ಮಂಡ್ಯ

ಸಾರ್ವಜನಿಕರ ನೆಮ್ಮದಿಗೆ ಪೊಲೀಸ್ ಇಲಾಖೆ ಕಾರಣ: ಡಾ.ಕುಮಾರ

ಮಂಡ್ಯ: ಸಮಾಜದಲ್ಲಿ ಯಾವುದೇ ತೊಂದರೆಯಾಗದಂತೆ ಸಾರ್ವಜನಿಕರು ಶಾಂತಿ, ಸುಖದಿಂದ ಬದುಕಲು ಕಾರಣ ಪೊಲೀಸ್ ಇಲಾಖೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಹೇಳಿದರು.

ಇಂದು ನಗರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ‘ನಮ್ಮ ಪೊಲೀಸ್ ನಮ್ಮ ಹೆಮ್ಮೆ ಮ್ಯಾರಥಾನ್’ ಓಟಕ್ಕೆ ಹಸಿರು ಬಾವುಟ ಪ್ರದರ್ಶಿಸುವ ಮೂಲಕ ಚಾಲನೆ ನೀಡಿ ನಂತರ ಮಾತನಾಡಿದರು.

ಕರ್ನಾಟಕ ಪೊಲೀಸ್ ಇಲಾಖೆ 50 ವರ್ಷಗಳನ್ನು ಪೂರೈಸಿರುವುದು ಹೆಮ್ಮೆಯ ಸಂಗತಿ ಎಂದು ಹರ್ಷ ವ್ಯಕ್ತಪಡಿಸಿದರು. ಶಿಸ್ತಿನ ಪ್ರತೀಕವಾಗಿ ಪೊಲೀಸ್ ಇಲಾಖೆ ಕಾರ್ಯನಿರ್ವಹಿಸುತ್ತದೆ. ಸಾಮಾಜದ ಸ್ವಾಸ್ಥ್ಯವನ್ನು ಪೊಲೀಸ್ ಇಲಾಖೆ ಕಾಪಾಡಿಕೊಂಡು ಬಂದಿರುವುದು ಶ್ಲಾಘನೀಯ, ನಾವೆಲ್ಲರೂ ಪೊಲೀಸ್ ಇಲಾಖೆಯ ಕಾರ್ಯವನ್ನು ಪ್ರಶಂಸಿಸಬೇಕು ಎಂದು ಹೇಳಿದರು.

ಮನಸ್ಸು ಮತ್ತು ದೇಹ ಆರೋಗ್ಯಕರವಾಗಿದ್ದರೆ ಸದೃಢವಾಗಿ ಕೆಲಸ ನಿರ್ವಹಿಸಬಹುದು, ಒಳ್ಳೆಯ ಅಭ್ಯಾಸಗಳನ್ನು ಬೆಳೆಸಿಕೊಂಡು ಸದೃಢರಾಗಲು ದೇಹವನ್ನು ದಂಡಿಸಬೇಕು ಎಂದು ಮ್ಯಾರಥಾನ್ ನಲ್ಲಿ ಭಾಗವಹಿಸಿದ ಎಲ್ಲರಿಗೂ ಶಭಾಶಯಗಳನ್ನು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಮಾತನಾಡಿ, ನಮ್ಮ ಆರೋಗ್ಯ ಸೀಮಿತದಲ್ಲಿ ಇರಬೇಕೆಂದರೆ ಪ್ರತಿಯೊಬ್ಬರೂ ಸಧೃಡರಾಗಿ ಇರಬೇಕು. ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಇದನ್ನು ಸತತವಾಗಿ ಕಾಯ್ದುಕೊಳ್ಳಬೇಕು ಎಂದು ಹೇಳಿದರು.

ಈ ಮ್ಯಾರಥಾನ್ ಓಟದ ಮೂಲ ಉದ್ದೇಶ “ನಶೆ ಮುಕ್ತ ಕರ್ನಾಟಕ” ಅಭಿಯಾನ ಮಾಡುವುದು, ಹಾಗಾಗಿ ‘ನಮ್ಮ ಪೊಲೀಸ್ ನಮ್ಮ ಹೆಮ್ಮೆ’ ಎಂಬ ಘೋಷವಾಕ್ಯದಡಿ ಈ ಕಾರ್ಯಕ್ರಮ ರೂಪಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಚಲನಚಿತ್ರ ನಟ ರಿಷಿ, ಬಿಗ್ ಬಾಸ್ ಖ್ಯಾತಿಯ ರಜತ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಸಂಚಾಲಕಿ ಮೀರಾ ಶಿವಲಿಂಗಯ್ಯ, ಗಣ್ಯರಾದ ವೆಂಕಟಗಿರಿಯ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

43 mins ago

ಗಣರಾಜ್ಯೋತ್ಸವ : ಕರ್ನಾಟಕದ ಸ್ತಬ್ಧಚಿತ್ರಕ್ಕಿಲ್ಲ ಅವಕಾಶ

ಭುಗಿಲೆದ್ದ ಆಕ್ರೋಶ; ಬಿಜೆಪಿ -ಕಾಂಗ್ರೆಸ್ ಆರೋಪ-ಪ್ರತ್ಯಾರೋಪ ಬೆಂಗಳೂರು : ದೇಶದ 77ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಈ…

53 mins ago

ಮೈಷುಗರ್ ಕಾರ್ಖಾನೆ ಖಾಸಗಿಯವರಿಗೆ ವಹಿಸಲ್ಲ : ಸಿ.ಡಿ.ಗಂಗಾಧರ ಸ್ಪಷ್ಟನೆ

ಮಂಡ್ಯ : ಮೈಷುಗರ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ವಹಿಸುವ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ…

60 mins ago

ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತ : ಕಾರಣ ಬಿಚ್ಚಿಟ್ಟ ಸಂಸದ ಯದುವೀರ್‌

ಮೈಸೂರು : ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತವಾಗಿದೆ, ಯೋಜನೆಗೆ ಅಗತ್ಯವಿರುವ ಭೂಮಿಯನ್ನು ರಾಜ್ಯ ಸರ್ಕಾರ ಹಸ್ತಾಂತರ ಮಾಡಿಲ್ಲ. ಈ ಬಗ್ಗೆ…

1 hour ago

ಶಾರ್ಟ್‌ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಟಿವಿ ; ದಾಖಲಾತಿಗಳು ಭಸ್ಮ

ಹನೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಟಿವಿ ಸೇರಿದಂತೆ ಅತ್ಯಮೂಲ್ಯ ದಾಖಲಾತಿಗಳು ಸುಟ್ಟು ಕರಕಲಾದ ಘಟನೆ ಹನೂರು ತಾಲೂಕಿನ ಬಂಡಳ್ಳಿಯಲ್ಲಿ…

2 hours ago

ಹನೂರು| ರಾಜ್ಯ ಸರ್ಕಾರದ ವಿರುದ್ಧ ಅಂಡೆ ಕುರುಬನದೊಡ್ಡಿ ಗ್ರಾಮಸ್ಥರಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ  ಹನೂರು: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂಡೆ ಕುರುಬನ ದೊಡ್ಡಿ ಗ್ರಾಮದ ಡಾಂಬರು ರಸ್ತೆ ಅಭಿವೃದ್ಧಿಗೆ…

3 hours ago