ಮಂಡ್ಯ

ನಿಯಮ ಪಾಲಿಸದ ಸವಾರರಿಗೆ ದಂಡ ಪ್ರಯೋಗ

ಮಂಡ್ಯ : ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್‌ವೇನಲ್ಲಿ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳ ಸಂಚಾರಕ್ಕೆ ಆ.1ರಿಂದ ನಿರ್ಬಂಧ ವಿಧಿಸಲಾಗಿದ್ದು, ಎರಡನೇ ದಿನವಾದ ಬುಧವಾರವೂ ಸಹ ಪೊಲೀಸರ ಕಾರ್ಯಾಚರಣೆ ಮುಂದುವರೆದಿತ್ತು.
ರಾಷ್ಟ್ರೀಯ ಹೆದ್ದಾರಿ ಹಾಗೂ ಪೊಲೀಸ್ ಇಲಾಖೆಯ ಕಟ್ಟುನಿಟ್ಟಿನ ಆದೇಶವನ್ನು ಜಾರಿಗೊಳಿಸಲು ಪೊಲೀಸರು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದು, ನಗರದ ಹೊರವಲಯ ಶ್ರೀನಿವಾಸಪುರ ಗೇಟ್‌ನ ಅಮರಾವತಿ ಹೋಟೆಲ್ ಸಮೀಪ ನೀಡಿರುವ ನಿರ್ಗಮನದ ಸ್ಥಳದಲ್ಲಿ ಹೊಸ ರೂಲ್ಸ್ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.

500 ರೂ. ದಂಡ :ನಿರ್ಬಂಧದ ನಡುವೆಯು ನಿಯಮ ಪಾಲಿಸದೆ ಕೆಲ ವಾಹನ ಸವಾರರು ಸಂಚರಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ನಿಯಮ ಪಾಲಿಸದ ಸವಾರರ ಮೇಲೆ ಪೊಲೀಸರು ದಂಡ ಪ್ರಯೋಗ ಮಾಡಿದ್ದಾರೆ.

ಮೊದಲ ದಿನವಾದ ಮಂಗಳವಾರ ಯಾವುದೇ ವಾಹನಗಳಿಗೆ ದಂಡ ವಿಧಿಸದೆ ಕೇವಲ ಜಾಗೃತಿ ಮೂಡಿಸಿ ಬಿಡಲಾಗಿತ್ತು. ಎರಡನೇ ದಿನವಾದ ಬುಧವಾರ ಸುಮಾರು 18 ವಾಹನಗಳಿಗೆ ತಲಾ ೫೦೦ ರೂ.ನಂತೆ ದಂಡ ವಿಧಿಸಲಾಗಿದೆ. 16 ದ್ವಿಚಕ್ರ ವಾಹನ, ಒಂದು ಟ್ರಾಕ್ಟರ್, ಒಂದು ತ್ರಿಚಕ್ರ ವಾಹನಕ್ಕೆ ದಂಡ ವಿಧಿಸಿದ್ದಾರೆ.

ಆ.1ರ ಮಂಗಳವಾರ ಹೊಸ ರೂಲ್ಸ್ ಬಗ್ಗೆ ಪೊಲೀಸರು ಜಾಗೃತಿ ಮೂಡಿಸಿದ್ದರಿಂದ ಬಹುತೇಕ ವಾಹನ ಸವಾರರು ಸರ್ವಿಸ್ ರಸ್ತೆಯತ್ತ ಮುಖ ಮಾಡಿದ್ದದ್ದು ಕಂಡುಬಂತು.

ಪೊಲೀಸರಿಗೆ ಬೈಕ್ ಸವಾರನ ಅವಾಜ್ : ಎಕ್ಸ್ ಪ್ರೆಸ್‌ ವೇನಲ್ಲಿ ಬೈಕ್ ಸವಾರಿ ಮಾಡಿಕೊಂಡು ಬಂದ ಬೈಕ್ ಸವಾರನನ್ನು ತಡೆದ ಪೊಲೀಸರು ದಂಡ ಕಟ್ಟುವಂತೆ ಹೇಳಿದಾಗ, ಹೊಸ ರೂಲ್ಸ್ ನನಗೆ ಗೊತ್ತಿಲ್ಲ, ನಾನು ದಂಡ ಕಟ್ಟುವುದಿಲ್ಲ. ನೀವು ಹೈವೆಗೆ ಹತ್ತುವಾಗ ಹತ್ತಬೇಡಿ ಎಂದು ಹೇಳಲ್ಲ, ಈಗ ದಂಡ ಕಟ್ಟಿ ಅಂತೀರಾ, ನಾನು ಕಟ್ಟಲ್ಲ ಎಂದು ಪೊಲೀಸರಿಗೇ ಅವಾಜ್ ಹಾಕಿದನು.

ಇದಕ್ಕೆ ಬೈಕ್ ಸವಾರನಿಗೆ ಬುದ್ಧಿವಾದ ಹೇಳಿದ ಪೊಲೀಸರು, ನೀವು ಹೆದ್ದಾರಿ ಪ್ರವೇಶಿಸುವಾಗ ಬೋರ್ಡ್ ಹಾಕಿದ್ದೇವೆ ನೋಡಿದ್ದೀರಾ? ನಿನ್ನೆ ಮೊನ್ನೆಯಿಂದ ಮಾಧ್ಯಮಗಳಲ್ಲಿ ಬರುತ್ತಿದೆ, ನೋಡಿಲ್ವಾ ಎಂದು ಹೇಳಿದರು.
ಇದಕ್ಕೆ ಪ್ರತಿಕ್ರಿಯಿಸಿದ ಬೈಕ್ ಸವಾರ ನಾನು ಈ ಹೊಸ ರೂಲ್ಸ್ ಎಲ್ಲೂ ನೋಡಿಲ್ಲ, ನಾನು ಕಟ್ಟಲ್ಲ ಎಂದು ಬೈಕ್ ಸವಾರ ಮೊಂಡುವಾದ ಮಾಡಿದನು.

ಇದಕ್ಕೆ ಪೊಲೀಸರು, ಸರಿಯಪ್ಪಾ ಹೊಸ ರೂಲ್ಸ್ ಗೊತ್ತಿಲ್ಲ ಅಂತೀಯಾ, ಹೆಲ್ಮೆಟ್ ಯಾಕೆ ಹಾಕಿಲ್ಲ? ನಿನಗೆ ಹೆಲ್ಮೆಟ್ ಹಾಕೋ ಹಳೆ ರೂಲ್ಸ್ ಗೊತ್ತಿಲ್ವಾ? ಎಂಬ ಪೊಲೀಸರ ಮರುಪ್ರಶ್ನೆಗೆ ಬೈಕ್ ಸವಾರ ಕಕ್ಕಾಬಿಕ್ಕಿಯಾದ.
ಇದೇ ವೇಳೆ ಸ್ಥಳಕ್ಕೆ ಆಗಮಿಸಿದ ಸಾರ್ವಜನಿಕರು, ಪೊಲೀಸರು ನಮ್ಮ ಒಳ್ಳೆಯದಕ್ಕೇ ಹೇಳೋದು ಅಲ್ವಾ ಎಂದು ಬೈಕ್ ಸವಾರನನ್ನು ತರಾಟೆಗೆ ತೆಗೆದುಕೊಂಡರು. ಬಳಿಕ ಮಂಕಾದ ಬೈಕ್ ಸವಾರ ದಂಡ ಕಟ್ಟಿ ತೆರಳಿದನು.

lokesh

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

2 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

3 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

4 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

4 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

4 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

12 hours ago