ಮಂಡ್ಯ

ನಿಯಮ ಪಾಲಿಸದ ಸವಾರರಿಗೆ ದಂಡ ಪ್ರಯೋಗ

ಮಂಡ್ಯ : ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್‌ವೇನಲ್ಲಿ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳ ಸಂಚಾರಕ್ಕೆ ಆ.1ರಿಂದ ನಿರ್ಬಂಧ ವಿಧಿಸಲಾಗಿದ್ದು, ಎರಡನೇ ದಿನವಾದ ಬುಧವಾರವೂ ಸಹ ಪೊಲೀಸರ ಕಾರ್ಯಾಚರಣೆ ಮುಂದುವರೆದಿತ್ತು.
ರಾಷ್ಟ್ರೀಯ ಹೆದ್ದಾರಿ ಹಾಗೂ ಪೊಲೀಸ್ ಇಲಾಖೆಯ ಕಟ್ಟುನಿಟ್ಟಿನ ಆದೇಶವನ್ನು ಜಾರಿಗೊಳಿಸಲು ಪೊಲೀಸರು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದು, ನಗರದ ಹೊರವಲಯ ಶ್ರೀನಿವಾಸಪುರ ಗೇಟ್‌ನ ಅಮರಾವತಿ ಹೋಟೆಲ್ ಸಮೀಪ ನೀಡಿರುವ ನಿರ್ಗಮನದ ಸ್ಥಳದಲ್ಲಿ ಹೊಸ ರೂಲ್ಸ್ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.

500 ರೂ. ದಂಡ :ನಿರ್ಬಂಧದ ನಡುವೆಯು ನಿಯಮ ಪಾಲಿಸದೆ ಕೆಲ ವಾಹನ ಸವಾರರು ಸಂಚರಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ನಿಯಮ ಪಾಲಿಸದ ಸವಾರರ ಮೇಲೆ ಪೊಲೀಸರು ದಂಡ ಪ್ರಯೋಗ ಮಾಡಿದ್ದಾರೆ.

ಮೊದಲ ದಿನವಾದ ಮಂಗಳವಾರ ಯಾವುದೇ ವಾಹನಗಳಿಗೆ ದಂಡ ವಿಧಿಸದೆ ಕೇವಲ ಜಾಗೃತಿ ಮೂಡಿಸಿ ಬಿಡಲಾಗಿತ್ತು. ಎರಡನೇ ದಿನವಾದ ಬುಧವಾರ ಸುಮಾರು 18 ವಾಹನಗಳಿಗೆ ತಲಾ ೫೦೦ ರೂ.ನಂತೆ ದಂಡ ವಿಧಿಸಲಾಗಿದೆ. 16 ದ್ವಿಚಕ್ರ ವಾಹನ, ಒಂದು ಟ್ರಾಕ್ಟರ್, ಒಂದು ತ್ರಿಚಕ್ರ ವಾಹನಕ್ಕೆ ದಂಡ ವಿಧಿಸಿದ್ದಾರೆ.

ಆ.1ರ ಮಂಗಳವಾರ ಹೊಸ ರೂಲ್ಸ್ ಬಗ್ಗೆ ಪೊಲೀಸರು ಜಾಗೃತಿ ಮೂಡಿಸಿದ್ದರಿಂದ ಬಹುತೇಕ ವಾಹನ ಸವಾರರು ಸರ್ವಿಸ್ ರಸ್ತೆಯತ್ತ ಮುಖ ಮಾಡಿದ್ದದ್ದು ಕಂಡುಬಂತು.

