ಮಂಡ್ಯ: ಜಿಲ್ಲೆಯ ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬಹುಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ ಮಾಡಿದರು.
ಶ್ರೀ ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ ಅವರು, ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಪ್ರತಿಮೆಗೆ ಪೂಜೆ ಸಲ್ಲಿಸಿದರು. ಈ ವೇಳೆ ನಿರ್ಮಲಾನಂದನಾಥ ಸ್ವಾಮೀಜಿ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಶ್ರೀ ಆದಿಚುಂಚನಗಿರಿ ಕ್ಷೇತ್ರದ ಶ್ರೀ ಗುರು ಭೈರವೈಕ್ಯ ಮಂದಿರ ಸುಮಾರು 80 ಕೋಟಿಗೂ ಅಧಿಕ ವೆಚ್ಚದಲ್ಲಿ ಭವ್ಯವಾಗಿ ನಿರ್ಮಿಸಲಾದ ಮಂದಿರ ಇದಾಗಿದೆ.




