ಮಂಡ್ಯ

ಜನಪ್ರತಿನಿಧಿಗಳು ಹೋರಾಟ ಕೈಗೆತ್ತಿಕೊಳ್ಳಬೇಕು : ಸಿಎಸ್ ಪುಟ್ಟರಾಜು

ಮಂಡ್ಯ : ಕಾವೇರಿ ಕೇವಲ ಮಂಡ್ಯ ಜಿಲ್ಲೆಗೆ ಮಾತ್ರ ಸೀಮಿತವಾಗಿಲ್ಲ. ಇಡೀ ರಾಜ್ಯದ ಜೀವನಾಡಿಯಾಗಿದ್ದು, ಆದ್ದರಿಂದ ಇದನ್ನು ಉಳಿಸಿಕೊಳ್ಳಬೇಕಾದರೆ ಜನಪ್ರತಿನಿಧಿಗಳೂ ಹೋರಾಟವನ್ನು ಕೈಗೆತ್ತಿಕೊಳ್ಳಬೇಕೆಂದು ಮಾಜಿ ಸಚಿವ ಸಿ.ಎಸ್. ಪುಟ್ಟರಾಜು ಆಗ್ರಹಿಸಿದರು.

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಕೂಡಲೇ ನಿಲ್ಲಿಸುವಂತೆ ಆಗ್ರಹಿಸಿದ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿಯ 2ನೇ ದಿನವಾದ ಇಂದು ಸಿಎಸ್ ಪುಟ್ಟರಾಜು ಪಾಲ್ಗೊಂಡು ಮಾತನಾಡಿದರು, ನನ್ನ ಜಿಲ್ಲೆಗೆ ಯಾವುದೇ ಹಂತದಲ್ಲೂ ಅನ್ಯಾಯವಾಗಲು ಬಿಡುವುದಿಲ್ಲ. ಕಾವೇರಿ ನದಿ ನೀರು ಸಂಬಂಧ ನಡೆದಿರುವ ಹೋರಾಟದಲ್ಲಿ ಮಾಜಿ ಸಂಸದ ದಿ. ಜಿ.ಮಾದೇಗೌಡ ಅವರ ನೇತೃತ್ವದಲ್ಲಿ ನಡೆಯುತ್ತಿತ್ತು. ರೈತರ ಹೋರಾಟಕ್ಕೆ ನಮ್ಮ ಜಾತ್ಯತೀತ ಜನತಾದಳ ಬದ್ಧವಾಗಿದೆ. ಶನಿವಾರ ನಮ್ಮ ಪಕ್ಷದ ವತಿಯಿಂದ ಬೃಹತ್ ಹೋರಾಟ ನಡೆಸುತ್ತಿದ್ದು, ರಾಜ್ಯ ಸರ್ಕಾರದ ಕಣ್ತೆರೆಸುವ ಕೆಲಸ ಮಾಡುತ್ತೇವೆ ಎಂದರು.

ನಮ್ಮ ಹೋರಾಟದಲ್ಲಿ ಪಕ್ಷಾತೀತವಾಗಿ ಎಲ್ಲ ಜಿಲ್ಲಾ ಜನಪ್ರತಿನಿಧಿಗಳು ಭಾಗಿಯಾಗಿ ನ್ಯಾಯ ದೊರಕಿಸಿಕೊಡಬೇಕು. ಸಂಸದರು ಸಹ ಹೋರಾಟಕ್ಕಿಳಿಯಲಿ. ಶನಿವಾರ ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ ಅತಿ ಹೆಚ್ಚಿನ ರೈತರು ಭಾಗವಹಿಸಬೇಕೆಂದು ಮನವಿ ಮಾಡಿದರು.

ಪಕ್ಷದ ಬಿಡುತ್ತೇನೆನ್ನುವುದು ಸುಳ್ಳು : ನಾನು ಜಾತ್ಯತೀತ ಜನತಾದಳವನ್ನು ತ್ಯಜಿಸುತ್ತೇನೆ ಎನ್ನುವುದು ಸುಳ್ಳು. ಇದೆಲ್ಲ ಕೇವಲ ಊಹಾಪೋಹ ಅಷ್ಟೆ. ನಾನು ಜಾ.ದಳದಲ್ಲೇ ಸಕ್ರಿಯವಾಗಿ ಜವಾಬ್ದಾರಿ ನಿರ್ವಹಿಸುತ್ತೇನೆ ಎಂದು ಮಾಜಿ ಸಚಿವ ಸಿ.ಎಸ್. ಪುಟ್ಟರಾಜು ಸ್ಪಷ್ಟಪಡಿಸಿದರು.

ರಾಜ್ಯಸಭಾ ಸದಸ್ಯ ಕುಪೇಂದ್ರರೆಡ್ಡಿ ಅವರು ಪಕ್ಷ ಬಿಡುವುದಿಲ್ಲ. ನಾನು ಮತ್ತು ಅವರು ಮೂರು ದಿನ ಕೊಡಗಿನಲ್ಲಿದ್ದೆವು. ಪಕ್ಷ ಬಿಡುವ ಯಾವುದೇ ಬೆಳವಣಿಗೆ ಇಲ್ಲ. ನಾವೆಲ್ಲ ಒಗ್ಗಟ್ಟಾಗಿದ್ದು, ಪಕ್ಷವನ್ನು ಅಧಿಕಾರಕ್ಕೆ ತರುವ ಕೆಲಸ ಮಾಡುತ್ತೇವೆ ಎಂದರು.

lokesh

Recent Posts

ಹಳೇ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ; ಪುಷ್ಪವೃಷ್ಟಿಗೈದು ಶಿಕ್ಷಕರನ್ನು ಸ್ವಾಗತಿಸಿ, ಸನ್ಮಾನಿಸಿದ ವಿದ್ಯಾರ್ಥಿ ಬಳಗ

ಗುಂಡ್ಲುಪೇಟೆ : ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ…

29 mins ago

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿದ ಆರ್.‌ಅಶೋಕ್‌

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…

6 hours ago

ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಸರ್ಕಾರ

ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…

6 hours ago

ರಾಜ್ಯದಲ್ಲಿ ಕೈಕೊಟ್ಟ ಮುಂಗಾರು: ಸಂಕಷ್ಟದತ್ತ ಕೃಷಿ ವಲಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…

6 hours ago

ಮಳೆ ಕೈಕೊಟ್ಟಿದ್ದಕ್ಕೆ ರಾಜ್ಯದಲ್ಲಿ ತಾಪಮಾನ ಏರಿಕೆ – ಮಳೆಗಾಲದಲ್ಲೇ ಬೇಸಿಗೆಯಂತಹ ಬಿಸಿಲು

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…

6 hours ago

SIR ನೋಟಿಸ್: ವಿಚಾರಣೆಗೆ ತೆರಳುವಾಗ ಈ ದಾಖಲೆಗಳು ನಿಮ್ಮ ಬಳಿ ಇರಲಿ

ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…

9 hours ago