ಮಂಡ್ಯ : ಲೋಕಸಭಾ ಸಾರ್ವತ್ರಿಕ ಚುನಾವಣೆ 2024. ರ ಅಂಗವಾಗಿ ಈಗಾಗಲೇ ಗುರುತಿಸಲಾಗಿರುವ ಅಗತ್ಯ ಸೇವಾ ವಲಯದ ಮತದಾರರಿಗೆ ಮಂಡ್ಯ ವಿಶ್ವವಿದ್ಯಾಲಯದ ಕಲಾ ವಿಭಾಗದಲ್ಲಿ ಏಪ್ರಿಲ್ 19, 20 ಹಾಗೂ 21 ರಂದು ಅಂಚೆ ಮತದಾನ ಕೇಂದ್ರವನ್ನು ತೆರೆಯಲಾಗುವುದು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೋಸ್ಟಲ್ ನೋಡಲ್ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.
ಭಾರತ ಚುನಾವಣಾ ಆಯೋಗ ಪೊಲೀಸ್, ಅಗ್ನಿಶಾಮಕ ಇಲಾಖೆ, ಸಾರಿಗೆ, ಚೆಸ್ಕಾಂ ಸೇರಿದಂತೆ 11 ವಲಯಗಳನ್ನು ಅಗತ್ಯ ಸೇವಾ ವಲಯ ಎಂದು ಗುರುತಿಸಲಾಗಿದ್ದು, ಅವರಿಗೆ 12 ಡಿ ಯನ್ನು ವಿತರಿಸಲಾಗಿದೆ ಎಂದರು.
ಒಟ್ಟು 1022 ಜನರಿಗೆ ಅಂಚೆ ಮತದಾನಕ್ಕೆ ವ್ಯವಸ್ಥೆ : ಮಂಡ್ಯ ಲೋಕಸಭಾ ಕ್ಷೇತ್ರದ ಮತದಾರರಾಗಿ ಮಂಡ್ಯದಲ್ಲೇ ಕಾರ್ಯನಿರ್ವಹಿಸುತ್ತಿರುವ 501 ಮತದಾರರು ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಮತದಾರರಾಗಿ ಬೇರೆ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸುತ್ತಿರುವ 521 ಮತದಾರರು 12 ಡಿ ಮೂಲಕ ಪೋಸ್ಟಲ್ ಬ್ಯಾಲೆಟ್ ನಲ್ಲಿ ಮತದಾನ ಮಾಡಲು ಒಪ್ಪಿಗೆ ನೀಡಿದ್ದು ಒಟ್ಟು 1022 ಜನರು ಏಪ್ರಿಲ್ 19, 20 ಹಾಗೂ 21 ರಂದು ಬೆಳಿಗ್ಗೆ 9 ರಿಂದ 5 ರವರೆಗೆ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ. ತಪ್ಪದೇ ಮತದಾನ ಮಾಡುವಂತೆ ಮನವಿ ಮಾಡಿದರು.
ಪೋಸ್ಟಲ್ ನೋಡಲ್ ಅಧಿಕಾರಿಗಳು ತಮ್ಮ ವಲಯದ ವ್ಯಾಪ್ತಿಯ ಮತದಾರರಿಗೆ ಮಾಹಿತಿ ನೀಡಿ ಮತದಾನ ಮಾಡುವಂತೆ ತಿಳಿಸಿ. ಜಿಲ್ಲಾಧಿಕಾರಿಗಳ ಕಚೇರಿಯಿಂದಲೂ ಸಹ ಎಲ್ಲರಿಗೂ ಎಸ್.ಎಂ.ಎಸ್ ಮೂಲಕ ಮತದಾನದ ದಿನಾಂಕ, ಸಮಯ ಹಾಗೂ ಸ್ಥಳದ ಮಾಹಿತಿಯನ್ನು ಸಹ ಕಳುಹಿಸಿಕೊಡಲಾಗುವುದು ಎಂದರು.
ಅಂಚೆ ಮತದಾನವನ್ನು 12 ಡಿ ಮೂಲಕ ಆಯ್ಕೆ ಮಾಡಿರುವ ಮತದಾರರು ನಿಗದಿತ ದಿನದಂದು ಮತದಾನ ಮಾಡಿ. ಇವರಿಗೆ ಏಪ್ರಿಲ್ 26 ರಂದು ಇ.ವಿ.ಎಂ. ಮೂಲಕ ಮತದಾನ ಮಾಡಲು ಅವಕಾಶವಿರುವುದಿಲ್ಲ. ಈ ವಿಷಯವನ್ನು ನೋಡಲ್ ಅಧಿಕಾರಿಗಳು ತಪ್ಪದೇ ಮತದಾರರಿಗೆ ತಿಳಿಸಿ ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ: ಹೆಚ್.ಎಲ್ ನಾಗರಾಜು, ಪುರಸಭೆ ತಹಶೀಲ್ದಾರ್ ರವಿಶಂಕರ್, ಗ್ರಾಮೀಣ ಕುಡಿಯುವ ನೀರು ಇಲಾಖೆಯ ಕಾರ್ಯಪಾಲಕ ಅಭಿಯಂತರ ಶಿವರಾಜು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ನಿರ್ಮಲ ಎಸ್.ಹೆಚ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಮೈಸೂರು : ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ…
ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…