ಮಂಡ್ಯ

ಅಧಿಕಾರ ಹಂಚಿಕೆ ಚರ್ಚೆ : ಹೈಕಮಾಂಡ್‌ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ; ಸಚಿವ ಚಲುವರಾಯಸ್ವಾಮಿ

ಮದ್ದೂರು : ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಯನ್ನು ಪಕ್ಷದ ಹೈಕಮಾಂಡ್ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಸೂಕ್ತ ನಿರ್ಧಾರವನ್ನು ಕೈಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ತಾಲ್ಲೂಕಿನ ಕೊಪ್ಪ ಹೋಬಳಿಯ ಕೌಡ್ಲೆ ಗ್ರಾಮದಲ್ಲಿ ೫೦ ಲಕ್ಷ ರೂ. ವೆಚ್ಚದ ಪಶು ಚಿಕಿತ್ಸಾ ಕೇಂದ್ರದ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜ್ಯದ ಹೈಕಮಾಂಡ್‌ಗಳಾಗಿದ್ದು, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕ, ವೇಣುಗೋಪಾಲ್, ಸುರ್ಜೆವಾಲಾ ರಾಷ್ಟ್ರ ಮಟ್ಟದ ಹೈಕಮಾಂಡ್‌ಗಳಾಗಿದ್ದಾರೆ. ಯಾವುದೇ ಗೊಂದಲವಿಲ್ಲದೆ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನು ಓದಿ: ನಾನೂ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ : ಶಾಸಕ ಬೇಳೂರು ಗೋಪಾಲಕೃಷ್ಣ

ವಿರೋಧ ಪಕ್ಷದವರು ಯಾವುದೇ ವಿಚಾರಗಳಿಲ್ಲದ ಕಾರಣ ಇಲ್ಲಸಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅವರೆಲ್ಲರ ಅನಿಸಿಕೆಗಳು ಹುಸಿಯಾಗಲಿವೆ ಎಂದು ಹೇಳಿದರು.

ಮೆಕ್ಕೆಜೋಳ ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡದ ಕಾರಣ ಹಲವು ಸಮಸ್ಯೆಗಳಿಗೆ ಕಾರಣವಾಗಿದ್ದು ಇದರ ಜತೆಯಲ್ಲಿಯೇ ರಾಜ್ಯ ಸರ್ಕಾರ ರೈತರಿಗೆ ಪರಿಹಾರ ಹಣ ನೀಡುವುದರ ಜತೆಗೆ ಕೆಎಂಎಫ್ ಮೂಲಕ ಒಂದು ಲಕ್ಷ ಟನ್ ಮೆಕ್ಕೆಜೋಳವನ್ನು ಖರೀದಿ ಮಾಡಲು ಕ್ರಮ ವಹಿಸಿದೆ. ಡಿಸ್ಟಲರಿಗೆ ೮ ಲಕ್ಷ ರೂ. ಖರೀದಿಗೂ ಮುಂದಾಗಿದ್ದು ಕೇಂದ್ರ ಸರ್ಕಾರ ಯಾವುದೇ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.

ತಾ.ಪಂ. ಉಪಾಧ್ಯಕ್ಷ ಬಿ.ಎಂ.ರಘು, ಗ್ರಾ.ಪಂ.ಅಧ್ಯಕ್ಷ ಜಿ.ಮನು, ಉಪಾಧ್ಯಕ್ಷೆ ರತ್ನಮ್ಮ, ಸದಸ್ಯರಾದ ಅಂಜನಾಕುಮಾರಿ, ಮಹಾಲಕ್ಷಿ , ಲೋಕೇಶ್, ಪುಟ್ಟಸ್ವಾಮಿ, ಇಂದ್ರಮ್ಮ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ದಿವಾಕರ್, ಮುಖಂಡರಾದ ಕುಮಾರ್ ಕೊಪ್ಪ, ಕ್ರಾಂತಿ ಸಿಂಹ, ಶ್ರೀನಿವಾಸ್, ಕರಿಗೌಡ, ರಘುನಂದನ್, ಪಶು ಸಂಗೋಪನೆ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ಡಾ.ಶಿವಲಿಂಗಯ್ಯ, ಸಹಾಯಕ ನಿರ್ದೇಶಕ ಡಾ.ಗೋವಿಂದು, ವೈದ್ಯರಾದ ಶ್ರೀನಿವಾಸ್, ಕಾರ್ತಿಕ್, ಇತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

4 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

4 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

4 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

4 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

4 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago