ಶ್ರೀರಂಗಪಟ್ಟಣ : ಕಿಲ್ಕಾರಿಯು ಗರ್ಭಿಣಿ, ಬಾಣಂತಿಯರಿಗೆ ಅನುಕೂಲವಾಗುವ ಮೊಬೈಲ್ ಆಧಾರಿತ ಉಚಿತ ಆರೋಗ್ಯ ಸೇವೆಯಾಗಿದ್ದು, ಗರ್ಭಿಣಿ,ಬಾಣಂತಿಯರು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಬೆನ್ನೂರ ಹೇಳಿದರು.
ತಾಲ್ಲೂಕಿನ ಬೆಳಗೊಳ ಗ್ರಾಮದ ಹಿರಿದೇವಿ ಬಡಾವಣೆಯ 3 ನೇಯ ಅಂಗನವಾಡಿ ಕೇಂದ್ರದಲ್ಲಿ ಜರುಗಿದ ಲಸಿಕಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಗರ್ಭಿಣಿ, ಬಾಣಂತಿಯರನ್ನು ಉದ್ದೇಶಿಸಿ ಮಾತನಾಡಿದರು.
ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಸಹಭಾಗಿತ್ವದಲ್ಲಿ ಜಾರಿಗೊಳಿಸಲಾಗಿರುವ ಕಿಲ್ಕಾರಿ ಮೊಬೈಲ್ ಕರೆ ಸೇವೆ ಗರ್ಭಿಣಿಯರಿಗೆ ಗರ್ಭಧಾರಣೆ, ಹೆರಿಗೆ ಮತ್ತು ಮಕ್ಕಳ ಆರೈಕೆ ಬಗ್ಗೆ ಶಿಕ್ಷಣ ನೀಡಲು ಮೊಬೈಲ್ ಆಧಾರಿತ ಸೇವೆಯಾಗಿದೆ. ತಾಯಂದಿರು ಗರ್ಭಾವಸ್ಥೆಯಲ್ಲಿ ಮತ್ತು ಶೈಶಾವಸ್ಥೆಯಲ್ಲಿ ಅನುಸರಿಸಬೇಕಾದ ನಡಾವಳಿಗಳು ಮತ್ತು ಅಭ್ಯಾಸಗಳ ಬಗ್ಗೆ ತಿಳಿಸುವಂತದ್ದಾಗಿರುತ್ತದೆ ಎಂದು ತಿಳಿಸಿದರು.
ಅರೋಗ್ಯದ ಬಗ್ಗೆ ಮಾಹಿತಿಯನ್ನು ನೇರವಾಗಿ ಕುಟುಂಬಗಳ ಮೊಬೈಲ್ ಫೋನ್ ಗಳಿಗೆ ತಲುಪಿಸುವ ಭಾರತ ಸರ್ಕಾರದ ಉಚಿತ ಮೊಬೈಲ್ ಸೇವೆ ಆಗಿದೆ ಆದ್ದರಿಂದ ಗರ್ಭಿಣಿ, ಬಾಣಂತಿಯರು ಕಿಲ್ಕಾರಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ಸಲಹೆ ನೀಡಿದರು.
ಈ ವೇಳೆ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಟಿ.ಟಿ.ಜ್ಯೋತಿ, ಅಂಗನವಾಡಿ ಕಾರ್ಯಕರ್ತೆ ಸುನಿತಾ, ಆಶಾ ಕಾರ್ಯಕರ್ತೆ ಜಯಂತಿ, ಸಾವಿತ್ರಿ ಹಾಗೂ ಗರ್ಭಿಣಿಯರು, ಬಾಣಂತಿಯರು,ಮಕ್ಕಳ ತಾಯಂದಿರರು ಉಪಸ್ಥಿತರಿದ್ದರು.
ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…
ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…
ದಿಸ್ಪುರ್: ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…
ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…
ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…