ಮಂಡ್ಯ

ಹನುಮ ಧ್ವಜ ಕೆಳಗಿಳಿಸಿದ ಪೊಲೀಸರು: ಕೆರೆಗೋಡು ಗ್ರಾಮಸ್ಥರ ಮೇಲೆ ಲಾಠಿ ಚಾರ್ಜ್‌

ಮಂಡ್ಯ: ಜಿಲ್ಲೆಯ ಕೆರೆಗೋಡು 108 ಅಡಿ ಎತ್ತರದಲ್ಲಿದ್ದ ಹನುಮಧ್ವಜವನ್ನು ಪೊಲೀಸರು ಕೆಳಗಿಳಿಸಿದ್ದು, ಇದರಿಂದ ಪ್ರತಿಭಟನೆಯ ಕಿಚ್ಚು ಹೆಚ್ಚಾಗುತ್ತಿದ್ದಂತೆ ಜಿಲ್ಲಾಡಳಿತದ ಕೆರಗೋಡು ಗ್ರಾಮದಲ್ಲಿ ಸೆಕ್ಷನ್ 144 ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದೆ.

ಕೆರೆಗೋಡು ಗ್ರಾಮದಲ್ಲಿ ಹನುಮ ಧ್ವಜ ಕೆಳಗಿಳಿಸುತ್ತಿದ್ದಂತೆ ಜಿಲ್ಲಾಡಳಿತ ಹಾಗೂ ಪೊಲೀಸರ ವಿರುದ್ಧ ಜನ ತಿರುಗಿಬಿದ್ದಿದ್ದಾರೆ. ಸ್ವಯಂಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಪ್ರತಿಭಟನೆಗೆ ಧುಮುಕಿದ್ದಾರೆ. ಈ ಹಿನ್ನೆಲೆಯಲ್ಲಿ ಕೆರಗೋಡಿನಲ್ಲಿ 144 ಸೆಕ್ಷನ್ ಜಾರಿಗೊಳಿಸಿದ್ದು, ಸ್ಥಳದಲ್ಲಿ ನೂರಕ್ಕೂ ಹೆಚ್ಚು ಪೊಲೀಸರನ್ನ ಭದ್ರತೆಗೆ ನಿಯೋಜಿಸಲಾಗಿದೆ.

ಪ್ರತಿಭಟನೆ ಕಾವು ಹೆಚ್ಚಾಗುತ್ತಿದ್ದಂತೆ ಪರಿಸ್ಥಿತಿಯನ್ನ ತಿಳಿಗೊಳಿಸಲು ಗ್ರಾಮಸ್ಥರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಅಲ್ಲದೇ ಶ್ರೀರಾಮನ ಬ್ಯಾನರ್ ಕಿತ್ತು ಹಾಕಿದ್ದಾರೆ. ಬೃಹತ್ ಧ್ವಜಸ್ತಂಬವನ್ನು ಕಟ್ ಮಾಡೋದಕ್ಕೆ ಗ್ಯಾಸ್‌ಕಟ್ಟರ್ ತರಿಸಿದ್ದಾರೆ.

ಪೊಲೀಸರ ನಡೆಗೆ ಗ್ರಾಮಸ್ಥರು, ಹಿಂದೂ ಕಾರ್ಯಕರ್ತರು, ಮಹಿಳೆಯರು ಶಾಪ ಹಾಕಿದ್ದಾರೆ. ಕಣ್ಣೀರಿಟ್ಟು, ಬಾಯಿ ಬಾಯಿ ಬಡಿದುಕೊಳ್ಳುತ್ತಿದ್ದಾರೆ. ಶಾಸಕ ಗಣಿಗ ರವಿ ಫೋಟೋಗೆ ಚಪ್ಪಲಿಯಿಂದ ಹೊಡೆದು ಆಕ್ರೋಶ ಹೊರಹಾಕಿದ್ದಾರೆ. ಶಾಸಕರ ಕುಮ್ಮಕ್ಕಿನಿಂದ ಈ ರೀತಿ ಕೆಲಸವಾಗ್ತಿದೆ ಎಂದು ಕಿಡಿ ಕಾರಿದ್ದಾರೆ.

