ಮಂಡ್ಯ: ಜಿಲ್ಲೆಯ ಕೆರೆಗೋಡು 108 ಅಡಿ ಎತ್ತರದಲ್ಲಿದ್ದ ಹನುಮಧ್ವಜವನ್ನು ಪೊಲೀಸರು ಕೆಳಗಿಳಿಸಿದ್ದು, ಇದರಿಂದ ಪ್ರತಿಭಟನೆಯ ಕಿಚ್ಚು ಹೆಚ್ಚಾಗುತ್ತಿದ್ದಂತೆ ಜಿಲ್ಲಾಡಳಿತದ ಕೆರಗೋಡು ಗ್ರಾಮದಲ್ಲಿ ಸೆಕ್ಷನ್ 144 ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದೆ.
ಕೆರೆಗೋಡು ಗ್ರಾಮದಲ್ಲಿ ಹನುಮ ಧ್ವಜ ಕೆಳಗಿಳಿಸುತ್ತಿದ್ದಂತೆ ಜಿಲ್ಲಾಡಳಿತ ಹಾಗೂ ಪೊಲೀಸರ ವಿರುದ್ಧ ಜನ ತಿರುಗಿಬಿದ್ದಿದ್ದಾರೆ. ಸ್ವಯಂಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಪ್ರತಿಭಟನೆಗೆ ಧುಮುಕಿದ್ದಾರೆ. ಈ ಹಿನ್ನೆಲೆಯಲ್ಲಿ ಕೆರಗೋಡಿನಲ್ಲಿ 144 ಸೆಕ್ಷನ್ ಜಾರಿಗೊಳಿಸಿದ್ದು, ಸ್ಥಳದಲ್ಲಿ ನೂರಕ್ಕೂ ಹೆಚ್ಚು ಪೊಲೀಸರನ್ನ ಭದ್ರತೆಗೆ ನಿಯೋಜಿಸಲಾಗಿದೆ.
ಪ್ರತಿಭಟನೆ ಕಾವು ಹೆಚ್ಚಾಗುತ್ತಿದ್ದಂತೆ ಪರಿಸ್ಥಿತಿಯನ್ನ ತಿಳಿಗೊಳಿಸಲು ಗ್ರಾಮಸ್ಥರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಅಲ್ಲದೇ ಶ್ರೀರಾಮನ ಬ್ಯಾನರ್ ಕಿತ್ತು ಹಾಕಿದ್ದಾರೆ. ಬೃಹತ್ ಧ್ವಜಸ್ತಂಬವನ್ನು ಕಟ್ ಮಾಡೋದಕ್ಕೆ ಗ್ಯಾಸ್ಕಟ್ಟರ್ ತರಿಸಿದ್ದಾರೆ.
ಪೊಲೀಸರ ನಡೆಗೆ ಗ್ರಾಮಸ್ಥರು, ಹಿಂದೂ ಕಾರ್ಯಕರ್ತರು, ಮಹಿಳೆಯರು ಶಾಪ ಹಾಕಿದ್ದಾರೆ. ಕಣ್ಣೀರಿಟ್ಟು, ಬಾಯಿ ಬಾಯಿ ಬಡಿದುಕೊಳ್ಳುತ್ತಿದ್ದಾರೆ. ಶಾಸಕ ಗಣಿಗ ರವಿ ಫೋಟೋಗೆ ಚಪ್ಪಲಿಯಿಂದ ಹೊಡೆದು ಆಕ್ರೋಶ ಹೊರಹಾಕಿದ್ದಾರೆ. ಶಾಸಕರ ಕುಮ್ಮಕ್ಕಿನಿಂದ ಈ ರೀತಿ ಕೆಲಸವಾಗ್ತಿದೆ ಎಂದು ಕಿಡಿ ಕಾರಿದ್ದಾರೆ.
ಹನುಮ ಧ್ವಜ ಇಳಿಸಿದ್ದರ ವಿರುದ್ಧ ಆಕ್ರೋಶ ಹೊರಹಾಕಿದ ಕೆರೆಗೋಡು ಗ್ರಾಮಸ್ಥರು ಮಂಡ್ಯ-ಯಡಿಯೂರು ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಕೈ ಶಾಸಕ ಗಣಿಗ ರವಿಕುಮಾರ್ ಫ್ಲೆಕ್ಸ್ ಹರಿದು, ಒಲೆ ಹಚ್ಚಿ, ರಸ್ತೆಯಲ್ಲೇ ಅಡುಗೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…