ಮಂಡ್ಯ

ಕೆ.ಆರ್.ಎಸ್ ಡ್ಯಾಂ ನಿಂದ ನಾಲೆಗಳಿಗೆ ನೀರು ಬಿಡುಗಡೆ ಮುಂದೂಡಿಕೆ

ಮಂಡ್ಯ : ನಾಲಾ ಆಧುನೀಕರಣ ಕಾಮಗಾರಿಯಿಂದಾಗಿ ಕೆ.ಆರ್.ಎಸ್‌ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆಯನ್ನ ಮುಂದೂಡಿಕೆ ಮಾಡಲಾಗಿದೆ.

ನಿನ್ನೆ ಸಂಜೆಯಿಂದಲೇ ನಾಲೆಗಳಿಗೆ ನೀರು ಬಿಡುಗಡೆ ಮಾಡುವುದಾಗಿ ಜಿಲ್ಲಾಡಳಿತ ತಿಳಿಸಿತ್ತು. ಸಚಿವ ಚೆಲುವರಾಯಸ್ವಾಮಿ  ನೇತೃತ್ವದಲ್ಲಿ ಸಭೆ ನಡೆಸಿ ನೀರು ಬಿಡುಗಡೆಗೆ ತೀರ್ಮಾನಿಸಿ ಜುಲೈ ೮ ರಿಂದ ೧೫ ರವರೆಗೆ ನೀರು ಬಿಡುಗಡೆ ಮಾಡುವುದಾಗಿ ತಿಳಿಸಲಾಗಿತ್ತು.

ಆದರೆ ವಿಶ್ವೇಶ್ವರಯ್ಯ ನಾಲೆ ಆಧುನೀಕರಣ ಕಾಮಗಾರಿಯಿಂದ ನೀರು ಬಿಡುಗಡೆ ತಡವಾಗಿದೆ.  ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಯಂತ್ರೋಪಕರಣಗಳು ಇದ್ದು, ಯಂತ್ರೋಪಕರಣಗಳನ್ನ ನಾಲೆಯಿಂದ ತೆರವುಗೊಳಿಸಿದ ಬಳಿಕ ಅಂದರೆ ಬುಧವಾರದಿಂದ ನಾಲೆಗಳಿಗೆ ನೀರು ಬಿಡುವ ಸಾಧ್ಯತೆ ಇದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

2030ರ ವೇಳೆಗೆ 2 ಮಿಲಿಯನ್‌ ಉದ್ಯೋಗ ಸೃಷ್ಟಿ, ಅಭಿವೃದ್ಧಿ ಪರ ಆಯವ್ಯಯ : ಸಂಸದ ಯದುವೀರ್‌

ಮೈಸೂರು : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ…

5 hours ago

ಜನರನ್ನು ದಿಕ್ಕು ತಪ್ಪಿಸುತ್ತಿರುವ ಎನ್‌ಸಿಬಿ : ಎಂ.ಲಕ್ಷ್ಮಣ್‌ ಆರೋಪ

ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್‌ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ.…

5 hours ago

ಬಡತನ ಪ್ರಮಾಣ ಗಣನೀಯ ಇಳಿಕೆ: ನಿರ್ಮಲಾ

ಹೊಸದಿಲ್ಲಿ: ಕಳೆದ 12 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಶಿಸ್ತುಬದ್ಧ ಆರ್ಥಿಕ ನಿರ್ವಹಣೆ ನಡೆಯುತ್ತಿರುವುದರಿಂದ ಭಾರತದ ಜಿಡಿಪಿ ದರ…

6 hours ago

ಕೇಂದ್ರ ಬಜೆಟ್‌ | 17.2 ಲಕ್ಷ ಕೋಟಿ ರೂ. ಸಾಲ

ಹೊಸದಿಲ್ಲಿ : ಕೇಂದ್ರ ಸರ್ಕಾರ 2026-27 ನೇ ಸಾಲಿಗೆ 17.2 ಲಕ್ಷ ಕೋಟಿ ರೂ. ಸಾಲ ಪಡೆಯಲಿದೆ ಎಂದು ಹಣಕಾಸು…

6 hours ago

ಕೇಂದ್ರ ಬಜೆಟ್‌ | ಯಾವುದು ಅಗ್ಗ, ಯಾವುದು ದುಬಾರಿ ?

ಹೊಸದಿಲ್ಲಿ : ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಆಯವ್ಯಯದಲ್ಲಿ…

6 hours ago

ಕರ್ನಾಟಕ ವಿರೋಧಿ ಬಜೆಟ್‌ : ಎಚ್‌ಸಿಎಂ ವ್ಯಂಗ್ಯ

ಬೆಂಗಳೂರು : ಹಣಕಾಸು ತಜ್ಞೆ ಅಲ್ಲದ ಕೇಂದ್ರದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ೯ನೇ ಕಳಪೆ ಬಜೆಟ್ ಇದಾಗಿದೆ.…

6 hours ago