ಮಂಡ್ಯ

ನಾಗಮಂಗಲ | ಪೊಲೀಸರಿಂದ ಪಥಸಂಚಲನ

ನಾಗಮಂಗಲ : ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮತ್ತು ಜನರಲ್ಲಿ ಯಾವುದೇ ಭಯ, ಆತಂಕಗಳು ಮನೆ ಮಾಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪಟ್ಟಣದ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಇಲಾಖೆಯಿಂದ ಪಥಸಂಚಲನ ನಡೆಯಿತು.

ಪಟ್ಟಣದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಕೆ.ಎಸ್.ಆರ್.ಪಿ. ತುಕಡಿ, ಸಶಸ್ತ್ರ ಪಡೆ, ಗೃಹ ರಕ್ಷಕ ದಳ ಸೇರಿದಂತೆ ಸುಮಾರು ೨೫೦ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಸೂಕ್ಷ್ಮ ಪ್ರದೇಶಗಳಾದ ಮಂಡ್ಯ ವೃತ್ತ, ಮೈಸೂರು ರಸ್ತೆ, ಪಡುವಲಪಟ್ಟಣ ರಸ್ತೆ, ಬಡಗೂಡಮ್ಮ ದೇವಾಲಯದ ರಸ್ತೆ, ಸೌಮ್ಯಕೇಶವ ಸ್ವಾಮಿ ದೇವಾಲಯದ ರಸ್ತೆ, ಮರಿಯಪ್ಪ ವೃತ್ತಗಳಲ್ಲಿ ಪಥಸಂಚಲನ ನಡೆಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು, ಗಣೇಶ ಉತ್ಸವ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಜನರಲ್ಲಿ ವಿಶ್ವಾಸ ಮೂಡಿಸುವುದರ ಜೊತೆಗೆ ಪೊಲೀಸ್ ಇಲಾಖೆಯು ಹೇಗೆ ಸಿದ್ಧತೆ ಮಾಡಿಕೊಂಡಿದೆ ಎಂಬುದನ್ನು ತಿಳಿಸುವುದು ಈ ಪಥ ಸಂಚಲನ ಪ್ರಮುಖ ಉದ್ದೇಶವಾಗಿದೆ ಎಂದರು.

ಕಳೆದ ವರ್ಷ ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಉಂಟಾದ ಗಲಭೆಯಲ್ಲಿ ೫೮ ಜನರನ್ನು ಬಂಧಿಸಲಾಗಿತ್ತು. ೨೮ ಪ್ರಕರಣಗಳನ್ನು ದಾಖಲು ಮಾಡಲಾಗಿತ್ತು. ಆ ಎಲ್ಲಾ ಪ್ರಕರಣಗಳಲ್ಲೂ ತನಿಖೆ ಮುಗಿದು ಚಾರ್ಜ್ ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಸುಮಾರು ೧೮೯ ಜನರ ಮೇಲೆ ಪ್ರಕರಣ ದಾಖಲಾಗಿದ್ದವು. ಅವರೆಲ್ಲರ ಮೇಲೂ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುತ್ತಿದ್ದೇವೆ ಎಂದರು.

ಪಥ ಸಂಚಲನದಲ್ಲಿ ಹೆಚ್ಚುವರಿ ಎಸ್‌ಪಿ ತಿಮ್ಮಯ್ಯ, ಡಿವೈಎಸ್‌ಪಿ ಚಲುವರಾಜು, ಸಿಪಿಐ ನಿರಂಜನ್, ಪೊಲೀಸ್ ಇನ್‌ಸ್ಪೆಕ್ಟರ್ ಶಿವಕುಮಾರ್, ಸಿಬ್ಬಂದಿ ಪಾಲ್ಗೊಂಡಿದ್ದರು.

ಆಂದೋಲನ ಡೆಸ್ಕ್

Recent Posts

ಹನೂರು| ಆಟೋ ಹಾಗೂ ಕಾರಿನ ನಡುವೆ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ‌ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…

3 hours ago

ನೀಟ್‌ ಪರೀಕ್ಷೆಯ ರದ್ದು, ಕೇಂದ್ರ ಸರ್ಕಾರದ ಬಹು ದೊಡ್ಡ ಹಗರಣ: ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…

3 hours ago

ಪಾಕಿಸ್ತಾನದಲ್ಲಿ ಭೀಕರ ಬಾಂಬ್‌ ಸ್ಫೋಟ: 9 ಮಂದಿ ಸಾವು

ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…

3 hours ago

ನಾಳೆಯಿಂದ ಎರಡು ದಿನ ಸಿದ್ದರಾಮಯ್ಯ ಮೈಸೂರು ಪ್ರವಾಸ

ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…

3 hours ago

ವನ್ಯಜೀವಿ ಸಂಚಾರವಿರುವ ಚಾರಣಪಥ, ಸಂಚಾರಪಥ ಸ್ಥಗಿತಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…

3 hours ago

ನಾಗಮಲೆ ಗ್ರಾಮದಲ್ಲಿ ಎರಡು ಮೇಕೆ ಹೊತ್ತೊಯ್ದ ಚಿರತೆ: ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…

3 hours ago