಗ್ಗೆ ಪೊಲೀಸರು ಜಾಗೃತಿ ಮೂಡಿಸಿದ್ದರಿಂದ ಬಹುತೇಕ ವಾಹನ ಸವಾರರು ಸರ್ವಿಸ್ ರಸ್ತೆಯತ್ತ ಮುಖ ಮಾಡಿದ್ದದ್ದು ಕಂಡುಬಂತು.

ಪೊಲೀಸರಿಗೆ ಬೈಕ್ ಸವಾರನ ಅವಾಜ್ : ಎಕ್ಸ್ ಪ್ರೆಸ್‌ ವೇನಲ್ಲಿ ಬೈಕ್ ಸವಾರಿ ಮಾಡಿಕೊಂಡು ಬಂದ ಬೈಕ್ ಸವಾರನನ್ನು ತಡೆದ ಪೊಲೀಸರು ದಂಡ ಕಟ್ಟುವಂತೆ ಹೇಳಿದಾಗ, ಹೊಸ ರೂಲ್ಸ್ ನನಗೆ ಗೊತ್ತಿಲ್ಲ, ನಾನು ದಂಡ ಕಟ್ಟುವುದಿಲ್ಲ. ನೀವು ಹೈವೆಗೆ ಹತ್ತುವಾಗ ಹತ್ತಬೇಡಿ ಎಂದು ಹೇಳಲ್ಲ, ಈಗ ದಂಡ ಕಟ್ಟಿ ಅಂತೀರಾ, ನಾನು ಕಟ್ಟಲ್ಲ ಎಂದು ಪೊಲೀಸರಿಗೇ ಅವಾಜ್ ಹಾಕಿದನು.

ಇದಕ್ಕೆ ಬೈಕ್ ಸವಾರನಿಗೆ ಬುದ್ಧಿವಾದ ಹೇಳಿದ ಪೊಲೀಸರು, ನೀವು ಹೆದ್ದಾರಿ ಪ್ರವೇಶಿಸುವಾಗ ಬೋರ್ಡ್ ಹಾಕಿದ್ದೇವೆ ನೋಡಿದ್ದೀರಾ? ನಿನ್ನೆ ಮೊನ್ನೆಯಿಂದ ಮಾಧ್ಯಮಗಳಲ್ಲಿ ಬರುತ್ತಿದೆ, ನೋಡಿಲ್ವಾ ಎಂದು ಹೇಳಿದರು.
ಇದಕ್ಕೆ ಪ್ರತಿಕ್ರಿಯಿಸಿದ ಬೈಕ್ ಸವಾರ ನಾನು ಈ ಹೊಸ ರೂಲ್ಸ್ ಎಲ್ಲೂ ನೋಡಿಲ್ಲ, ನಾನು ಕಟ್ಟಲ್ಲ ಎಂದು ಬೈಕ್ ಸವಾರ ಮೊಂಡುವಾದ ಮಾಡಿದನು.

ಇದಕ್ಕೆ ಪೊಲೀಸರು, ಸರಿಯಪ್ಪಾ ಹೊಸ ರೂಲ್ಸ್ ಗೊತ್ತಿಲ್ಲ ಅಂತೀಯಾ, ಹೆಲ್ಮೆಟ್ ಯಾಕೆ ಹಾಕಿಲ್ಲ? ನಿನಗೆ ಹೆಲ್ಮೆಟ್ ಹಾಕೋ ಹಳೆ ರೂಲ್ಸ್ ಗೊತ್ತಿಲ್ವಾ? ಎಂಬ ಪೊಲೀಸರ ಮರುಪ್ರಶ್ನೆಗೆ ಬೈಕ್ ಸವಾರ ಕಕ್ಕಾಬಿಕ್ಕಿಯಾದ.
ಇದೇ ವೇಳೆ ಸ್ಥಳಕ್ಕೆ ಆಗಮಿಸಿದ ಸಾರ್ವಜನಿಕರು, ಪೊಲೀಸರು ನಮ್ಮ ಒಳ್ಳೆಯದಕ್ಕೇ ಹೇಳೋದು ಅಲ್ವಾ ಎಂದು ಬೈಕ್ ಸವಾರನನ್ನು ತರಾಟೆಗೆ ತೆಗೆದುಕೊಂಡರು. ಬಳಿಕ ಮಂಕಾದ ಬೈಕ್ ಸವಾರ ದಂಡ ಕಟ್ಟಿ ತೆರಳಿದನು.

lokesh

Recent Posts

ʼದೇಶದ ನಿರ್ಧಾರಗಳು ವಿದೇಶಗಳಿಂದ ಆಗುತ್ತಿರುವಂತಿದೆʼ

  ಕೃಷಿ ಚಳವಳಿಯ ಪ್ರಮುಖ ನಾಯಕರಾದ ರಾಕೇಶ್ ಟಿಕಾಯತ್ ಹಾಗೂ ಸಂಯುಕ್ತ ಕಿಸಾನ್ ಮೋರ್ಚಾದ ಪ್ರಮುಖ ಮುಖಂಡರಾದ ಯುದ್ಧವೀರ್ ಸಿಂಗ್…

47 mins ago

ಓದುಗರ ಪತ್ರ | ಹತ್ತಿ ಬೆಳೆಗಾರರ ಸಮಸ್ಯೆ ಪರಿಹರಿಸಿ

ಹತ್ತಿ ಬೆಳೆಗಾರರು ರಾಜ್ಯದಲ್ಲಿ ವಾರ್ಷಿಕ ಸುಮಾರು 200 ಕೋಟಿ ರೂ.ಗೂ ಅಧಿಕ ನಷ್ಟ ಅನುಭವಿಸುತ್ತಿದ್ದಾರೆ. ಬಿತ್ತನೆ ಬೀಜ ಮಾರಾಟ ಮಾಡುವ…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಫೆ.14 ಶನಿವಾರ

3 hours ago

ಪೂರ್ಣ ಸಿದ್ಧವಾಗದ ಎಕ್ಸ್‌ಪ್ರೇಸ್‌ ವೇ : ಟೋಲ್‌ ಕಡಿತ

ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…

13 hours ago

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…

14 hours ago

T20 World Cup | ಕೆನಡಾ ವಿರುದ್ಧ ಯುಎಇಗೆ ರೋಚಕ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…

14 hours ago