ಮಂಡ್ಯ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ ಮಹೋತ್ಸವ ಕಾರ್ಯಕ್ರಮಕ್ಕೆ ಡಿಸೆಂಬರ್ 16 ರಂದು ಮಳವಳ್ಳಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ದೆಹಲಿಯ ಭದ್ರತಾ ವಿಭಾಗದ ಅಧಿಕಾರಿ ಧನಂಜಯ್ ಕುಮಾರ್, ಕೇಂದ್ರ ಗುಪ್ತಚರ ಅಧಿಕಾರಿಗಳಾದ ವಿಶಾಲ್ ಅವರ ನೇತೃತ್ವದಲ್ಲಿ ಇಂದು ಮಳವಳ್ಳಿ ಪುರಸಭೆ ಸಭಾಂಗಣದಲ್ಲಿ ಎಎಸ್ಎಲ್ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ ಕುಮಾರ ಮಳವಳ್ಳಿಯಲ್ಲಿ ನಿರ್ಮಾಣ ಮಾಡಿರುವ ಹೆಲಿಪ್ಯಾಡ್ ಸ್ಧಳದಲ್ಲಿ ಗ್ರೀನ್ ರೂಮ್, ಹೆಲಿಪ್ಯಾಡ್ ಸುತ್ತಾ ಬ್ಯಾರಿಕೇಡ್ ನಿರ್ಮಾಣ ಹಾಗೂ ರೆಡ್ ಕಾರ್ಪೆಟ್ ಹಾಕಲು ಅಗತ್ಯ ಕ್ರಮ ಕೈಗೊಳ್ಳಲು ಎಂದು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಅಗತ್ಯ ಕ್ರಮ ವಹಿಸಬೇಕು ಎಂದು ತಿಳಿಸಿದರು.
ಸನ್ಮಾನ್ಯ ರಾಷ್ಟ್ರಪತಿಗಳು ಬರುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಲೋಪದೋಷ ಎದುರಾಗದಂತೆ ನಾನಾ ಇಲಾಖೆಗಳ ಅಧಿಕಾರಿಗಳು ಸಮನ್ವಯತೆ ಸಾಧಿಸಬೇಕು.
ಕಾರ್ಯಕ್ರಮ ಸಂಪೂರ್ಣವಾಗಿ ಮುಗಿಯುವವರೆಗೂ ಎಲ್ಲಿಯೂ ವಿದ್ಯುತ್ ಸಂಪರ್ಕಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಸಿಸಿ ಕ್ಯಾಮೆರಾ ಅಳವಡಿಸಬೇಕು. ಹೆಲಿಪ್ಯಾಡ್ ಮತ್ತು ಕಾರ್ಯಕ್ರಮ ನಡೆಯುವ ಜಾಗಗಳಲ್ಲಿ ಅಗ್ನಿಶಾಮಕ ದಳದ ವಾಹನಗಳು ಇರುವಂತೆ ನೋಡಿಕೊಳ್ಳಬೇಕು ಎಂದು ಅವರು ತಿಳಿಸಿದರು.
ಇದನ್ನೂ ಓದಿ:-ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ : ಗ್ರಾ.ಪಂ ಮಾಜಿ ಅಧ್ಯಕ್ಷನ ವಿರುದ್ಧ ದೂರು
ಗಣ್ಯರು ಸಂಚರಿಸುವ ಮಾರ್ಗದ ರಸ್ತೆಗಳು ಸ್ವಚ್ಚತೆ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು. ಸುಸಜ್ಜಿತ ಆಂಬ್ಯುಲೆನ್ಸ್ ನೊಂದಿಗೆ ನುರಿತ ಆರೋಗ್ಯ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜಿಸಬೇಕು. ಉಪಹಾರ, ಕುಡಿಯುವ ನೀರು ಹಾಗೂ ಸ್ನಾಕ್ಸ್ ಗಳನ್ನು ನೀಡುವ ಮೊದಲು ಆಹಾರ ಸುರಕ್ಷತಾ ಅಧಿಕಾರಿಗಳಿಂದ ತಪಾಸಣೆ ಮಾಡಬೇಕು ಎಂದು ಅವರು ತಿಳಿಸಿದರು.
ವೇದಿಕೆ ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷ ಆಗದಂತೆ ಪ್ರೋಟೋಕಾಲ್ ನಿಯಮದಂತೆ ಕಾರ್ಯನಿರ್ವಹಿಸಬೇಕು ಎಂದು ಅವರು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದ ಮೂರ್ತಿ, ಜೆಎಸ್ ಎಸ್ ವಿದ್ಯಾಪೀಠದ ನಿರಂಜನ್ ಮೂರ್ತಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…
ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…