ಮಂಡ್ಯ

ಕೊಕ್ಕರೆ ಬೆಳ್ಳೂರನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿಸಲು ಚಿಂತನೆ : ಶಾಸಕ ಉದಯ್‌

ಮದ್ದೂರು : ತಾಲ್ಲೂಕಿನ ಕೊಕ್ಕರೆ ಬೆಳ್ಳೂರು ಗ್ರಾಮವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಚಿಂತನೆ ನಡೆದಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.

ಮಂಡ್ಯ ಜಿಲ್ಲಾ ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕೆ.ಬೆಳ್ಳೂರು ಗ್ರಾಮ ಪಂಚಾಯಿತಿ ನೂತನವಾಗಿ ನವೀಕರಣ ಕಾರ್ಯಾಲಯ ಉದ್ಘಾಟನೆ ಹಾಗೂ ಕೂಸಿನ ಮನೆ ಉದ್ಘಾಟನೆ ಮತ್ತು ವಿಶೇಷ ಅಂಚೆ ಲಕೋಟಿ ಬಿಡುಗಡೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೊಕ್ಕರೆ ಬೆಳ್ಳೂರು ಇತಿಹಾಸ ಪ್ರಸಿದ್ಧವಾದ ಪಕ್ಷಿಧಾಮ ತಾಣವಾಗಿದೆ. ದೇಶ ವಿದೇಶಗಳಿಂದ ಇಲ್ಲಿಗೆ ಪಕ್ಷಿಗಳು ಇಲ್ಲಿಗೆ ವಸಗೆ ಬಂದು ವಾಸ ಮಾಡುತ್ತಿವೆ. ಇದನ್ನು ನೋಡಲು ಪ್ರವಾಸಿಗರು ದೇಶ ವಿದೇಶಗಳಿಂದಲೂ ಬರುತ್ತಾರೆ.

ಆದರೆ, ಇತ್ತೀಚಿನ ದಿನಗಳಲ್ಲಿ ಆಹಾರ ಮತ್ತು ನೀರಿನ ಕೊರತೆ ಮತ್ತಿತರೆ ಸಮಸ್ಯೆಗಳಿಂದ ಪಕ್ಷಿಗಳ ಸಂಖ್ಯೆ ಕಡಿಮೆಯಾಗಿದೆ. ಮುಂದಿನ ದಿನಗಳಲ್ಲಿ ಅವುಗಳಿಗೆ ಬೇಕಾದ ಎಲ್ಲಾ ರೀತಿಯ ಸೌಕರ್ಯಗಳನ್ನು ಕಲ್ಪಿಸುವುದರ ಮೂಲಕ ಕೊಕ್ಕರೆ ಬೆಳ್ಳೂರು ಗ್ರಾಮವನ್ನು ಪ್ರವಾಸೋದ್ಯಮವನ್ನಾಗಿ ಮಾಡಲಾಗುವುದು. ಅದಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.

ಕೊಕ್ಕರೆ ಬೆಳ್ಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕೆಂಪರಾಜು ಅವರು ತಮ್ಮೆಲ್ಲಾ ಸದಸ್ಯರುಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕುಡಿಯುವ ನೀರು, ರಸ್ತೆ ಅಭಿವೃದ್ಧಿ, ಚರಂಡಿ ಅಭಿವೃದ್ಧಿ ಹಾಗೂ ಪಂಚಾಯಿತಿಯ ನೂತನ ಕಾರ್ಯಾಲಯವನ್ನು ನವೀಕರಣಗೊಳಿಸಿ ಉದ್ಘಾಟನೆ ಮಾಡಿಸಿದ್ದಾರೆ. ಗ್ರಾಮಗಳ ಅಭಿವೃದ್ಧಿಯಾಗಬೇಕಾದರೆ ಅಲ್ಲಿಯ ಸ್ಥಳೀಯ ಜನಪ್ರತಿನಿಧಿಗಳು ಸಹಕರಿಸಬೇಕು ಎಂದರು.

ಇದೇ ವೇಳೆ ವಿಶೇಷ ಅಂಚೆ ಲಕೋಟೆಯನ್ನು ಶಾಸಕ ಕೆ.ಎಂ.ಉದಯ್ ಅವರು ಲೋಕಾರ್ಪಣೆಗೊಳಿಸಿದರು. ಭಾರತೀಯ ಅಂಚೆ ಇಲಾಖೆಯ ಅಧಿಕ್ಷಕರಾದ ಎಂ.ಡಿ.ಆಕಾಶ್ ಮಾತನಾಡಿ, ಅಂಚೆ ಇಲಾಖೆ ಲಕೋಟೆ ಬಿಡುಗಡೆಯಿಂದ ಎಲ್ಲ ರಾಜ್ಯಗಳಲ್ಲೂ ಕೊಕ್ಕರೆ ಬೆಳ್ಳೂರು ಹೆಚ್ಚು ಪ್ರಚಲಿತಕ್ಕೆ ಬರಲಿದೆ. ಇದರಿಂದ ಈ ಪಕ್ಷಿಧಾಮದ ವಿಚಾರವೂ ಎಲ್ಲರಿಗೂ ತಿಳಿಯುತ್ತದೆ ಎಂದರು.

ರಾಷ್ಟ್ರ, ರಾಜ್ಯಮಟ್ಟದಲ್ಲಿ ಖೋ ಖೋ ಆಟವನ್ನು ಆಡಿ ಚಿನ್ನದ ಪದಕ ಗಳಿಸಿದ ವಿದ್ಯಾರ್ಥಿಗಳಿಗೆ ಶಾಸಕ ಕೆ.ಎಂ.ಉದಯ್, ಪಂಚಾಯಿತಿ ಅಧ್ಯಕ್ಷ ಕೆಂಪರಾಜು ಅವರು ಸನ್ಮಾನಿಸಿದರು.

ಗ್ರಾಪಂ ಉಪಾಧ್ಯಕ್ಷೆ ಜ್ಯೋತಿ, ಸದಸ್ಯರಾದ ನಟರಾಜು, ಮಾದೇಶ್, ಸುಂದರಮ್ಮ, ದಿವ್ಯ ರಾಮಚಂದ್ರಶೆಟ್ಟಿ, ಮನ್‌ಮುಲ್ ನಿರ್ದೇಶಕ ಹರೀಶ್‌ಬಾಬು, ಡಿಸಿಸಿ ಬ್ಯಾಂಕ್ ನಿರ್ದೇಶಕ ಸಂದರ್ಶ, ಅಂಚೆ ಇಲಾಖೆಯ ಅಧಿಕ್ಷಕ ಆಕಾಶ್, ಎಂ.ಡಿ.ರಾಜು ಕಾಳೇಶ್ವರ, ನಾಗರಾಜು, ಪಿಡಿಒ ಪ್ರಭಾಕರ್, ಅಂಚೆ ಇಲಾಖೆಯ ಚೈತ್ರ ಶಶಿಧರ್‌ಗೌಡ, ಪಂಚಾಯಿತಿ ಸದಸ್ಯರು, ಸಿಬ್ಬಂದಿ ವರ್ಗ, ಗ್ರಾಮದ ಮುಖಂಡರು ಉಪಸ್ಥಿತರಿದ್ದರು.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

1 second ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

13 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

13 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

13 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

13 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

13 hours ago