ಮಂಡ್ಯ

60 ಎಕರೆ ಪ್ರದೇಶದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಸಿದ್ಧತೆ: ಪಿ ಎಂ ನರೇಂದ್ರ ಸ್ವಾಮಿ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರ್ 20, 21, 22 ರಂದು ಮೂರು ದಿನಗಳ ಕಾಲ ಜಿಲ್ಲೆಯಲ್ಲಿ ನಡೆಯಲಿದ್ದು, ಸಮ್ಮೇಳನವನ್ನು ಸ್ಯಾಂಜೋ ಆಸ್ಪತ್ರೆ ಹಿಂಭಾಗವಿರುವ 60 ಎಕರೆ ಪ್ರದೇಶದಲ್ಲಿ ನಡೆಸಲು ಸಜ್ಜುಗೊಳಿಸಲಾಗುತ್ತಿದೆ ಎಂದು ಮಳವಳ್ಳಿ ವಿಧಾನಸಭಾ ಶಾಸಕ ಹಾಗೂ ವೇದಿಕೆ ಸಮಿತಿಯ ಅಧ್ಯಕ್ಷ ಪಿ ಎಂ ನರೇಂದ್ರಸ್ವಾಮಿ ಹೇಳಿದರು.

ಅವರುಶುಕ್ರವಾರ ಸಂಜೆ ಸ್ಯಾಂಜೋ ಆಸ್ಪತ್ರೆಯ ಹಿಂಭಾಗ ಕನ್ನಡ ಸಾಹಿತ್ಯ ಸಮ್ಮೇಳನದ ಬಗ್ಗೆ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದರು.

ನಗರದ ಅಮರಾವತಿ ಹೋಟೆಲ್ ಹಾಗೂ ಸ್ಯಾಂಜೋ ಆಸ್ಪತ್ರೆ ಹಿಂಭಾಗ ಕನ್ನಡ ಸಾಹಿತ್ಯ ಸಮ್ಮೇಳನವು ಸುಮಾರು 60 ಎಕರೆ ಪ್ರದೇಶದಲ್ಲಿ ನಡೆಯಲಿದ್ದು, ಮುಖ್ಯ ಪ್ರವೇಶ ದ್ವಾರದಿಂದ ವೇದಿಕೆಯವರೆಗೂ ಸಿದ್ಧತೆ ನಡೆದಿದೆ. ಮುಖ್ಯದ್ವಾರದ ಬಳಿ ನೋಂದಣಿ ಕೌಂಟರ್ ಅನ್ನು ತೆರೆಯಲಾಗುವುದು ಎಂದರು.

ಸರ್ಕಾರ, ಜಿಲ್ಲಾಡಳಿತ ಹಾಗೂ ಜಿಲ್ಲೆಯಲ್ಲಿ ಎಲ್ಲಾ ಜನರೊಡಗೂಡಿ ಕನ್ನಡ ಸಾಹಿತ್ಯ ಸಮ್ಮೇಳನದ ಮೆರಗನ್ನು ಹೆಚ್ಚಿಸುವ ಸಲುವಾಗಿ ಯಾವುದೇ ಉದಾಸೀನ ತೋರದೆ ಜವಾಬ್ದಾರಿಯಿಂದ ಎಲ್ಲರೂ ಒಗ್ಗೂಡಿ ಕನ್ನಡದ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದರು.

ಸಮ್ಮೇಳನದ ವೇದಿಕೆ ಸಮ್ಮೇಳನದಲ್ಲಿ 600 ಅಡಿ ಉದ್ದ ಹಾಗೂ 300 ಅಡಿ ಅಗಲದಲ್ಲಿ ಮುಖ್ಯ ವೇದಿಕೆ ನಿರ್ಮಾಣಗೊಳ್ಳುತ್ತಿದೆ. ಸುಮಾರು 35, 000 ರಿಂದ 40,000 ಜನ ಸಭಿಕರು ಕೂರಲು ವ್ಯವಸ್ಥೆ ಮಾಡಲಾಗಿದೆ. ಅದಲ್ಲದೆ 2 ಸಮಾನಂತರ ವೇದಿಕೆಯನ್ನು 11,000 ಚದರ ಅಡಿ ಸ್ಥಳದಲ್ಲಿ ನಿರ್ಮಿಸಲಾಗುವುದು.

ಮಳಿಗೆ: ಮುಖ್ಯ ವೇದಿಕೆಯ ಬಲಭಾಗ ಕನ್ನಡ ಆಸಕ್ತರಿಗಾಗಿ ಪುಸ್ತಕ ಮಳಿಗೆಯನ್ನು ತೆರೆಯಲಾಗುವುದು. ಎಡಭಾಗಕ್ಕೆ ಇಲಾಖೆಯ ವಸ್ತು ಪ್ರದರ್ಶನ ಮಳಿಗೆಗಳನ್ನು ಇಡಲಾಗುವುದು. ಒಟ್ಟು 1000 ಕ್ಕೂ ಹೆಚ್ಚು ಮಳಿಗೆಗಳಿಗೆ ಅವಕಾಶ ನೀಡಲಾಗಿದ್ದು, 450 ವಾಣಿಜ್ಯ ಮಳಿಗೆ ತೆರೆಯಲು ಅವಕಾಶ ನೀಡಲಾಗಿದೆ ಎಂದರು.

