ಮಂಡ್ಯ

ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಪ್ಲಾಸ್ಟಿಕ್‌ ಗೋದಾಮು

ಮಳವಳ್ಳಿ : ಪ್ಲಾಸ್ಟಿಕ್‌ ಗೋದಾಮಿಗೆ ಆಕಸ್ಮಿಕ ಬೆಂಕಿ ಬಿದ್ದು ಲಕ್ಷಾಂತರ ಮೌಲ್ಯದ ಹಳೆ ಪ್ಲಾಸ್ಟಿಕ್‌ ಭಸ್ಮವಾಗಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.

ತಾಲೂಕಿನ ಕಿರುಗಾವಲು ಪೊಲೀಸ್ ಠಾಣೆ ವ್ಯಾಪ್ತಿಯ ಕೊದೆನು ಕೊಪ್ಪಲು ಗ್ರಾಮದ ಸಮೀಪವಿರುವ ರೈಸ್ ಮಿಲ್ ಪಕ್ಕದ ಎಂ.ಎಂ ಪ್ಲಾಸ್ಟಿಕ್ ಗೋದಾಮಿಗೆ ಆಕಸ್ಮಿಕ ಬೆಂಕಿ ಬಿದ್ದಿದೆ. ಪರಿಣಾಮ ಲಕ್ಷಾಂತರ ಮೌಲ್ಯದ ಹಳೆ ಪ್ಲಾಸ್ಟಿಕ್ ಚೀಲ ಹಾಗೂ ಪ್ಲಾಸ್ಟಿಕ್ ಐಟಂಗಳು ಸುಟ್ಟು ಭಸ್ಮವಾಗಿದೆ.

ದಾರಿಹೋಕರು ಬೆಂಕಿಯನ್ನು ಗಮನಿಸಿ ಅಗ್ನಿಶಾಮಕ ಠಾಣೆಗೆ ಕರೆ ಮಾಡಿದ್ದಾರೆ. ತಕ್ಷಣ ಅಗ್ನಿಶಾಮಕದಳದ ಸಿಬ್ಬಂದಿಗಳು ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹನೂರು| ಶಿರಗೋಡು ಗ್ರಾಮದಲ್ಲಿ ಅದ್ಧೂರಿಯಾಗಿ ಜರುಗಿದ ಶ್ರೀ ಲಕ್ಷ್ಮೀ ವೆಂಕಟೇಶ್ವರ ರಥೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಶಿರಗೋಡು ಗ್ರಾಮದ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಾಲಯದಲ್ಲಿ ರಥೋತ್ಸವ ಭಾನುವಾರ ಬೆಳಿಗ್ಗೆ…

51 mins ago

ಇರಾನ್ ಇಸ್ರೇಲ್ ಸಂಘರ್ಷ ತೈಲ ಬೆಲೆ ಚಿನ್ನದ ಬೆಲೆ ಏರಿಕೆ ..?

ಟೆಹರಾನ್‌: ಇರಾನ್ ಮೇಲೆ ಇಸ್ರೇಲ್ ಅಮೆರಿಕ ಜಂಟಿಯಾಗಿ ದಾಳಿ ನಡೆಸಿದ ಪರಿಣಾಮ ಇದೀಗ ಇರಾನ್ ಕೂಡ ಪ್ರತೀಕಾರವಾಗಿ ಇಸ್ರೇಲ್ ಅಮೆರಿಕಾ…

1 hour ago

ಕೊಡಗು| ಬೆಟ್ಟತ್ತೂರು ಬಳಿ ಆನೆ ದಾಳಿಗೆ ವಿದ್ಯಾರ್ಥಿನಿ ಬಲಿ

ಕೊಡಗು: ಆನೆ ದಾಳಿಗೆ ವಿದ್ಯಾರ್ಥಿನಿ ಬಲಿಯಾಗಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಮದೆ ಬೆಟ್ಟತ್ತೂರು ಗ್ರಾಮದ ಗಿರೀಶ್‌ ಎಂಬುವವರ ಪುತ್ರಿ ಪೂಜಾ…

2 hours ago

ಕಾಂಗ್ರೆಸ್‌ಗೆ ಹೆಚ್ಚಿನ ಸೀಟು ಇಲ್ಲ: ಡಿಎಂಕೆ ಸ್ಪಷ್ಟ ಸಂದೇಶ

ತಮಿಳುನಾಡು: ತಮಿಳುನಾಡು ವಿಧಾನಸಭಾ ಚುನಾವಣೆ 2026ರ ಸೀಟು ಹಂಚಿಕೆ ಮಾತುಕತೆ ಆರಂಭವಾಗಿದೆ. ಜಾತ್ಯಾತೀತ ಪ್ರಗತಿಪರ ಮೈತ್ರಿಕೂಟದ ಪಕ್ಷಗಳಿಗೆ ಸೀಟು ಹಂಚಿಕೆ…

2 hours ago

ಚನ್ನಪಟ್ಟಣದಲ್ಲಿ ಕಾಡಾನೆ ಸೆರೆಗೆ ಸಾಕಾನೆಗಳ ಮೂಲಕ ಕಾರ್ಯಾಚರಣೆ

ರಾಮನಗರ: ಚನ್ನಪಟ್ಟಣ-ರಾಮನಗರ ಭಾಗದಲ್ಲಿ ಕಾಡಾನೆ ಉಪಟಳ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಎರಡು ಕಾಡಾನೆಗಳ ಸೆರೆಗೆ ಸರ್ಕಾರ ಅನುಮತಿ ನೀಡಿದೆ. ಚನ್ನಪಟ್ಟಣದ ಬಿ.ವಿ.ಹಳ್ಳಿ…

2 hours ago

ಚಿಕ್ಕಬಳ್ಳಾಪುರಕ್ಕೂ ಅಲಿ ಖಮೇನಿಗೂ ಇದೆ ನಂಟು

ಚಿಕ್ಕಬಳ್ಳಾಪುರ: ಇಸ್ರೇಲ್‌ ಹಾಗೂ ಅಮೇರಿಕಾ ನಡೆಸಿದ ದಾಳಿಯಲ್ಲಿ ಇರಾನ್‌ ಸರ್ವೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾಗಿದ್ದು, ಖನೇನಿಯ ಮಗಳು,…

2 hours ago