ಮಂಡ್ಯ

ಗರ್ಭಿಣಿಯರು,ಬಾಣಂತಿಯರು ಕಿಲ್ಕಾರಿ ಆರೋಗ್ಯ ಸೇವೆ ಪಡೆದುಕೊಳ್ಳಿ: ಬೆನ್ನೂರ್

ಶ್ರೀರಂಗಪಟ್ಟಣ : ಕಿಲ್ಕಾರಿಯು ಗರ್ಭಿಣಿ, ಬಾಣಂತಿಯರಿಗೆ ಅನುಕೂಲವಾಗುವ ಮೊಬೈಲ್ ಆಧಾರಿತ ಉಚಿತ ಆರೋಗ್ಯ ಸೇವೆಯಾಗಿದ್ದು, ಗರ್ಭಿಣಿ,ಬಾಣಂತಿಯರು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಬೆನ್ನೂರ ಹೇಳಿದರು.

ತಾಲ್ಲೂಕಿನ ಬೆಳಗೊಳ ಗ್ರಾಮದ ಹಿರಿದೇವಿ ಬಡಾವಣೆಯ 3 ನೇಯ ಅಂಗನವಾಡಿ ಕೇಂದ್ರದಲ್ಲಿ ಜರುಗಿದ ಲಸಿಕಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಗರ್ಭಿಣಿ, ಬಾಣಂತಿಯರನ್ನು ಉದ್ದೇಶಿಸಿ ಮಾತನಾಡಿದರು.

ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಸಹಭಾಗಿತ್ವದಲ್ಲಿ ಜಾರಿಗೊಳಿಸಲಾಗಿರುವ ಕಿಲ್ಕಾರಿ ಮೊಬೈಲ್ ಕರೆ ಸೇವೆ ಗರ್ಭಿಣಿಯರಿಗೆ ಗರ್ಭಧಾರಣೆ, ಹೆರಿಗೆ ಮತ್ತು ಮಕ್ಕಳ ಆರೈಕೆ ಬಗ್ಗೆ ಶಿಕ್ಷಣ ನೀಡಲು ಮೊಬೈಲ್ ಆಧಾರಿತ ಸೇವೆಯಾಗಿದೆ. ತಾಯಂದಿರು ಗರ್ಭಾವಸ್ಥೆಯಲ್ಲಿ ಮತ್ತು ಶೈಶಾವಸ್ಥೆಯಲ್ಲಿ ಅನುಸರಿಸಬೇಕಾದ ನಡಾವಳಿಗಳು ಮತ್ತು ಅಭ್ಯಾಸಗಳ ಬಗ್ಗೆ ತಿಳಿಸುವಂತದ್ದಾಗಿರುತ್ತದೆ ಎಂದು ತಿಳಿಸಿದರು.

ಅರೋಗ್ಯದ ಬಗ್ಗೆ ಮಾಹಿತಿಯನ್ನು ನೇರವಾಗಿ ಕುಟುಂಬಗಳ ಮೊಬೈಲ್ ಫೋನ್ ಗಳಿಗೆ ತಲುಪಿಸುವ ಭಾರತ ಸರ್ಕಾರದ ಉಚಿತ ಮೊಬೈಲ್ ಸೇವೆ ಆಗಿದೆ ಆದ್ದರಿಂದ ಗರ್ಭಿಣಿ, ಬಾಣಂತಿಯರು ಕಿಲ್ಕಾರಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ಸಲಹೆ ನೀಡಿದರು.

ಈ ವೇಳೆ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಟಿ.ಟಿ.ಜ್ಯೋತಿ, ಅಂಗನವಾಡಿ ಕಾರ್ಯಕರ್ತೆ ಸುನಿತಾ, ಆಶಾ ಕಾರ್ಯಕರ್ತೆ ಜಯಂತಿ, ಸಾವಿತ್ರಿ ಹಾಗೂ ಗರ್ಭಿಣಿಯರು, ಬಾಣಂತಿಯರು,ಮಕ್ಕಳ ತಾಯಂದಿರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

1 hour ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

3 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

4 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

6 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

12 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

18 hours ago