Mysore
27
light rain

Social Media

ಗುರುವಾರ, 13 ಆಗಸ್ಟ್ 2026
Light
Dark

ಪಕ್ಕದ ಊರಿಗೆ ಪೂಜೆಗೆ ಹೋಗಿದ್ದ ಅರ್ಚಕ ನಿಗೂಢವಾಗಿ ಶವವಾಗಿ ಪತ್ತೆ

ಮಂಡ್ಯ: ಪಕ್ಕದ ಊರಿಗೆ ಪೂಜೆಗೆಂದು ಹೋದ ಅರ್ಚಕ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ.

ಶ್ರೀರಂಗಪಟ್ಟಣದ ಮರಳಗಾಲ ಗ್ರಾಮದಲ್ಲಿ ಘಟನೆ ನಡೆದಿದ್ದು, ಸಿದ್ದಲಿಂಗಪ್ಪ ಎಂಬುವವರೇ ಮೃತ ಅರ್ಚಕರಾಗಿದ್ದಾರೆ. ಶೆಟ್ಟಿಹಳ್ಳಿ ಗ್ರಾಮಕ್ಕೆ ಪೂಜೆಗೆ ಹೋಗುತ್ತಿದ್ದೇನೆ ಎಂದು ಮನೆಯಲ್ಲಿ ಹೇಳಿ ಹೊರಟಿದ್ದ ಸಿದ್ದಲಿಂಗಪ್ಪ ಅವರ ಸ್ಕೂಟರ್‌ ಸಿಡಿಎಸ್‌ ನಾಲೆಯಲ್ಲಿ ತೇಳುತ್ತಿರುವುದನ್ನು ಕಂಡ ಗ್ರಾಮಸ್ಥರು, ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸಿದ್ದಲಿಂಗಪ್ಪ ಮೃತದೇಹ ಮೈಮೇಲೆ ಬಟ್ಟೆ ಇಲ್ಲದ ರೀತಿಯಲ್ಲಿ ನಾಲೆಯಲ್ಲಿ ಪತ್ತೆಯಾಗಿದೆ.

ಈ ಸಂಬಂಧ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

 

Tags:
error: Content is protected !!