ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ.23ರಂದು ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಮಠಕ್ಕೆ ಆಗಮಿಸಲಿದ್ದಾರೆ.
ಭೇಟಿಯ ವೇಳೆ ಪ್ರಧಾನಿ ಮೋದಿ ಶ್ರೀ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟನೆ ನೆರವೇರಿಸಲಿದ್ದಾರೆ. ಬಳಿಕ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ವಾರ್ಷಿಕ ಪಟ್ಟಾಭಿಷೇಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಶ್ರೀ ಕ್ಷೇತ್ರ ಆದಿಚುಂಚನಗಿರಿ ಹಾಗೂ ಧಾರ್ಮಿಕ ವಿಚಾರವಾಗಿ ಮೋದಿ ಭಾಷಣ ಮಾಡಲಿದ್ದಾರೆ.
ಕಳೆದ ನವೆಂಬರ್ನಲ್ಲಿ ಪ್ರಧಾನಿ ಮೋದಿ ಅವರು ಉಡುಪಿಗೆ ಭೇಟಿ ನೀಡಿದ್ದರು. ಅಲ್ಲಿ ಶ್ರೀಕೃಷ್ಣದ ದರ್ಶನ ಪಡೆದು ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠದ ವತಿಯಿಂದ ಆಯೋಜಿಸಿದ್ದ ಲಕ್ಷ ಕಂಠ ಗೀತ ಪಾರಾಯಣ ಬೃಹತ್ ಗೀತೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…
ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…