ಮಂಡ್ಯ : ಕಾವೇರಿ ಕೇವಲ ಮಂಡ್ಯ ಜಿಲ್ಲೆಗೆ ಮಾತ್ರ ಸೀಮಿತವಾಗಿಲ್ಲ. ಇಡೀ ರಾಜ್ಯದ ಜೀವನಾಡಿಯಾಗಿದ್ದು, ಆದ್ದರಿಂದ ಇದನ್ನು ಉಳಿಸಿಕೊಳ್ಳಬೇಕಾದರೆ ಜನಪ್ರತಿನಿಧಿಗಳೂ ಹೋರಾಟವನ್ನು ಕೈಗೆತ್ತಿಕೊಳ್ಳಬೇಕೆಂದು ಮಾಜಿ ಸಚಿವ ಸಿ.ಎಸ್. ಪುಟ್ಟರಾಜು ಆಗ್ರಹಿಸಿದರು.
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಕೂಡಲೇ ನಿಲ್ಲಿಸುವಂತೆ ಆಗ್ರಹಿಸಿದ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿಯ 2ನೇ ದಿನವಾದ ಇಂದು ಸಿಎಸ್ ಪುಟ್ಟರಾಜು ಪಾಲ್ಗೊಂಡು ಮಾತನಾಡಿದರು, ನನ್ನ ಜಿಲ್ಲೆಗೆ ಯಾವುದೇ ಹಂತದಲ್ಲೂ ಅನ್ಯಾಯವಾಗಲು ಬಿಡುವುದಿಲ್ಲ. ಕಾವೇರಿ ನದಿ ನೀರು ಸಂಬಂಧ ನಡೆದಿರುವ ಹೋರಾಟದಲ್ಲಿ ಮಾಜಿ ಸಂಸದ ದಿ. ಜಿ.ಮಾದೇಗೌಡ ಅವರ ನೇತೃತ್ವದಲ್ಲಿ ನಡೆಯುತ್ತಿತ್ತು. ರೈತರ ಹೋರಾಟಕ್ಕೆ ನಮ್ಮ ಜಾತ್ಯತೀತ ಜನತಾದಳ ಬದ್ಧವಾಗಿದೆ. ಶನಿವಾರ ನಮ್ಮ ಪಕ್ಷದ ವತಿಯಿಂದ ಬೃಹತ್ ಹೋರಾಟ ನಡೆಸುತ್ತಿದ್ದು, ರಾಜ್ಯ ಸರ್ಕಾರದ ಕಣ್ತೆರೆಸುವ ಕೆಲಸ ಮಾಡುತ್ತೇವೆ ಎಂದರು.
ನಮ್ಮ ಹೋರಾಟದಲ್ಲಿ ಪಕ್ಷಾತೀತವಾಗಿ ಎಲ್ಲ ಜಿಲ್ಲಾ ಜನಪ್ರತಿನಿಧಿಗಳು ಭಾಗಿಯಾಗಿ ನ್ಯಾಯ ದೊರಕಿಸಿಕೊಡಬೇಕು. ಸಂಸದರು ಸಹ ಹೋರಾಟಕ್ಕಿಳಿಯಲಿ. ಶನಿವಾರ ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ ಅತಿ ಹೆಚ್ಚಿನ ರೈತರು ಭಾಗವಹಿಸಬೇಕೆಂದು ಮನವಿ ಮಾಡಿದರು.
ಪಕ್ಷದ ಬಿಡುತ್ತೇನೆನ್ನುವುದು ಸುಳ್ಳು : ನಾನು ಜಾತ್ಯತೀತ ಜನತಾದಳವನ್ನು ತ್ಯಜಿಸುತ್ತೇನೆ ಎನ್ನುವುದು ಸುಳ್ಳು. ಇದೆಲ್ಲ ಕೇವಲ ಊಹಾಪೋಹ ಅಷ್ಟೆ. ನಾನು ಜಾ.ದಳದಲ್ಲೇ ಸಕ್ರಿಯವಾಗಿ ಜವಾಬ್ದಾರಿ ನಿರ್ವಹಿಸುತ್ತೇನೆ ಎಂದು ಮಾಜಿ ಸಚಿವ ಸಿ.ಎಸ್. ಪುಟ್ಟರಾಜು ಸ್ಪಷ್ಟಪಡಿಸಿದರು.
ರಾಜ್ಯಸಭಾ ಸದಸ್ಯ ಕುಪೇಂದ್ರರೆಡ್ಡಿ ಅವರು ಪಕ್ಷ ಬಿಡುವುದಿಲ್ಲ. ನಾನು ಮತ್ತು ಅವರು ಮೂರು ದಿನ ಕೊಡಗಿನಲ್ಲಿದ್ದೆವು. ಪಕ್ಷ ಬಿಡುವ ಯಾವುದೇ ಬೆಳವಣಿಗೆ ಇಲ್ಲ. ನಾವೆಲ್ಲ ಒಗ್ಗಟ್ಟಾಗಿದ್ದು, ಪಕ್ಷವನ್ನು ಅಧಿಕಾರಕ್ಕೆ ತರುವ ಕೆಲಸ ಮಾಡುತ್ತೇವೆ ಎಂದರು.
ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…
ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…
ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…
ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…
ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…
ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…