ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ ನೂಕಾಟ ತಳ್ಳಾಟ ಉಂಟಾಗಿದೆ. ಕೊನೆಗೆ ಏಜೆನ್ಸಿ ಮಾಲೀಕರು ಪೊಲೀಸ್ ಠಾಣೆಯ ಮುಂದೆ ಲಾರಿ ನಿಲ್ಲಿಸಿ ಪೊಲೀಸರ ರಕ್ಷಣೆಯಲ್ಲಿ ಸಿಲಿಂಡರ್ ವಿತರಣೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ಪಟ್ಟಣದಲ್ಲಿ ಜರುಗಿದೆ.
ಕೆ.ಆರ್ ಪೇಟೆ ಪಟ್ಟಣದ ಮಂಜುನಾಥ್ ಏಜೆನ್ಸಿ ಎಂದಿನಂತೆ ಗ್ಯಾಸ್ ಸಿಲಿಂಡರ್ ವಿತರಣೆ ಮಾಡಲು ಗೊಡೋನ್ ಬಾಗಿಲು ತೆರದಿತ್ತು. ಇಂದು ಭಾನುವಾರದ ಕಾರಣ ಏಕಾಏಕಿ ನೂರಾರು ಜನರು ಸಿಲಿಂಡರ್ ತೆಗೆದುಕೊಳ್ಳಲು ಬಂದಿದ್ದಾರೆ. ಈ ವೇಳೆ ಸಿಲಿಂಡರ್ ಎಲ್ಲಿ ಖಾಲಿಯಾಗುತ್ತದೆ ಎಂದು ಬಂದ ನೂರಾರು ಜನರು ಗೊಡೋನ್ಗೆ ಮುಗಿಬಿದ್ದರು. ಈ ವೇಳೆ ಏಜೆನ್ಸಿಯವರು ಸಿಲಿಂಡರ್ ವಿತರಣೆ ಮಾಡಲು ಕಷ್ಟವಾಗಿದ್ದು, ಜನರಲ್ಲಿ ನೂಕು ನುಗ್ಗಲು ಉಂಟಾಗಿದೆ.
ಬಳಿಕ ಏಜೆನ್ಸಿ ಮಾಲೀಕರು ಕೆ.ಆರ್ ಪೇಟೆ ಪಟ್ಟಣ ಪೊಲೀಸ್ ಠಾಣೆ ಮುಂಭಾಗ ಸಿಲಿಂಡರ್ ಲಾರಿಯನ್ನ ನಿಲ್ಲಿಸಿಕೊಂಡು ಪೊಲೀಸರ ಸಮ್ಮುಖದಲ್ಲಿ ಗ್ರಾಹಕರಿಗೆ ಸಿಲಿಂಡರ್ ವಿತರಿಸಲಾಯಿತು.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…