ಮಂಡ್ಯ

ನಾಳೆ ನಡೆಯಬೇಕಿದ್ದ ಸೀಮಂತ ಕಾರ್ಯಕ್ರಮ : ಇಂದು ಗರ್ಭಿಣಿ ಅನುಮಾನಾಸ್ಪದ ಸಾವು

ಮದ್ದೂರು: ತುಂಬು ಗರ್ಭಿಣಿಯೊಬ್ಬರು ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ಮದ್ದೂರು ಪಟ್ಟಣದ ಚನ್ನೇಗೌಡ ಬಡಾವಣೆಯಲ್ಲಿ ಶನಿವಾರ ಬೆಳಗಿನ ಜಾವ ಜರುಗಿದೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಕಾಮಗೆರೆ ನಿವಾಸಿಗಳಾದ ಚಂದನ್ ಗೌಡ (24) ಹಾಗೂ ಆಶಾ (19) ಇಬ್ಬರು ಪ್ರೇಮಿಗಳು ಕಳೆದ ಒಂದುವರೆ ವರ್ಷದ ಹಿಂದೆ ಕುಟುಂಬದವರ ವಿರೋಧದ ನಡುವೆಯೂ ಪ್ರೀತಿಸಿ ಮದುವೆಯಾಗಿದ್ದರು.

ಬಳಿಕ ಚಂದನ್ ಗೌಡ ಎಳೆ ನೀರು ವ್ಯಾಪಾರ ಮಾಡಿಕೊಂಡು ಮದ್ದೂರು ಪಟ್ಟಣದ ಚನ್ನೆಗೌಡ ಬಡಾವಣೆಯಲ್ಲಿ ಬಾಡಿಗೆ ಮನೆಯಲ್ಲಿ ಇಬ್ಬರು ವಾಸವಾಗಿದ್ದರು.

ನಾಳೆ ಭಾನುವಾರ ಪತ್ನಿ ಆಶಾಗೆ ಸೀಮಂತ ಕಾರ್ಯಕ್ರಮವನ್ನು ಮಾಡಲು ತಯಾರಿ ಕೂಡ ನಡೆಸಲಾಗಿತ್ತು. ಆದರೆ, ವೇಲ್ ನಿಂದ ತುಂಬು ಗರ್ಭಿಣಿ ಪತ್ನಿಯ ಕುತ್ತಿಗೆಗೆ ಬಿಗಿದ ಸ್ಥಿತಿಯಲ್ಲಿ ಶವ ಕಂಡು ಬಂದಿದೆ.

ಬಳಿಕ ಪತಿ ಚಂದನ್ ಗೌಡ ತನ್ನ ಪತ್ನಿ ಕುಟುಂಬದವರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೋಷಕರು ಪತಿ ಚಂದನ್ ಗೌಡ ವಿರುದ್ಧ ಅನುಮಾನ ವ್ಯಕ್ತಪಡಿಸಿದ್ದಾರೆ.

ಪಟ್ಟಣದ ಪೊಲೀಸ್‌ ಪತಿಯನ್ನು ವಷಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ. ಈ ಸಂಬಂಧ ಮದ್ದೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಈ ಸಂಬಂಧ ಪೋಷಕರು ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಮದ್ದೂರು ಪೋಲೀಸ್ ಇನ್ಸ್ಪೆಕ್ಟರ್ ಶಿವಕುಮಾರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಶವವನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಆಂದೋಲನ ಡೆಸ್ಕ್

Recent Posts

ಮಲ್ಲಯ್ಯನಪುರ ಗುಡ್ಡದಲ್ಲಿ ಥೋರಿಯಂ ಖನಿಜ ನಿಕ್ಷೇಪ ಪತ್ತೆ

ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ…

3 hours ago

ಓದುಗರ ಪತ್ರ: ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಸ್ಥಳಾಂತರಿಸಿ

ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಮೈಸೂರು -ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಖಾಸಗಿ ಕಟ್ಟಡದ ಎರಡನೇ…

4 hours ago

ಓದುಗರ ಪತ್ರ: ಕಾಣಿಕೆ ದುರುಪಯೋಗ ತಡೆಗೆ ಸರ್ಕಾರ ಮುಂದಾಗಲಿ

ಅಯೋಧ್ಯೆಯ ರಾಮ ಮಂದಿರವೂ ಸೇರಿದಂತೆ ದೇಶದ ವಿವಿಧ ದೇವಾಲಯಗಳಲ್ಲಿ ಕಾಣಿಕೆ ಹಣ, ದೇವರಿಗೆ ಭಕ್ತರು ಕಾಣಿಕೆ ರೂಪದಲ್ಲಿ ಸಲ್ಲಿಸುವ ಚಿನ್ನಾಭರಣಗಳು…

4 hours ago

ಓದುಗರ ಪತ್ರ: ಮರದ ಕೆಳಗಿರುವ ವಿದ್ಯುತ್ ಕೇಬಲ್ ತೆರವುಗೊಳಿಸಿ

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದವರು ಮೈಸೂರು ನಗರದ ವಿವಿಧೆಡೆ ಭೂಗತ ಕೇಬಲ್‌ಗಳನ್ನು ಅಳವಡಿಸುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಸೆಸ್ಕ್ ಯುಜಿ ಕೇಬಲ್…

4 hours ago

ಝೆನ್‌ ಕತೆಗಳು: ಸೀಜೋಳ ನಿಜವಾದ ಆತ್ಮ ಯಾವುದು?

ಸಂಗ್ರಹ ಮತ್ತು ಅನುವಾದ ಚೇತನಾ ತೀರ್ಥಹಳ್ಳಿ  ಚೋಕನ್ ಎಂಬವನಿಗೆ ಸೀಜೋ ಎಂಬ ಸುಂದರ ಮಗಳಿದ್ದಳು. ಚೋಕನ್ ತನ್ನ ದೂರದ ಸಂಬಂಧಿಯಾದ…

4 hours ago

ಎಸ್‌ಐಆರ್: ಶೇ.64.09ರಷ್ಟು ನಮೂನೆಗಳ ವಿತರಣೆ

ನವೀನ್ ಡಿಸೋಜ ಕೊಡಗಿನಲ್ಲಿ ಒಟ್ಟು ೪,೬೮,೬೫೭ ಮತದಾರರ ಪೈಕಿ ೩,೦೦,೩೬೯ ಮಂದಿಗೆ ನಮೂನೆ ವಿತರಣೆ; ೯,೧೨೫ ನಮೂನೆಗಳ ಡಿಜಿಟಲೀಕರಣ ಮಡಿಕೇರಿ:…

4 hours ago