ಮಂಡ್ಯ : ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ವೇನಲ್ಲಿ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳ ಸಂಚಾರಕ್ಕೆ ಆ.1ರಿಂದ ನಿರ್ಬಂಧ ವಿಧಿಸಲಾಗಿದ್ದು, ಎರಡನೇ ದಿನವಾದ ಬುಧವಾರವೂ ಸಹ ಪೊಲೀಸರ ಕಾರ್ಯಾಚರಣೆ ಮುಂದುವರೆದಿತ್ತು.
ರಾಷ್ಟ್ರೀಯ ಹೆದ್ದಾರಿ ಹಾಗೂ ಪೊಲೀಸ್ ಇಲಾಖೆಯ ಕಟ್ಟುನಿಟ್ಟಿನ ಆದೇಶವನ್ನು ಜಾರಿಗೊಳಿಸಲು ಪೊಲೀಸರು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದು, ನಗರದ ಹೊರವಲಯ ಶ್ರೀನಿವಾಸಪುರ ಗೇಟ್ನ ಅಮರಾವತಿ ಹೋಟೆಲ್ ಸಮೀಪ ನೀಡಿರುವ ನಿರ್ಗಮನದ ಸ್ಥಳದಲ್ಲಿ ಹೊಸ ರೂಲ್ಸ್ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.
500 ರೂ. ದಂಡ :ನಿರ್ಬಂಧದ ನಡುವೆಯು ನಿಯಮ ಪಾಲಿಸದೆ ಕೆಲ ವಾಹನ ಸವಾರರು ಸಂಚರಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ನಿಯಮ ಪಾಲಿಸದ ಸವಾರರ ಮೇಲೆ ಪೊಲೀಸರು ದಂಡ ಪ್ರಯೋಗ ಮಾಡಿದ್ದಾರೆ.
ಮೊದಲ ದಿನವಾದ ಮಂಗಳವಾರ ಯಾವುದೇ ವಾಹನಗಳಿಗೆ ದಂಡ ವಿಧಿಸದೆ ಕೇವಲ ಜಾಗೃತಿ ಮೂಡಿಸಿ ಬಿಡಲಾಗಿತ್ತು. ಎರಡನೇ ದಿನವಾದ ಬುಧವಾರ ಸುಮಾರು 18 ವಾಹನಗಳಿಗೆ ತಲಾ ೫೦೦ ರೂ.ನಂತೆ ದಂಡ ವಿಧಿಸಲಾಗಿದೆ. 16 ದ್ವಿಚಕ್ರ ವಾಹನ, ಒಂದು ಟ್ರಾಕ್ಟರ್, ಒಂದು ತ್ರಿಚಕ್ರ ವಾಹನಕ್ಕೆ ದಂಡ ವಿಧಿಸಿದ್ದಾರೆ.
ಆ.1ರ ಮಂಗಳವಾರ ಹೊಸ ರೂಲ್ಸ್ ಬಗ್ಗೆ ಪೊಲೀಸರು ಜಾಗೃತಿ ಮೂಡಿಸಿದ್ದರಿಂದ ಬಹುತೇಕ ವಾಹನ ಸವಾರರು ಸರ್ವಿಸ್ ರಸ್ತೆಯತ್ತ ಮುಖ ಮಾಡಿದ್ದದ್ದು ಕಂಡುಬಂತು.
ಪೊಲೀಸರಿಗೆ ಬೈಕ್ ಸವಾರನ ಅವಾಜ್ : ಎಕ್ಸ್ ಪ್ರೆಸ್ ವೇನಲ್ಲಿ ಬೈಕ್ ಸವಾರಿ ಮಾಡಿಕೊಂಡು ಬಂದ ಬೈಕ್ ಸವಾರನನ್ನು ತಡೆದ ಪೊಲೀಸರು ದಂಡ ಕಟ್ಟುವಂತೆ ಹೇಳಿದಾಗ, ಹೊಸ ರೂಲ್ಸ್ ನನಗೆ ಗೊತ್ತಿಲ್ಲ, ನಾನು ದಂಡ ಕಟ್ಟುವುದಿಲ್ಲ. ನೀವು ಹೈವೆಗೆ ಹತ್ತುವಾಗ ಹತ್ತಬೇಡಿ ಎಂದು ಹೇಳಲ್ಲ, ಈಗ ದಂಡ ಕಟ್ಟಿ ಅಂತೀರಾ, ನಾನು ಕಟ್ಟಲ್ಲ ಎಂದು ಪೊಲೀಸರಿಗೇ ಅವಾಜ್ ಹಾಕಿದನು.
ಇದಕ್ಕೆ ಬೈಕ್ ಸವಾರನಿಗೆ ಬುದ್ಧಿವಾದ ಹೇಳಿದ ಪೊಲೀಸರು, ನೀವು ಹೆದ್ದಾರಿ ಪ್ರವೇಶಿಸುವಾಗ ಬೋರ್ಡ್ ಹಾಕಿದ್ದೇವೆ ನೋಡಿದ್ದೀರಾ? ನಿನ್ನೆ ಮೊನ್ನೆಯಿಂದ ಮಾಧ್ಯಮಗಳಲ್ಲಿ ಬರುತ್ತಿದೆ, ನೋಡಿಲ್ವಾ ಎಂದು ಹೇಳಿದರು.
ಇದಕ್ಕೆ ಪ್ರತಿಕ್ರಿಯಿಸಿದ ಬೈಕ್ ಸವಾರ ನಾನು ಈ ಹೊಸ ರೂಲ್ಸ್ ಎಲ್ಲೂ ನೋಡಿಲ್ಲ, ನಾನು ಕಟ್ಟಲ್ಲ ಎಂದು ಬೈಕ್ ಸವಾರ ಮೊಂಡುವಾದ ಮಾಡಿದನು.
ಇದಕ್ಕೆ ಪೊಲೀಸರು, ಸರಿಯಪ್ಪಾ ಹೊಸ ರೂಲ್ಸ್ ಗೊತ್ತಿಲ್ಲ ಅಂತೀಯಾ, ಹೆಲ್ಮೆಟ್ ಯಾಕೆ ಹಾಕಿಲ್ಲ? ನಿನಗೆ ಹೆಲ್ಮೆಟ್ ಹಾಕೋ ಹಳೆ ರೂಲ್ಸ್ ಗೊತ್ತಿಲ್ವಾ? ಎಂಬ ಪೊಲೀಸರ ಮರುಪ್ರಶ್ನೆಗೆ ಬೈಕ್ ಸವಾರ ಕಕ್ಕಾಬಿಕ್ಕಿಯಾದ.
ಇದೇ ವೇಳೆ ಸ್ಥಳಕ್ಕೆ ಆಗಮಿಸಿದ ಸಾರ್ವಜನಿಕರು, ಪೊಲೀಸರು ನಮ್ಮ ಒಳ್ಳೆಯದಕ್ಕೇ ಹೇಳೋದು ಅಲ್ವಾ ಎಂದು ಬೈಕ್ ಸವಾರನನ್ನು ತರಾಟೆಗೆ ತೆಗೆದುಕೊಂಡರು. ಬಳಿಕ ಮಂಕಾದ ಬೈಕ್ ಸವಾರ ದಂಡ ಕಟ್ಟಿ ತೆರಳಿದನು.
ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…
ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…
ಬೆಂಗಳೂರು : ನಗರದ ಹೊರವಲಯದ ಆನೇಕಲ್ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…
ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…
ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…