ಪೊಲೀಸರಿಗೆ ಬೈಕ್ ಸವಾರನ ಅವಾಜ್ : ಎಕ್ಸ್ ಪ್ರೆಸ್‌ ವೇನಲ್ಲಿ ಬೈಕ್ ಸವಾರಿ ಮಾಡಿಕೊಂಡು ಬಂದ ಬೈಕ್ ಸವಾರನನ್ನು ತಡೆದ ಪೊಲೀಸರು ದಂಡ ಕಟ್ಟುವಂತೆ ಹೇಳಿದಾಗ, ಹೊಸ ರೂಲ್ಸ್ ನನಗೆ ಗೊತ್ತಿಲ್ಲ, ನಾನು ದಂಡ ಕಟ್ಟುವುದಿಲ್ಲ. ನೀವು ಹೈವೆಗೆ ಹತ್ತುವಾಗ ಹತ್ತಬೇಡಿ ಎಂದು ಹೇಳಲ್ಲ, ಈಗ ದಂಡ ಕಟ್ಟಿ ಅಂತೀರಾ, ನಾನು ಕಟ್ಟಲ್ಲ ಎಂದು ಪೊಲೀಸರಿಗೇ ಅವಾಜ್ ಹಾಕಿದನು.

ಇದಕ್ಕೆ ಬೈಕ್ ಸವಾರನಿಗೆ ಬುದ್ಧಿವಾದ ಹೇಳಿದ ಪೊಲೀಸರು, ನೀವು ಹೆದ್ದಾರಿ ಪ್ರವೇಶಿಸುವಾಗ ಬೋರ್ಡ್ ಹಾಕಿದ್ದೇವೆ ನೋಡಿದ್ದೀರಾ? ನಿನ್ನೆ ಮೊನ್ನೆಯಿಂದ ಮಾಧ್ಯಮಗಳಲ್ಲಿ ಬರುತ್ತಿದೆ, ನೋಡಿಲ್ವಾ ಎಂದು ಹೇಳಿದರು.
ಇದಕ್ಕೆ ಪ್ರತಿಕ್ರಿಯಿಸಿದ ಬೈಕ್ ಸವಾರ ನಾನು ಈ ಹೊಸ ರೂಲ್ಸ್ ಎಲ್ಲೂ ನೋಡಿಲ್ಲ, ನಾನು ಕಟ್ಟಲ್ಲ ಎಂದು ಬೈಕ್ ಸವಾರ ಮೊಂಡುವಾದ ಮಾಡಿದನು.

ಇದಕ್ಕೆ ಪೊಲೀಸರು, ಸರಿಯಪ್ಪಾ ಹೊಸ ರೂಲ್ಸ್ ಗೊತ್ತಿಲ್ಲ ಅಂತೀಯಾ, ಹೆಲ್ಮೆಟ್ ಯಾಕೆ ಹಾಕಿಲ್ಲ? ನಿನಗೆ ಹೆಲ್ಮೆಟ್ ಹಾಕೋ ಹಳೆ ರೂಲ್ಸ್ ಗೊತ್ತಿಲ್ವಾ? ಎಂಬ ಪೊಲೀಸರ ಮರುಪ್ರಶ್ನೆಗೆ ಬೈಕ್ ಸವಾರ ಕಕ್ಕಾಬಿಕ್ಕಿಯಾದ.
ಇದೇ ವೇಳೆ ಸ್ಥಳಕ್ಕೆ ಆಗಮಿಸಿದ ಸಾರ್ವಜನಿಕರು, ಪೊಲೀಸರು ನಮ್ಮ ಒಳ್ಳೆಯದಕ್ಕೇ ಹೇಳೋದು ಅಲ್ವಾ ಎಂದು ಬೈಕ್ ಸವಾರನನ್ನು ತರಾಟೆಗೆ ತೆಗೆದುಕೊಂಡರು. ಬಳಿಕ ಮಂಕಾದ ಬೈಕ್ ಸವಾರ ದಂಡ ಕಟ್ಟಿ ತೆರಳಿದನು.

lokesh

Recent Posts

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

7 mins ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

41 mins ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

1 hour ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

1 hour ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

3 hours ago

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಶಾಸಕ ಸಿ.ಪಿ.ಯೋಗೇಶ್ವರ್‌

ರಾಮನಗರ: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಶಾಸಕ ಸಿ.ಪಿ.ಯೋಗೇಶ್ವರ್‌ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು…

5 hours ago