ಮಂಡ್ಯ

ಯೋಜನೆ ರೂಪಿಸುವಾಗ ಜನರ ಪಾಲ್ಗೊಳ್ಳುವಿಕೆ ಮುಖ್ಯ : ಡಿ.ಆರ್.ಪಾಟೀಲ್‌

ಮೈಸೂರು : ಸರ್ಕಾರ ಸಾರ್ವಜನಿಕರ ಅಭಿವೃದ್ಧಿಗಾಗಿ ಯೋಜನೆ ರೂಪಿಸುತ್ತದೆ. ಈ ಹಿನ್ನಲೆಯಲ್ಲಿ ಯೋಜನೆಗಳನ್ನು ರೂಪಿಸುವಾಗ ಜನರ ಪಾಲ್ಗೊಳ್ಳುವಿಕೆ ಅತಿ ಮುಖ್ಯ ಎಂದು ಕರ್ನಾಟಕ ವಿಕೇಂದ್ರೀಕೃತ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್. ಪಾಟೀಲ್ ತಿಳಿಸಿದರು.

ಬುಧವಾರ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಮೈಸೂರು ವಿಭಾಗ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಅಧಿಕಾರಿಗಳು ಕಾನೂನು ಬದ್ಧವಾಗಿ ಕೆಲಸ ನಿರ್ವಹಿಸಿದರೆ ಅಭಿವೃದ್ಧಿ ಬಹಳ ಸುಲಭವಾಗಿ ನಡೆಯುತ್ತದೆ ಎಂದರು.

ಜನರ ಬೇಡಿಕೆ ಬಹಳಷ್ಟು ಇರುತ್ತದೆ. ಜನರಿಂದ ಮಾಹಿತಿ ಪಡೆದು ಯೋಜನೆ ರೂಪಿಸುವುದು ಕಷ್ಟಕರವಾಗಿರುತ್ತದೆ. ಆದರಿಂದ ಯೋಜನೆ ರೂಪಿಸುವಾಗ ಯಾವ ವಿಷಯಕ್ಕೆ ಆದ್ಯತೆ ನೀಡಬೇಕು ಎಂಬುದನ್ನು ತಿಳಿಸಲಾಗುವುದು. ಯೋಜನೆ ಅನುಷ್ಠಾನದ ಸಂದರ್ಭದಲ್ಲಿ ಯಾವ ಫಲಾನುಭವಿಗೆ ಆದ್ಯತೆ ನೀಡಬೇಕು ಎಂಬುದನ್ನು ತಿಳಿಸಲಾಗುವುದು ಎಂದು ಹೇಳಿದರು.

ಜನರ ಪಾಲ್ಗೊಳ್ಳುವಿಕೆಯಿಂದ ಜನೋಪಯೋಗಿ ಕೆಲಸ ಮಾಡಬಹುದು ಎಂಬ ಆಶಯದೊಂದಿಗೆ ಸಭೆಗಳನ್ನು ನಡೆಸುತ್ತಿದ್ದು, ಜಿಲ್ಲಾ ಯೋಜನಾ ವಿವರಗಳನ್ನು ಆವ್ಯಯಕ್ಕೂ ಮುನ್ನ ಮುಖ್ಯಮಂತ್ರಿಗಳಿಗೆ ನೀಡಲು ಸಿದ್ಧತೆ ಮಾಡಿಕೊಳ್ಳಬೇಕು ಎಂದರು.

ಇದನ್ನೂ ಓದಿ:-ಯೋಜನೆ ರೂಪಿಸುವಾಗ ಜನರ ಪಾಲ್ಗೊಳ್ಳುವಿಕೆ ಮುಖ್ಯ : ಡಿ.ಆರ್.ಪಾಟೀಲ್‌

ಗ್ರಾಮ ಮಟ್ಟದಲ್ಲಿ ಗ್ರಾಮ ಸಭೆಯಲ್ಲಿ ಜನರ ಪಾಲ್ಗೊಳ್ಳುವಿಕೆಯನ್ನು ನೋಡಬಹುದಾಗಿದೆ. ನಗರ ಪ್ರದೇಶದಲ್ಲಿ ಜನರ ಪಾಲ್ಗೊಳ್ಳುವಿಕೆ ಕಾಣುತ್ತಿಲ್ಲ. ಆದರಿಂದ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಡಿಸೆಂಬರ್ 6 ರೊಳಗೆ 100 ಮತಗಳಿಗೆ ಇಬ್ಬರನ್ನು ಆಯ್ಕೆ ಮಾಡಿ ನೆಯ್ಬರ್ ವುಡ್ ಗ್ರೂಪ್ ( neighborhood group) ‌ರಚಿಸಿ ನಂತರ ವಾಡ್೯ ಸಭೆಗಳನ್ನು ರಚಿಸಿ ನಗರ ಪ್ರದೇಶದ ಯೋಜನೆಗಳನ್ನು ರೂಪಿಸಿ ಎಂದರು.

