ಮಂಡ್ಯ

ಅಗತ್ಯ ಸೇವಾ ವಲಯದವರಿಗೆ ಏಪ್ರಿಲ್ 19, 20 ಹಾಗೂ 21 ರಂದು ಅಂಚೆ ಮತದಾನ: ಡಾ: ಕುಮಾರ

ಮಂಡ್ಯ : ಲೋಕಸಭಾ ಸಾರ್ವತ್ರಿಕ ಚುನಾವಣೆ 2024. ರ ಅಂಗವಾಗಿ ಈಗಾಗಲೇ ಗುರುತಿಸಲಾಗಿರುವ ಅಗತ್ಯ ಸೇವಾ ವಲಯದ ಮತದಾರರಿಗೆ ಮಂಡ್ಯ ವಿಶ್ವವಿದ್ಯಾಲಯದ ಕಲಾ ವಿಭಾಗದಲ್ಲಿ ಏಪ್ರಿಲ್ 19, 20 ಹಾಗೂ 21 ರಂದು ಅಂಚೆ ಮತದಾನ ಕೇಂದ್ರವನ್ನು ತೆರೆಯಲಾಗುವುದು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅವರು ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೋಸ್ಟಲ್ ನೋಡಲ್ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.
ಭಾರತ ಚುನಾವಣಾ ಆಯೋಗ ಪೊಲೀಸ್, ಅಗ್ನಿಶಾಮಕ ಇಲಾಖೆ, ಸಾರಿಗೆ, ಚೆಸ್ಕಾಂ ಸೇರಿದಂತೆ 11 ವಲಯಗಳನ್ನು ಅಗತ್ಯ ಸೇವಾ ವಲಯ ಎಂದು ಗುರುತಿಸಲಾಗಿದ್ದು, ಅವರಿಗೆ 12 ಡಿ ಯನ್ನು ವಿತರಿಸಲಾಗಿದೆ ಎಂದರು.

ಒಟ್ಟು 1022 ಜನರಿಗೆ ಅಂಚೆ ಮತದಾನಕ್ಕೆ ವ್ಯವಸ್ಥೆ : ಮಂಡ್ಯ ಲೋಕಸಭಾ ಕ್ಷೇತ್ರದ ಮತದಾರರಾಗಿ ಮಂಡ್ಯದಲ್ಲೇ ಕಾರ್ಯನಿರ್ವಹಿಸುತ್ತಿರುವ 501 ಮತದಾರರು ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಮತದಾರರಾಗಿ ಬೇರೆ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸುತ್ತಿರುವ 521 ಮತದಾರರು 12 ಡಿ ಮೂಲಕ ಪೋಸ್ಟಲ್ ಬ್ಯಾಲೆಟ್ ನಲ್ಲಿ ಮತದಾನ ಮಾಡಲು ಒಪ್ಪಿಗೆ ನೀಡಿದ್ದು ಒಟ್ಟು 1022 ಜನರು ಏಪ್ರಿಲ್ 19, 20 ಹಾಗೂ 21 ರಂದು ಬೆಳಿಗ್ಗೆ 9 ರಿಂದ 5 ರವರೆಗೆ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ. ತಪ್ಪದೇ ಮತದಾನ ಮಾಡುವಂತೆ ಮನವಿ ಮಾಡಿದರು.

ಪೋಸ್ಟಲ್ ನೋಡಲ್ ಅಧಿಕಾರಿಗಳು ತಮ್ಮ ವಲಯದ ವ್ಯಾಪ್ತಿಯ ಮತದಾರರಿಗೆ ಮಾಹಿತಿ ನೀಡಿ ಮತದಾನ ಮಾಡುವಂತೆ ತಿಳಿಸಿ. ಜಿಲ್ಲಾಧಿಕಾರಿಗಳ ಕಚೇರಿಯಿಂದಲೂ ಸಹ ಎಲ್ಲರಿಗೂ ಎಸ್.ಎಂ.ಎಸ್ ಮೂಲಕ ಮತದಾನದ ದಿನಾಂಕ, ಸಮಯ ಹಾಗೂ ಸ್ಥಳದ ಮಾಹಿತಿಯನ್ನು ಸಹ ಕಳುಹಿಸಿಕೊಡಲಾಗುವುದು ಎಂದರು.

ಅಂಚೆ ಮತದಾನವನ್ನು 12 ಡಿ ಮೂಲಕ‌ ಆಯ್ಕೆ ಮಾಡಿರುವ ಮತದಾರರು ನಿಗದಿತ ದಿನದಂದು ಮತದಾನ ಮಾಡಿ. ಇವರಿಗೆ ಏಪ್ರಿಲ್ 26 ರಂದು ಇ.ವಿ.ಎಂ. ಮೂಲಕ‌ ಮತದಾನ ಮಾಡಲು ಅವಕಾಶವಿರುವುದಿಲ್ಲ. ಈ ವಿಷಯವನ್ನು ನೋಡಲ್ ಅಧಿಕಾರಿಗಳು ತಪ್ಪದೇ ಮತದಾರರಿಗೆ ತಿಳಿಸಿ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ: ಹೆಚ್.ಎಲ್ ನಾಗರಾಜು, ಪುರಸಭೆ ತಹಶೀಲ್ದಾರ್ ರವಿಶಂಕರ್, ಗ್ರಾಮೀಣ ಕುಡಿಯುವ ನೀರು ಇಲಾಖೆಯ ಕಾರ್ಯಪಾಲಕ ಅಭಿಯಂತರ ಶಿವರಾಜು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ‌ ನಿರ್ಮಲ ಎಸ್.ಹೆಚ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

8 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

8 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

8 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

11 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

11 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

11 hours ago