ಹನುಮ ಧ್ವಜ ಇಳಿಸಿದ್ದರ ವಿರುದ್ಧ ಆಕ್ರೋಶ ಹೊರಹಾಕಿದ ಕೆರೆಗೋಡು ಗ್ರಾಮಸ್ಥರು ಮಂಡ್ಯ-ಯಡಿಯೂರು ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಕೈ ಶಾಸಕ ಗಣಿಗ ರವಿಕುಮಾರ್ ಫ್ಲೆಕ್ಸ್ ಹರಿದು, ಒಲೆ ಹಚ್ಚಿ, ರಸ್ತೆಯಲ್ಲೇ ಅಡುಗೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ.

andolanait

Recent Posts

ಕ್ಯಾತನಹಳ್ಳಿಯಲ್ಲಿ ಅರ್ಧಕ್ಕೆ ನಿಂತ ಕಾಮಗಾರಿಗಳು

ಮಹೇಶ್ ಕರೋಠಿ ಕಿಕ್ಕೇರಿ: ಇಲ್ಲಿಗೆ ಸಮೀಪದ ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತನಹಳ್ಳಿ ಗ್ರಾಮದಲ್ಲಿ ಕಳೆದ ೨-೩ ವರ್ಷಗಳಿಂದ ಹಲವು…

11 mins ago

ಓದುಗರ ಪತ್ರ: ಬಂದರು ಎಂದರೆ…

ನೆಂಟರಿಷ್ಟರು ಮನೆಗೆ ಬಂದರು ಎಂದರೆ... ಏನು ಎತ್ತ, ಹೇಗೆ ಅವರ ಆತಿಥ್ಯ? ಇಂಥ ಸಂಕಷ್ಟಗಳಿಗೆಲ್ಲಾ ಕಾರಣ,ಬಂದ್ ಆಗಿರುವ ಆ ಹಾರ್ಮುಜ್…

15 mins ago

ಓದುಗರ ಪತ್ರ: ರಸ್ತೆ ಡುಬ್ಬಗಳಿಗೆ ಬಿಳಿ ಬಣ್ಣ ಬಳಿಯಿರಿ

ಮೈಸೂರಿನಿಂದ ಎಚ್.ಡಿ.ಕೋಟೆ ಮಾರ್ಗದಲ್ಲಿ ಬರುವ ಮಾದಾಪುರ ಗ್ರಾಮದಿಂದ ಕೆ. ಬೆಳತ್ತೂರು ಹಾಗೂ ಲೆಂಕೆ ಗ್ರಾಮದವರೆಗೂ ರಸ್ತೆ ಡಾಂಬರೀಕರಣವಾಗಿದೆ. ಈ ರಸ್ತೆಯಲ್ಲಿ…

17 mins ago

ಓದುಗರ ಪತ್ರ: ರಾಜಕೀಯದ ಪ್ರಚಾರ ಸಾಧನವಾಗುತ್ತಿರುವ ಜಾತ್ರೆಗಳು

ಜಾತ್ರೆಗಳು ಹಾಗೂ ಹಬ್ಬಗಳು ಗ್ರಾಮದ ಎಲ್ಲಾ ಜನರು ಒಟ್ಟುಗೂಡಿ ಮಾಡುವ ಕಾರ್ಯಕ್ರಮವಾಗಿವೆ. ಇದರಲ್ಲಿ ಜನರ ಒಗ್ಗಟ್ಟು, ಪರಸ್ಪರ ಸಹಕಾರ ಕಾಣುತ್ತೇವೆ.…

19 mins ago

ಓದುಗರ ಪತ್ರ: ಸೆಸ್ಕ್ ಯುಜಿ ಕೇಬಲ್ ಮುಂಜಾಗ್ರತೆ ವಹಿಸಿ

ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್)ದಿಂದ ಅಂಡರ್ ಗ್ರೌಂಡ್ ಕೇಬಲ್ ಅನ್ನು ಅಳಡಿಸುತ್ತಿದ್ದು, ಕಾಮಗಾರಿಯ…

23 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಕೆನೆಪದರ ಪರಿಶಿಷ್ಟರಿಗೆ ಬೇಡವೆನ್ನುವ ಕೇಂದ್ರಕ್ಕೆ ಮತ್ತೆ ಸುಪ್ರೀಂ ತಾಕೀತು

ಮೀಸಲಾತಿ ವ್ಯವಸ್ಥೆ ಜಾರಿ ಸಂಬಂಧ ಪರ ಮತ್ತು ವಿರೋಧದ ಚರ್ಚೆ ಹಾದಿ ಬೀದಿ, ಹಳ್ಳಿಯ ಪಂಚಾಯಿತಿ ಕಟ್ಟೆಗಳಲ್ಲಿ ಮತ್ತು ಖಾಸಗಿಯಾಗಿ…

27 mins ago