ಗ್ರಾಮ ಹಾಗೂ ವಾಡ್೯ ಸಭೆಗಳಿಂದ ಜನರ ಅಭಿಪ್ರಾಯ ಪಡೆದು ತಾಲ್ಲೂಕು ಮಟ್ಟದ ಯೋಜನೆ ರೂಪಿಸಿ ನಂತರ ಜಿಲ್ಲಾ ಮಟ್ಟದಲ್ಲಿ‌ ಕ್ರೋಢಿಕರಿಸಿ ವರದಿಯನ್ನು ನೀಡಿ. ಜಿಲ್ಲಾ ಯೋಜನಾ ಸಮಿತಿಗಳ ಕಾರ್ಯನಿರ್ವಹಣೆ ಪರಿಣಾಮಕಾರಿಯಾಗಿ ನಡೆದರೆ ಮುಂದಿನ ದಿನಗಳಲ್ಲಿ ಬಹಳಷ್ಟು ಜನರ ಕಷ್ಟಗಳು ಪರಿಹಾರವಾಗುತ್ತದೆ ಎಂದರು.

ಪ್ರಾದೇಶಿಕ ಆಯುಕ್ತರಾದ ನಿತೀಶ್ ಪಾಟೀಲ್ ಮಾತನಾಡಿ, ಜಿಲ್ಲೆಯ ಪ್ರಗತಿಪರ ಯೋಜನೆಗಳನ್ನು ರೂಪಿಸುವ ಸಲುವಾಗಿ ಈಗಾಗಲೇ ತರಬೇತಿಗಳನ್ನು ನೀಡಲಾಗಿದೆ. ಕೆಲವು ಜಿಲ್ಲೆಗಳಲ್ಲಿ ತಾಲ್ಲೂಕು ಹಾಗೂ ಜಿಲ್ಲಾ ಹಂತದಲ್ಲಿ ಯೋಜನೆ ರೂಪಿಸುವುದು ಬಾಕಿ ಇದ್ದು, ಶೀಘ್ರವಾಗಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.

ಮಂಡ್ಯ ಜಿಲ್ಲಾಧಿಕಾರಿ ಡಾ: ಕುಮಾರ, ಮೈಸೂರು ಜಿಲ್ಲಾ ಪಂಚಾಯತ್ ಯುಕೇಶ್ ಕುಮಾರ್, ಚಾಮರಾಜನಗರ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಮ್ಮ ಜಿಲ್ಲೆಗಳ ಯೋಜನೆಯ ವಿವರಗಳನ್ನು ವಿವರಿಸಿದರು.

ಸಭೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಜಿ ಸೇರಿದಂತೆ ಮೈಸೂರು ವಿಭಾಗದ ವಿವಿಧ ಜಿಲ್ಲೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಕೊಡಗಿನ ತಿತಿಮತಿಯಲ್ಲಿ ಹುಲಿ ಪ್ರತ್ಯಕ್ಷ ; ಸ್ಥಳೀಯರಲ್ಲಿ ಆತಂಕ

ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…

11 mins ago

ಖಾಸಗಿ ಶಾಲೆಗಳನ್ನು ನಾಚಿಸುವ ಹೈಟೆಕ್ ಸರ್ಕಾರಿ ಶಾಲೆ : ಆದರೆ ಮಕ್ಕಳ ದಾಖಲಾತಿ ಕೇವಲ 40!

ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…

19 mins ago

ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಜಾಗ ನೀಡುವಂತೆ ಸಿಎಂಗೆ ಪತ್ರ ಬರೆದಿದ್ದೇನೆ : ಎಚ್‌ಡಿಕೆ

ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…

49 mins ago

ರಾಜ್ಯವೇ ನನ್ನ ಪರಿಮಿತಿ, ಜನ ಬಯಸಿದ ಕಡೆ ಸ್ಪರ್ಧೆ : ಎಚ್‌.ಡಿ.ಕುಮಾರಸ್ವಾಮಿ

ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…

59 mins ago

ಗೋ ಬ್ಯಾಕ್‌ ಗವರ್ನರ್‌ ಅನ್ನೋದು ರಾಜಕೀಯ ನಾಟಕ : ಎಚ್‌.ಡಿ.ಕುಮಾರಸ್ವಾಮಿ ಆರೋಪ

ಮಂಡ್ಯ : ರಾಜ್ಯಪಾಲರ ವಿರುದ್ಧ ಗೋ ಬ್ಯಾಕ್ ಗೋ ಬ್ಯಾಕ್ ಎನ್ನುತ್ತಿರುವ ರಾಜ್ಯ ಕಾಂಗ್ರೆಸ್ ಏನೂ ಸಾಧಿಸುವುದಿಲ್ಲ. ಗೋ ಬ್ಯಾಕ್…

1 hour ago

ಫೆ.1ರಂದು ನಿಮಿಷಾಂಬದಲ್ಲಿ ಮಾಘ ಶುದ್ಧ ಪೌರ್ಣಮಿ : ನದಿಯ ತೀರದಲ್ಲಿ ಸೂಕ್ತ ಭದ್ರತೆಗೆ ಶಾಸಕರ ಸೂಚನೆ

ಮಂಡ್ಯ : ಶ್ರೀರಂಗಪಟ್ಟಣದ ಶ್ರೀ ನಿಮಿಷಾಂಬ ದೇವಸ್ಥಾನದಲ್ಲಿ ಫೆ.1 ರಂದು ನಡೆಯಲಿರುವ ಮಾಘ ಶುದ್ಧ ಹುಣ್ಣಿಮೆಯ ಪ್ರಯುಕ್ತ ಹೆಚ್ಚು ಸಾರ್ವಜನಿಕರು…

1 hour ago