ಊಟದ ವ್ಯವಸ್ಥೆ: ಸಮ್ಮೇಳನಕ್ಕೆ ಆಗಮಿಸುವ ಪ್ರತಿಯೊಬ್ಬರಿಗೂ ಅಚ್ಚುಕಟ್ಟಾದ ಊಟದ ವ್ಯವಸ್ಥೆ ಕಲ್ಪಿಸಲಾಗಿದ್ದು, ಊಟದ ವ್ಯವಸ್ಥೆಯನ್ನು ವೇದಿಕೆಯ ಬಲಭಾಗದಲ್ಲಿ ಮಾಡಲಾಗುವುದು. ಡೈನಿಂಗ್ ಮತ್ತು ಅಡುಗೆಗೆ ಸುಮಾರು 2,64,000 ಅದರ ಅಡಿ ವ್ಯಾಪ್ತಿಯ ಪ್ರದೇಶವನ್ನು ಮೀಸಲಿಡಲಾಗಿದೆ. ಕುಡಿಯುವ ನೀರಿಗೆ ಈಗಾಗಲೇ ಪೈಪ್ಲೈನ್ ವ್ಯವಸ್ಥೆ ಅಳವಡಿಸಲು ಸಿದ್ಧತೆ ನಡೆಯುತ್ತಿದ್ದು, ಯಾವುದೇ ತೊಂದರೆಯಾಗುವುದಿಲ್ಲ ಎಂದರು.

ಸಮ್ಮೇಳನದ ಪೂರ್ಣ ಚಿತ್ರಣ ಪ್ರಕಟ ಡಿಸೆಂಬರ್ 2 ರಂದು ಕನ್ನಡ ಸಾಹಿತ್ಯ ಸಮ್ಮೇಳನದ ಸಂಪೂರ್ಣ ಚಿತ್ರಣವನ್ನು ಅಧಿಕೃತವಾಗಿ ಪ್ರಕಟ ಮಾಡಲಾಗುವುದು ಎಂದರು.

ಪಾರ್ಕಿಂಗ್ ವ್ಯವಸ್ಥೆ: ಸಮ್ಮೇಳನಕ್ಕೆ ಆಗಮಿಸುವ ಸಾರ್ವಜನಿಕ ವಾಹನ ನಿಲುಗಡೆಗೆ ಪ್ರತ್ಯೇಕವಾಗಿ ಸುಮಾರು 20 ಎಕರೆ ಪ್ರದೇಶವನ್ನು ಮೀಸಲಿಡಲಾಗಿದೆ. ಸಮ್ಮೇಳನಕ್ಕೆ ಆಗಮಿಸುವ ಗಣ್ಯರಿಗೆ ವೇದಿಕೆಯ ಬಲಭಾಗ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಎಂದರು.

ಶೌಚಾಲಯ ವ್ಯವಸ್ಥೆ: ಸಮ್ಮೇಳನದಲ್ಲಿ ಭಾಗವಹಿಸುವವರಿಗೆ ಸುಮಾರು 9 ಕಡೆ ಪುರುಷ ಹಾಗೂ ಮಹಿಳೆಯರಿಗೆ ಪ್ರತ್ಯೇಕವಾದ ಶೌಚಾಲಯದ ವ್ಯವಸ್ಥೆ ಮಾಡಲಾಗುವುದು. ಜನರಿಗೆ ಎಲ್ಲಾ ಮಾಹಿತಿ ಒದಗಿಸಲು ಸೂಚನಾ ಪಲಕಗಳನ್ನು ಅಳವಡಿಸಲಾಗುವುದು ಎಂದರು.

ಸಮ್ಮೇಳನದ ಯಶಸ್ವಿಗೆ ಎಲ್ಲರ ಸಹಕಾರ ಮುಖ್ಯವಾಗಿದ್ದು, ಯಾವುದೇ ಕೊರತೆ ಉಂಟಾಗದ ರೀತಿಯಲ್ಲಿ ಸಕಲ ಸಿದ್ಧತೆಯ ಮೂಲಕ ಕನ್ನಡ ಹಬ್ಬವನ್ನು ನೆರವೇರಿಸೋಣ ಎಂದರು.

ಪತ್ರಿಕಾ ಗೋಷ್ಠಿಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ನಿರ್ಮಲ ಎಸ್.ಹೆಚ್ ಸೇರಿದಂತೆ ಇನ್ನಿತರರು  ಉಪಸ್ಥಿತರಿದ್ದರು ‌

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದೂರ ಗ್ರಾಮಕ್ಕೆ ನಟ ಪ್ರಭುದೇವ ಭೇಟಿ

ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…

5 hours ago

ಸೌದಿ ಅರಾಮ್ಕೊ ತೈಲ ಕಂಪನಿಯ ಹೆಲಿಕಾಪ್ಟರ್‌ ಪತನ: 14 ಮಂದಿ ದುರ್ಮರಣ

ರಿಯಾಧ್:‌ ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್‌ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್‌…

6 hours ago

ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣ: ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…

7 hours ago

ಮೈಸೂರಿನ ಎರಡು ಪ್ರಮುಖ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಕರೆ: ಕೆಲಕಾಲ ಆತಂಕ ಸೃಷ್ಟಿ

ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್‌ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…

7 hours ago

ಜಮೀನಿನಲ್ಲಿ ಯುವತಿಗೆ ಹಾವು ಕಡಿತ

ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…

8 hours ago

ಸರಗೂರು: ಹುಲಿ ದಾಳಿಗೆ ಕರು ಬಲಿ

ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…

8 hours ago