ಮಂಡ್ಯ

ಸಾರ್ವಜನಿಕರ ನೆಮ್ಮದಿಗೆ ಪೊಲೀಸ್ ಇಲಾಖೆ ಕಾರಣ: ಡಾ.ಕುಮಾರ

ಮಂಡ್ಯ: ಸಮಾಜದಲ್ಲಿ ಯಾವುದೇ ತೊಂದರೆಯಾಗದಂತೆ ಸಾರ್ವಜನಿಕರು ಶಾಂತಿ, ಸುಖದಿಂದ ಬದುಕಲು ಕಾರಣ ಪೊಲೀಸ್ ಇಲಾಖೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಹೇಳಿದರು.

ಇಂದು ನಗರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ‘ನಮ್ಮ ಪೊಲೀಸ್ ನಮ್ಮ ಹೆಮ್ಮೆ ಮ್ಯಾರಥಾನ್’ ಓಟಕ್ಕೆ ಹಸಿರು ಬಾವುಟ ಪ್ರದರ್ಶಿಸುವ ಮೂಲಕ ಚಾಲನೆ ನೀಡಿ ನಂತರ ಮಾತನಾಡಿದರು.

ಕರ್ನಾಟಕ ಪೊಲೀಸ್ ಇಲಾಖೆ 50 ವರ್ಷಗಳನ್ನು ಪೂರೈಸಿರುವುದು ಹೆಮ್ಮೆಯ ಸಂಗತಿ ಎಂದು ಹರ್ಷ ವ್ಯಕ್ತಪಡಿಸಿದರು. ಶಿಸ್ತಿನ ಪ್ರತೀಕವಾಗಿ ಪೊಲೀಸ್ ಇಲಾಖೆ ಕಾರ್ಯನಿರ್ವಹಿಸುತ್ತದೆ. ಸಾಮಾಜದ ಸ್ವಾಸ್ಥ್ಯವನ್ನು ಪೊಲೀಸ್ ಇಲಾಖೆ ಕಾಪಾಡಿಕೊಂಡು ಬಂದಿರುವುದು ಶ್ಲಾಘನೀಯ, ನಾವೆಲ್ಲರೂ ಪೊಲೀಸ್ ಇಲಾಖೆಯ ಕಾರ್ಯವನ್ನು ಪ್ರಶಂಸಿಸಬೇಕು ಎಂದು ಹೇಳಿದರು.

ಮನಸ್ಸು ಮತ್ತು ದೇಹ ಆರೋಗ್ಯಕರವಾಗಿದ್ದರೆ ಸದೃಢವಾಗಿ ಕೆಲಸ ನಿರ್ವಹಿಸಬಹುದು, ಒಳ್ಳೆಯ ಅಭ್ಯಾಸಗಳನ್ನು ಬೆಳೆಸಿಕೊಂಡು ಸದೃಢರಾಗಲು ದೇಹವನ್ನು ದಂಡಿಸಬೇಕು ಎಂದು ಮ್ಯಾರಥಾನ್ ನಲ್ಲಿ ಭಾಗವಹಿಸಿದ ಎಲ್ಲರಿಗೂ ಶಭಾಶಯಗಳನ್ನು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಮಾತನಾಡಿ, ನಮ್ಮ ಆರೋಗ್ಯ ಸೀಮಿತದಲ್ಲಿ ಇರಬೇಕೆಂದರೆ ಪ್ರತಿಯೊಬ್ಬರೂ ಸಧೃಡರಾಗಿ ಇರಬೇಕು. ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಇದನ್ನು ಸತತವಾಗಿ ಕಾಯ್ದುಕೊಳ್ಳಬೇಕು ಎಂದು ಹೇಳಿದರು.

ಈ ಮ್ಯಾರಥಾನ್ ಓಟದ ಮೂಲ ಉದ್ದೇಶ “ನಶೆ ಮುಕ್ತ ಕರ್ನಾಟಕ” ಅಭಿಯಾನ ಮಾಡುವುದು, ಹಾಗಾಗಿ ‘ನಮ್ಮ ಪೊಲೀಸ್ ನಮ್ಮ ಹೆಮ್ಮೆ’ ಎಂಬ ಘೋಷವಾಕ್ಯದಡಿ ಈ ಕಾರ್ಯಕ್ರಮ ರೂಪಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಚಲನಚಿತ್ರ ನಟ ರಿಷಿ, ಬಿಗ್ ಬಾಸ್ ಖ್ಯಾತಿಯ ರಜತ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಸಂಚಾಲಕಿ ಮೀರಾ ಶಿವಲಿಂಗಯ್ಯ, ಗಣ್ಯರಾದ ವೆಂಕಟಗಿರಿಯ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

14 mins ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

16 mins ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

19 mins ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

21 mins ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

33 mins ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

37 mins ago